ಕಲಬುರಗಿ | ʼಕುರುಬರು ಬಿಜೆಪಿ, ಕಾಂಗ್ರೆಸ್ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲʼ

Date:

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುರುಬರು ಬಿಜೆಪಿ ಕಾಂಗ್ರೆಸ್ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದ ಮಹತ್ತರ ಬೇಡಿಕೆ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಮಾನವಿಯತೆ ದೃಷ್ಟಿಯಿಂದ ನಮ್ಮ ಸಮಾಜವನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂತಣಿಯ ಪರಮ ಪೂಜ್ಯರಾದ ಸಿದ್ದರಮಾನಂದ ಶ್ರೀಗಳು ಆಗ್ರಹಿಸಿದ್ದಾರೆ.

ಚಿತ್ತಾಪುರ ಪಟ್ಟಣದ ಕನಕ ಭವನದಿಂದ ಪ್ರಾರಂಭವಾದ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎಂದು ನಡೆಸಿದ ಹೋರಾಟವು ಲಾಡ್ಜಿಂಗ್ ಕ್ರಾಸ್ ಮಾರ್ಗವಾಗಿ ತಹಸೀಲ್ದಾರ್‌ ಕಛೇರಿಗೆ ತಲುಪಿದ ನಂತರ ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗೊಂಡ್ ಪರ್ಯಾಯ ಪದದಲ್ಲಿ ಅನೇಕ ಪದಗಳಿವೆ ಅದರಲ್ಲಿ ʼಕುರುಬʼ ಪದ ಒಂದಾಗಿದ್ದು ನಮ್ಮ ಸಮಾಜವನ್ನು 1936ರಲ್ಲಿ ರಾಣಿ ಎಲಿಜಬೆತ್ ಮತ್ತು 1950ರಲ್ಲಿ  ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಎಸ್‌ಟಿ ಪಟ್ಟಿಯಲ್ಲಿ ಪರಿಗಣಿಸಿದ್ದಾರೆ. ಆದರೆ, ಇಲ್ಲಿನ ಆಡಳಿತ ಪಕ್ಷಗಳು ನಮ್ಮ ಸಮಾಜದವರನ್ನು ಕೇವಲ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಸಮಾಜದವರು ಯಾವ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದವರನ್ನು ಮಾನವೀಯತೆ ದೃಷ್ಟಿಯಿಂದ ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದ ಅವರು, ತಹಸೀಲ್ದಾರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ಸಮಾಜದ ಬಾಂಧವರು ಮಾನವ ಸರಪಳಿ ನಿರ್ಮಿಸಿ ಟಾಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಗೊಂಡ್ ಪರ್ಯಾಯ ಪದ ʼಕುರುಬʼ ಪದವನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಪ್ರತಿಭಟನೆ ನಡೆಸಿದರು. ಲಾಡ್ಜಿಂಗ್ ಕ್ರಾಸ್ ಹತ್ತಿರ ರಸ್ತೆ ತಡೆ ನಡೆಸಿ, ಕುರಿಗಳನ್ನು ತಂದು ಹೋರಾಟ ಮುಂದುವರಿಸಲು ಸಮಾಜದವರು ವಿಳಂಬ ಮಾಡುತ್ತಿರುವಾಗ ಹೋರಾಟ ಮಾಡಲು ನೀಡಿರುವ ಸಮಯ ಮೀರುತ್ತಿದೆ ಬೇಗನೆ ಹೋರಾಟವು ತಹಸೀಲ್ದಾರ್ ಕಛೇರಿಯತ್ತ ಸಾಗಲಿ ಎಂದು ಪೊಲೀಸರು ತಿಳಿಸಿದಾಗ ನಮ್ಮ ಹಕ್ಕನ್ನು ಪಡೆಯಲು ನಡೆಸಿದ ಸಮಾಜದ ಹೋರಾಟವನ್ನು ಪೊಲೀಸ್ ಇಲಾಖೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಪೊಲೀಸ್ ಇಲಾಖೆಯ ವಿರುದ್ಧ ದಿಕ್ಕಾರ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಚಿಕ್ಕ ಲಿಂಗ ಬೀರ ದೇವರು ಮಾತನಾಡಿ, ಜಿಲ್ಲಾ ಗೊಂಡ್ ಕುರುಬ ಸಮಾಜದ ಅಧ್ಯಕ್ಷ ಮಹಾಂತೇಶ ಕೌಲಗಿ, ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ, ತಾಲೂಕ ಅಧ್ಯಕ್ಷ ಬಸವರಾಜ ಪೂಜಾರಿ ಹೊಸಳ್ಳಿ, ತಾಲೂಕ ಕಾರ್ಯದರ್ಶಿ ಮಲ್ಲಿಕಾರ್ಜುನ ಟಿ. ಪೂಜಾರಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಸವರಾಜ್ ಪೂಜಾರಿ ಮೊಗಲಾ, ಪ್ರಭು ಗಂಗಾಣಿ, ಯಲ್ಲಾಲಿಂಗ ಪೂಜಾರಿ, ಜುಮಣ್ಣಾ ಪೂಜಾರಿ, ಸಿದ್ದು ಪೂಜಾರಿ ವಾಡಿ, ಜಗನ್ನಾಥ್ ಪೂಜಾರಿ ಆಲೂರ್, ನಾಗೇಶ್, ಬೀರಲಿಂಗ ಪೂಜಾರಿ, ಭೋಜು ಶೇರಿ, ಬಸವರಾಜ ಪೂಜಾರಿ, ಸಂತೋಷ್ ಪೂಜಾರಿ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಆನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...