ಕಲಬುರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಆರೋಪಿ ವಿರುದ್ಧ ದೇಶದ್ರೋಹದ ಕೇಸ್‌ ದಾಖಲಿಸಲು ಬೌದ್ಧ ಉಪಾಸಕರ ಸಂಘ ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರನ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬೌದ್ಧ ಉಪಾಸಕರ ಸಂಘ ಕಲಬುರಗಿ ಘಟಕ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ನಗರದ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಪೂರ್ಣ ರಸ್ತೆ ತಡೆದು ಪ್ರತಿಭಟನಾಕಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಮುಖಂಡ ದಿನೇಶ ದೊಡ್ಡಮನಿ ಮಾತನಾಡಿ, “ಅಕ್ಟೋಬರ್ 6ರಂದು ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ನಡೆದ ಈ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಶೂ ಎಸೆದ ಜಾತಿವಾದಿ ವಕೀಲ ರಾಕೇಶ್ ಕಿಶೋರನ ಕೃತ್ಯ ಒಬ್ಬ ವ್ಯಕ್ತಿಯದು ಮಾತ್ರವಲ್ಲ; ಇದರ ಹಿಂದೆ ಬಿಜೆಪಿ, ಆರ್‌ಎಸ್ಎಸ್ ಹಾಗೂ ಹಿಂದೂ ಸನಾತನವಾದಿಗಳೆಂದು ಹೇಳಿಕೊಳ್ಳುವ ಕ್ಷುದ್ರ ಶಕ್ತಿಗಳು ಇವೆ ಎಂಬ ಅನುಮಾನ ಉಂಟಾಗಿದೆ. ಈ ಘಟನೆಯ ಕುರಿತು ತೀವ್ರ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾನ್ಯ ಗವಾಯಿ ಅವರು ಧೈರ್ಯ ಕಳೆದುಕೊಳ್ಳಬಾರದು. ಅವರ ಹಿಂದೆ ದೇಶದ ಅಂಬೇಡ್ಕರ್‌ವಾದಿಗಳು, ಪ್ರಜಾಪ್ರಭುತ್ವವಾದಿಗಳು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ನಿಂತಿದ್ದಾರೆ. ಅವರ ಪ್ರಾಮಾಣಿಕ ನ್ಯಾಯ ಸೇವೆ ಮುಂದುವರಿಯಲಿ” ಎಂದು ಹೇಳಿದರು.

ಇದನ್ನೂ ಓದಿ: ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ಈ ಸಂದರ್ಭದಲ್ಲಿ ಅರ್ಜುನ ಭದ್ರೆ, ಮತೆಪ್ಪ ಹಳ್ಳಿ, ಆರ್ ಕೆ ಹುಡಗಿ, ಹಣಮಂತ್ರಾಯ ದೊಡ್ಡಮನಿ, ಹಣಮಂತ ಬೋಧನಕರ, ಎ ಬಿ ಹೊಸಮನಿ, ಸಂತೋಷ ಮೇಲಿನಮನಿ, ಸೂರ್ಯಕಾಂತ ನಿಂಬಾಳಕರ, ದೇವೇಂದ್ರ ಸಿಮೂರ, ಪ್ರಕಾಶ ಮೂಲಭಾರತಿ, ಅರ್ಜುನ ಗೊಬ್ಬುರ್, ಸೂರ್ಯಕಾಂತ ಅಜಾದಪುರ್, ಸುನೀಲ್ ಮಾಲ್ಪಡೆ, ಆರ್ ಜಿ ಶೆಟಗಾರ, ರಜು ಕಂಪನೂರ್, ಮಲ್ಲಪ ಹೊಸಮನಿ, ಸುರೇಶ್ ಹಾದಿಮನಿ ಹಾಗೂ ಅನಿಲ್ ತೆಂಗಳಿ, ಈಶ್ವರ ಮಲ್ಕುಡಕರ್, ದೀಲಿಪ್ ಕಾಯಂಕರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...