ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆತ: ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ

Date:

ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಖಂಡಿಸಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಮಂಗಳವಾರ ನಗರದ ತಿಮ್ಮಪುರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜ್ಞಾ ಕಾನೂನು ಸಲಹಾ ಸಮಿತಿ ಕಾರ್ಯದರ್ಶಿ ಕೆ ನೀಲಾ ಮಾತನಾಡಿ, “ಸಿಜೆಐ ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲೇ ಶೂ ಎಸೆದಿರುವ ಘಟನೆ ಅತ್ಯಂತ ಆಘಾತಕಾರಿ ಹಾಗೂ ಶೋಚನೀಯ ಘಟನೆಯಾಗಿದೆ. ಇದು ಖಂಡನಾರ್ಹ” ಎಂದರು.

“ಆರೋಪಿಯು ಸನಾತನ ಧರ್ಮ ಬೆಂಬಲಿಸುವ ಘೋಷಣೆಗಳನ್ನು ಕೂಗಿರುವುದು ಜಾತಿವಾದಿ ಮನೋಭಾವದ ಸ್ಪಷ್ಟ ಪ್ರತೀಕವಾಗಿದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ನಾಯಕರಿಂದ ಬಂದಿರುವ ಜಾತಿ ಮತ್ತು ಕೋಮುವಾದಿ ಹೇಳಿಕೆಗಳು ಇಂತಹ ದುಷ್ಕೃತ್ಯಗಳಿಗೆ ಧೈರ್ಯ ತುಂಬಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಘಟನೆ ಹಿಂದುತ್ವ ಕೋಮುವಾದಿ ಶಕ್ತಿಗಳು ಸಮಾಜಕ್ಕೆ ಮನುವಾದಿ ಮತ್ತು ಕೋಮು ವಿಷವನ್ನು ತುಂಬುತ್ತಿರುವ ಮತ್ತೊಂದು ಉದಾಹರಣೆ. ಇದು ಸಂಘ ಪರಿವಾರದ ಅಸಹಿಷ್ಣುತೆಯ ನಿಜರೂಪವನ್ನು ಬಯಲಿಗೆಳೆಯುತ್ತಿದೆ. ತಮ್ಮ ಸಿದ್ಧಾಂತಕ್ಕೆ ಹೊಂದದ ಧ್ವನಿಯನ್ನು ಸಹಿಸಿಕೊಳ್ಳದ ಮನೋಭಾವದಿಂದ ಪ್ರಜಾಪ್ರಭುತ್ವದ ಮೂಲ ಅಂಶವೇ ಅಪಾಯಕ್ಕೊಳಗಾಗಿದೆ” ಎಂದು ಹೇಳಿದರು.

“ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರವು ಸಂಪೂರ್ಣ ಭದ್ರತೆ ಒದಗಿಸಬೇಕು. ಅಸಹಿಷ್ಣುತೆಯನ್ನು ಉತ್ತೇಜಿಸುವ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವದ ನೆಲೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯದ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸಾಂವಿಧಾನಿಕ ಮೌಲ್ಯಗಳನ್ನು ಗಟ್ಟಿಗೊಳಿಸಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಲಿತ ಶಿಕ್ಷಕಿ ಕುಳಿತ ಕುರ್ಚಿಗಳನ್ನು ಸ್ವಚ್ಛಗೊಳಿಸಿದ ಸವರ್ಣೀಯರು; ಸಮೀಕ್ಷೆಯಲ್ಲಿ ಅಸ್ಪೃಶ್ಯತೆಯ ಕಹಿ ಅನುಭವಗಳು

ಈ ಸಂದರ್ಭದಲ್ಲಿ ಪ್ರಜ್ಞಾ ಕಾನೂನು ಸಲಹಾ ಸಮಿತಿ ಕಾರ್ಯದರ್ಶಿ ಕೆ ನೀಲಾ, ದಲಿತ ಹಕ್ಕುಗಳ ಸಮಿತಿ ಸಂಚಾಲಕ ಸುಧಾಮ ಧನ್ನಿ, ದೇವದಾಸಿ ಮಹಿಳಾ ವಿಮೋಚನಾ ಸಂಘದ ಅಧ್ಯಕ್ಷೆ ಚಂದಮ್ಮ ಗೋಳಾ, ಪಾಂಡುರಂಗ ಮಾವಿನಕರ, ಡಿವೈಎಫ್ಐ ಅಧ್ಯಕ್ಷ ಲವಿತ್ರ ವಸ್ತ್ರದ, ಡಾ. ಪ್ರಭು ಖಾನಾಪುರೆ, ಸಿಐಟಿಯು ಅಧ್ಯಕ್ಷೆ ಶಾಂತಾ ಘಂಟಿ, ಕೋದಂಡರಾಮಪ್ಪ, ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಸರ್ವೇಶ, ಇಮಾಮ್, ಕೈಲಾಶ, ಸಿದ್ದಪ್ಪ ಹೊಸಮನಿ, ಶಾಂತೇಶ ಹಾಗೂ ಮಲ್ಲಿಕಾರ್ಜುನ ಕಿಣ್ಣಿಸುಲ್ತಾನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...