ಕಲಬುರಗಿ | ಬಹುಜನ ಚಳವಳಿಯಿಂದ ಸಾಮಾಜಿಕ ಪರಿವರ್ತನೆ : ಹ.ರಾ.ಮಹೇಶ

Date:

ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಡಾ. ಹ.ರಾ.ಮಹೇಶ ಅವರಿಗೆ ತಮ್ಮ ವೃತ್ತಿ ಬದುಕಿಗೆ ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಅಭಿನಂದನಾ ಸಮಾರಂಭ ನಡೆಯಿತು.

ಹ.ರಾ.ಮಹೇಶ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ʼಪ್ರಸ್ತುತ ಸಮಾಜದಲ್ಲಿ ಯುವ ಜನಾಂಗ, ವಿದ್ಯಾರ್ಥಿ, ಸಮುದಾಯ, ಮಹಿಳಾ ಸಮುದಾಯದ ಅನೇಕ ಸಮಸ್ಯೆಗಳು ಎದುರಿಸುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಬಗ್ಗೆ ನಾವೆಲ್ಲರೂ ಯೋಚಿಸಬೇಕಾಗಿದೆ’ ಎಂದು ತಿಳಿಸಿದರು.

‘ಸಂವಿಧಾನ ಜಾರಿಯಾಗಿ 76 ವರ್ಷ ಕಳೆದರೂ ಸಮಾಜದಲ್ಲಿ ಬೇರೂರಿರುವ ಬಡತನ, ಹಸಿವು, ನಿರುದ್ಯೋಗ, ಮಹಿಳಾ ದೌರ್ಜನ್ಯಗಳಿಗೆ ಮುಕ್ತಿ ಸಿಕ್ಕಿಲ್ಲ. ನಮ್ಮನ್ನಾಳುವ ಸರ್ಕಾರಗಳು ಸಂವಿಧಾನ ಬದ್ಧವಾಗಿ ಆಡಳಿತ ನೀಡದ ಕಾರಣಕ್ಕೆ ದೇಶದಲ್ಲಿ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಆರ್ಥಿಕ ಅಸಮಾನತೆ, ಸಾಮಾಜಿಕ, ಅಸಮಾನತೆ ತೊಲಗಿಸಬೇಕಾದರೆ ಸಂವಿಧಾನ ಬದ್ಧವಾಗಿ ಆಡಳಿತ ಮಾಡುವ ಬಹುಜನ ಸಮಾಜ ಪಕ್ಷಕ್ಕೆ ನಾವೆಲ್ಲರೂ ಬಲ ನೀಡಬೇಕಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬಹುಜನ ಚಳುವಳಿ ಇನ್ನು ಸಕ್ರಿಯವಾಗಿ, ಬಲವಾಗಿ ಕಾರ್ಯನಿರ್ವಹಿಸಬೇಕಾದರೆ ನೌಕರರು, ವಿದ್ಯಾವಂತರು ಚಳುವಳಿಗಾಗಿ ತ್ಯಾಗ ಮನೋಭಾವ ಅಳವಡಿಸಿಕೊಳ್ಳಬೇಕಾಗಿದೆ. ರಾಜ್ಯದಲ್ಲಿ ಬಿಎಸ್ಪಿ ಪಕ್ಷ ಅಧಿಕಾರಕ್ಕೆ ತರುವ ಪ್ರಯತ್ನ ನನ್ನದಾಗಿದೆʼ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಲ್.ಆರ್.ಭೋಸಲೆ, ಮಹದೇವ ಧನ್ನಿ, ತಿಪ್ಪಣ್ಣ ಕಿನ್ನೂರು, ಮೈಲಾರಿ ಸೆಳ್ಳಗಿ, ಹುಚ್ಚಪ್ಪ ವಟ್ಟರ್, ಡಾ.ಅನಿಲ ಟೆಂಗಳಿ, ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷ ಆನಂದ ಮಸ್ಕಿ, ಶಿವಲೀಲಾ ಪಾಟೀಲ್ ಹಡಗಿಲ್, ಪ್ರಿಯಾಂಕಾ ಜಮಾದಾರ್, ಮಾಶಾಕ್ ಪಟೇಲ್‌ ಹಾಗೂ ಸಾಮಾಜಿಕ ಚಿಂತಕರು, ಕಾರ್ಯಕರ್ತರು ಭಾಗವಹಿಸಿದರು.

ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ತರುವ ಪ್ರಯತ್ನ ನನ್ನದು :

ಭಾರತೀಯ ಸಂವಿಧಾನದ ಆಶಯಗಳನ್ನು ಚಳವಳಿಯ ಮೂಲಕ ಜನರಿಗೆ ತಲುಪಿಸುವ ಮೂಲ ಉದ್ದೇಶದಿಂದ ನನ್ನ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಹುಜನ ಪಕ್ಷ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆʼ ಎಂದು ಸಾಮಾಜಿಕ ಚಿಂತಕ ಹ.ರಾ.ಮಹೇಶ ಹೇಳಿದರು.

ಉಪನ್ಯಾಸಕ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿ ಸಾಮಾಜಿಕ ಚಳುವಳಿಗಾಗಿ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡಲು ಪಣತೊಟ್ಟಿರುವ ಹ.ರಾ.ಮಹೇಶ ಅವರಿಗೆ ಶನಿವಾರ ಬೀದರ್‌ನಲ್ಲಿ ಜಿಲ್ಲಾ ಮೂಲಭಾರತೀಯ ಸಮಾಜದ ನೌಕರರ ವತಿಯಿಂದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

WhatsApp Image 2025 09 07 at 9.56.39 PM
ಬೀದರ್‌ನಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಚಿಂತಕ ಹ.ರಾ.ಮಹೇಶ ಅವರು ಮಾತನಾಡಿದರು.

ಸಮಾಜದಲ್ಲಿ ಗೌತಮ್ ಬುದ್ಧರ ಧಮ್ಮ ಚಿಂತನೆ ಬಿತ್ತುವುದು ಅತ್ಯಂತ ಅಗತ್ಯವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ವಂಚಿತರಾಗುತ್ತಿರುವ ಸಮುದಾಯಗಳನ್ನು ಮೇಲೆತ್ತುವ ಪ್ರಯತ್ನಕ್ಕೆ ನಾವೆಲ್ಲರೂ ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ಬದುಕು ಪೂರ್ತಿ ಚಳವಳಿಗಾಗಿ ಶ್ರಮಿಸಲು ಹೊರಟಿರುವ ನನಗೆ ಎಲ್ಲರ ಸಹಕಾರ ಅಗತ್ಯವಿದೆʼ ಎಂದು ತಿಳಿಸಿದರು.

WhatsApp Image 2025 09 07 at 9.19.58 AM

ಕಾರ್ಯಕ್ರಮದಲ್ಲಿ ಪ್ರಮುಖರಾದ ವಿಠಲದಾಸ್‌ ಪ್ಯಾಗೆ, ಪ್ರೇಮಸಾಗರ್ ದಾಂಡೇಕರ್, ರಾಜಕುಮಾರ ಗುನ್ನಳ್ಳಿ, ಶ್ಯಾಮಸುಂದರ್ ಖಾನಾಪುರಕರ, ಸುಮಂತ ಕಟ್ಟಿಮನಿ, ಸೂರ್ಯಕಾಂತ ಸಿಂಗೆ, ಮಹೇಶ ಗೊರನಾಳಕರ್‌, ಟಿ.ಆರ್.ದೊಡ್ಡೆ, ಮಹಾದೇವ ಕಾಂಬಳೆ, ಪಾಂಡುರಂಗ ಬೆಲ್ದಾರ್ ಸೇರಿದಂತೆ‌ ಸಾಮಾಜಿಕ ಚಿಂತಕರು, ಹೋರಾಟಗಾರರು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಕರ್ತವ್ಯ ಲೋಪ, ನಿರ್ಲಕ್ಷ್ಯತನ : ವೈದ್ಯೆ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...