ಕಲಬುರಗಿ | ಅತ್ತೆ ಮನೆಯಲ್ಲಿ ₹11 ಲಕ್ಷ ಕಳವು ಮಾಡಿದ ಅಳಿಯನ ಬಂಧನ

Date:

ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ.

ಕಾಳಗಿ ತಾಲ್ಲೂಕಿನ ಇವಣಿ ಗ್ರಾಮದ ಮೀನಪ್ಪ ರೇವಣಸಿದ್ದಪ್ಪ ಬೆನ್ನೂರ (38) ಬಂಧಿತ ಆರೋಪಿ. ಸಿದ್ದಮ್ಮ ಮಲ್ಲೇಶಪ್ಪ ರಟಕಲ್ ಅವರ ಮನೆಯ ಕಬ್ಬಿಣ ಪೆಟ್ಟಿಗೆಯಲ್ಲಿಟ್ಟಿದ್ದ ₹11 ಲಕ್ಷ ಕಳತನ ಮಾಡಿದ್ದ ಆರೋಪಿಯು, ಆಕೆಯ ತಮ್ಮನ ಮಗನಾಗಿದ್ದ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ₹1.70 ಲಕ್ಷ ಪಡೆದ ಮೀನಪ್ಪನ ತಮ್ಮ ಅನಿಲ್‌ನನ್ನು ಬಂಧಿಸಬೇಕಿದೆʼ ಎಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ತಿಳಿಸಿದ್ದಾರೆ.

ʼಪೊಲೀಸರು ಮೀನಪ್ಪನನ್ನು ಟೆಂಗಳಿ ಕ್ರಾಸ್‌ನಲ್ಲಿ ಹಿಡಿದು ವಿಚಾರಣೆಗೆ ಒಳಪಡಿಸಿದಾಗ, ಹಣದ ಆಸೆಗಾಗಿ ತಾನೇ ಕದ್ದಿದ್ದಾಗಿ ಒಪ್ಪಿಕೊಂಡಿದ್ದಾನೆ. ₹1.70 ಲಕ್ಷ ತನ್ನ ತಮ್ಮನಿಗೆ ನೀಡಿದ್ದಾಗಿ ಹೇಳಿದ್ದು, ಆತನನ್ನು ಸಹ ವಶಕ್ಕೆ ಪಡೆಯಬೇಕಿದೆ’ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 28ರಂದು ಸಿದ್ದಮ್ಮ (ಅತ್ತೆ) ಅವರೊಂದಿಗೆ ಹೊಲಕ್ಕೆ ಹೋದ ಮೀನಪ್ಪ, ಮಧ್ಯಾಹ್ನ ಹೊಲದಲ್ಲಿನ ಪೈಪ್‌ ಒಡೆದಿದೆ ಕಾಳಗಿ ಪಟ್ಟಣಕ್ಕೆ ತೆರಳಿ ತರುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದ. ಮಧ್ಯಾಹ್ನ 2ಗಂಟೆ ಸುಮಾರಿಗೆ ಮನೆಯ ಟ್ರಂಕ್‌ನಲ್ಲಿ ಇರಿಸಿದ್ದ ₹11 ಲಕ್ಷ ಕಳವು ಮಾಡಿದ್ದನು. ಬಳಿಕ ಆ ಹಣವನ್ನು ಇವಣಿ ಗ್ರಾಮದ ತನ್ನ ಮನೆಯಲ್ಲಿ ಇರಿಸಿದ್ದಾನೆʼ ಎಂದು ಹೇಳಿದರು.

ಡಿವೈಎಸ್‌ಪಿ ಶಂಕರಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಿಪಿಐ ಜಗದೇವಪ್ಪ ಪಾಳಾ ನೇತೃತ್ವದಲ್ಲಿ ಪಿಎಸ್‌ಐ ತಿಮ್ಮಯ್ಯ, ಸಿಬ್ಬಂದಿ ಗುಂಡಪ್ಪ, ಉಪ್ಪಳೇಪ್ಪ, ನಸೀರ್, ಹುಸೇನ್, ಆನಂದ, ಬಾಬುರಾವ್, ಸುರೇಶ, ಅರ್ಜುನರಾವ್, ಅಂಬರೀಷ್, ಸಂಗಮೇಶ, ಶಿವರಾಜ, ಬಸಪ್ಪ, ಮಂಜು ಅವರಿದ್ದ ತಂಡ ಆರೋಪಿಯನ್ನು ಬಂಧಿಸಿದೆ ಎಂದರು. ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರಶಂಸೆ ಪತ್ರಗಳನ್ನು ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...