ಕಲಬುರಗಿ | ಯುವಜನರಿಗೆ ನಿರಾಸೆ ಮೂಡಿಸಿದ ರಾಜ್ಯ ಬಜೆಟ್ : ಡಿವೈಎಫ್‌ಐ

Date:

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಶುಕ್ರವಾರ 4.09 ಲಕ್ಷ ಕೋಟಿ ರೂ. 2025-26ನೇ ಸಾಲಿನ 16ನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೆ ಯುವಜನರಿಗೆ ನಿರಾಸೆಯನ್ನು ಮೂಡಿಸಿದ ಬಜೆಟ್ ಆಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಅಧ್ಯಕ್ಷೆಯಾದ ಲವಿತ್ರ ವಸ್ತ್ರದ ತಿಳಿಸಿದರು.

ʼಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ರಾಜ್ಯದ ಯುವಜನತೆಯು ಮುಖ್ಯಮಂತ್ರಿಗಳು ಉದ್ಯೋಗ ನೀತಿ ಜಾರಿಗೊಳಿಸಿ ಉದ್ಯೋಗ ಭರವಸೆ ನೀಡುತ್ತಾರೆಂದು ಭಾವಿಸಿದ್ದರು, ಆದರೆ ಸಿಎಂ ಸಿದ್ರಾಮಯ್ಯನವರು ಮಂಡಿಸಿದ ದಾಖಲೆಯ 16ನೇ ಬಜೆಟ್ ರಾಜ್ಯದ ಯುವಜನರ ಬದುಕಿನ ಭದ್ರತೆಯ ಕುರಿತು ಯಾವುದೇ ಸ್ಪಷ್ಟ ಕಣ್ಣೋಟ ಹೊಂದಿಲ್ಲ ಎಂಬುದನ್ನು ಸಾಬೀತು ಪಡಿಸಿದೆʼ ಎಂದು ಸಂಘಟನೆಯ ಸದಸ್ಯರು ಆರೋಪಿಸಿದ್ದಾರೆ.

ʼಶಿಕ್ಷಣ ಇಲಾಖೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು ಎಂಬ ಒಂದಂಶ ಹೊರತುಪಡಿಸಿದರೆ, ರಾಜ್ಯ ಸರಕಾರದಡಿ ಖಾಲಿಯಿರುವ ಎರಡು ಲಕ್ಷ ಎಪ್ಪತ್ತು ಸಾವಿರ ಹುದ್ದೆಗಳ ಭರ್ತಿಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ರಾಜ್ಯಕ್ಕೆ ಅಗತ್ಯವಿರುವ ಯುವ ನೀತಿಯನ್ನೂ ಕೂಡ ಜಾರಿ ಮಾಡಲು ಮುಂದಾಗಿಲ್ಲ. ಇದು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಯುವಜನರಿಗೆ ಸಹಜವಾಗಿಯೇ ನಿರಾಸೆ ಮೂಡಿಸಿದ ಬಜೆಟ್ ಆಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ ತರಬೇತಿ ನೀಡುವ ಬಜೆಟ್ ಪ್ರಸ್ತಾವನೆಗಳು ಯುವಜನರ ಬದುಕಿಗೆ ಭದ್ರತೆ ಖಾತ್ರಿಪಡಿಸುವುದಿಲ್ಲ. ಉದ್ಯೋಗದ ಖಾತ್ರಿ ನೀಡದೇ ಕೇವಲ ಟ್ರೈನಿಂಗ್ ನೀಡುತ್ತೇವೆಂಬುದು ರಾಜ್ಯ ಸರಕಾರ ಉದ್ಯೋಗಕ್ಕಾಗಿ ಪರದಾಡುತ್ತಿರುವ ಯುವಜನರ ಬದುಕಿನ ಜೊತೆ ಚಲ್ಲಾಟವಾಡಿದಂತಾಗುತ್ತದೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ʼಸರಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ಯುವಜನ ಸಬಲೀಕರಣ ಕೇವಲ ಘೋಷಣೆಯಂತಿದೆ. ಕೌಶಲ್ಯ ಅಭಿವೃದ್ದಿ ತರಬೇತಿ ನೀಡುತ್ತೇವೆ ಎಂದು ಹೇಳುತ್ತಿದೆ. ಇದು ಕೇಂದ್ರ ಸರಕಾರದ ಬಜೆಟ್ ನಕಲಿನಂತೆ ಭಾಸವಾಗುತ್ತಿದೆ. ಏಕೆಂದರೆ ಕೇಂದ್ರ ಸರಕಾರವೂ ಕೂಡ ಕೌಶಲ್ಯಾಭಿವೃದ್ಧಿ ತರಬೇತಿಗೆ ಒತ್ತು ನೀಡಿತ್ತು. ಎಷ್ಟು ಜನರಿಗೆ ತರಬೇತಿ ಕೊಡಲಾಯ್ತು, ಆ ತರಬೇತಿ ಪಡೆದವರಲ್ಲಿ ಎಷ್ಟು ಜನರಿಗೆ ಉದ್ಯೋಗ ಒದಗಿಸಲಾಯಿತೆಂಬ ಮಾಹಿತಿ ಮಾತ್ರ ಸಿಗುವುದಿಲ್ಲ. ರಾಜ್ಯ ಸರಕಾರದ ಬಜೆಟ್ ಕೂಡ ಕೇಂದ್ರದ ದಾರಿಯಲ್ಲಿ ಸಾಗಿದ್ದು ಯುವಜನರಲ್ಲಿ ಭ್ರಮೆ ಹುಟ್ಟಿಸುವುದಾಗಿದೆʼ ಎಂದರು.

ರಾಜ್ಯದ ಯುವಜನತೆ ಸರಕಾರದ ಈ ಯುವಜನ ಹಾಗೂ ಜನಸಾಮನ್ಯರ ವಿರೋಧಿ ಬಜೆಟ್ ಅನ್ನು ತಿರಸ್ಕರಿಸಿ ಉದ್ಯೋಗ ಭದ್ರತೆ ಖಾತ್ರಿಪಡಿಸುವ ಯೋಜನೆಗಳನ್ನು ಜಾರಿಗೆ ತರಲು ಸರಕಾರ ಮುಂದಾಗುವಂತೆ ಒತ್ತಾಯಿಸಿ ಪ್ರತಿಭಟಿಸಲು ಡಿವೈಎಫ್ಐ ಜಿಲ್ಲಾ ಸಮಿತಿಯು ಕರೆ ನೀಡುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ!

ಈ ವೇಳೆಯಲ್ಲಿ ಸಂಘಟನೆಯ ಪ್ರಮುಖರಾದ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಗಿಡ್ಡಮ್ಮ ಪವಾರ, ಶಾಂತಕುಮಾರ ಗುಡುಬಾ ಸೇರಿದಂತೆ ಮತ್ತಿರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...