ಕಲಬುರಗಿ | ಬಿ.ಎಡ್. ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ

Date:

2024–25ನೇ ಸಾಲಿನ ಬಿ.ಎಡ್. ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ ಮೂಲ ಅಂಕಪಟ್ಟಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಎಡ್. ವಿದ್ಯಾರ್ಥಿಗಳ ಹೋರಾಟ ಸಮಿತಿ ಗುರುವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಸಾಗಿದ್ದು, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಹೋರಾಟ ಸಮಿತಿ ಸಂಚಾಲಕ ತೇಜಸ್ ಆರ್. ಇಬ್ರಾಹಿಂಪುರ ಮಾತನಾಡಿ, “ಗುಲಬರ್ಗಾ ವಿಶ್ವವಿದ್ಯಾಲಯದ ಅಡಿಯಲ್ಲಿ ಅನೇಕ ಬಿ.ಎಡ್. ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸಾವಿರಾರು ಪ್ರಶಿಕ್ಷಣಾರ್ಥಿಗಳು ಕಳೆದ ಹಲವು ತಿಂಗಳಿಂದ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಯಾವುದೇ ವೃತ್ತಿಪರ ಪದವಿ ಪರೀಕ್ಷೆಯ ಫಲಿತಾಂಶವನ್ನು 45 ದಿನಗಳಲ್ಲಿ ಪ್ರಕಟಿಸಬೇಕೆಂಬ ನಿಯಮವಿದ್ದರೂ ವಿಶ್ವವಿದ್ಯಾಲಯವು ನಿಯಮ ಉಲ್ಲಂಘಿಸಿದೆ,” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
501878

ಅವರು ಮುಂದುವರಿದು, ‘ಜೂನ್ 13ರಂದು ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದಾಗ ಕುಲಪತಿ ಮತ್ತು ಕುಲಸಚಿವರು ಒಂದು ತಿಂಗಳೊಳಗೆ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಆದರೆ ಐದು ತಿಂಗಳು ಕಳೆದರೂ ಪ್ರಕಟವಾಗಿಲ್ಲ. ಈ ವಿಳಂಬದಿಂದ ವಿದ್ಯಾರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ, ಒಂದು ವೇಳೆ ಫಲಿತಾಂಶ ಬಾರದಿದ್ದರೆ ಬಿ.ಎಡ್ ವಿದ್ಯಾರ್ಥಿಗಳು ಶಿಕ್ಷಕರಾಗುವ ಕನಸು ಹುಸಿಯಾಗುತ್ತದೆ,’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಜಗನಾಥ್ ಎಸ್‌.ಎಚ್. ಮಾತನಾಡಿ, “ಬಿ.ಎಡ್. 2ನೇ ಹಾಗೂ 4ನೇ ಸೆಮಿಸ್ಟರ್ ಫಲಿತಾಂಶ ತಕ್ಷಣ ಪ್ರಕಟಿಸಬೇಕು, ಎಲ್ಲ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿ ಹಾಗೂ ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು, ಪರೀಕ್ಷಾ ಅರ್ಹತಾ ಶುಲ್ಕ ಕಡಿಮೆ ಮಾಡಬೇಕು,” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂತೋಷಕುಮಾರ ಎಸ್‌.ಪಿ., ರಮೇಶ ದೇವಕರ್, ಪ್ರಭಾಕರ ಚಿಂಚೋಳಿ, ಅಣವೀರ ಗೌಡ ಬಿರಾದಾರ, ಪೂಜಾ, ವಿವೇಕ ಹಿರೇಮಠ, ಸಚೀನ್, ವಿರೇಶ್, ಖಾಶಿಂ, ಗಣೇಶ್ ಜಾದವ್, ರವಿಚಂದ್ರ ಹಾಗೂ ರಕ್ಷಿತಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...