ಕಲಬುರಗಿ | ಎಸ್‌ಯುಸಿಐ 78ನೇ ಸಂಸ್ಥಾಪನಾ ದಿನಾಚರಣೆ

Date:

ನಮ್ಮ ಎಲ್ಲ ಸಮಸ್ಯೆಗಳಿಗೂ ಮೂಲ ಕಾರಣವಾಗಿರುವ ಪ್ರಸಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಸಮಾಜವಾದಿ ಕ್ರಾಂತಿಯ ಮೂಲಕ ಶೋಷಣಾ ರಹಿತ ಸಮಾಜ ಸ್ಥಾಪಿಸಿದಾಗ ಮಾತ್ರ ಶಾಶ್ವತವಾದ ಪರಿಹಾರ ಸಾಧ್ಯ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಎಂ.ಶಶಿಧರ್ ಅಭಿಪ್ರಾಯಪಟ್ಟರು.

ಕಲಬುರಗಿ ನಗರದ ಈಶ್ವರ್ ಚಂದ್ರ ವಿದ್ಯಾಸಾಗರ್ ಸಭಾ ಭವನದಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಎಸ್‌ಯುಸಿಐ ಜಿಲ್ಲಾ ಸಮಿತಿ ವತಿಯಿಂದ ಜರುಗಿದ ಪಕ್ಷದ 78ನೇ ಸಂಸ್ಥಾಪನ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

ʼದೇಶ ಸ್ವತಂತ್ರಗೊಂಡು 78 ವರ್ಷಗಳು ಗತಿಸಿದರೂ ಸಹ ಬಡತನ, ನಿರುದ್ಯೋಗ, ರೈತರ ಆತ್ಮಹತ್ಯೆ, ಬೆಲೆಏರಿಕೆ, ಅನಕ್ಷರತೆ, ಕೋಮುವಾದದಂತಹ ಸಮಸ್ಯೆಗಳು ದಿನನಿತ್ಯ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಇತ್ತೀಚಿಗೆ ಕಾಶ್ಮೀರದ ಹಹಲ್ಗಾಮ್‌ನಲ್ಲಿ ನಡೆದ 28 ಅಮಾಯಕ ಪ್ರವಾಸಿಗರ ಕಗ್ಗೋಲೆಯನ್ನು ಸಹ ಅವರು ಉಗ್ರವಾಗಿ ಖಂಡಿಸಿದ ಅವರು, ʼಜನರ ಜೀವ ರಕ್ಷಣೆಯನ್ನು ಮಾಡುವಲ್ಲಿ ಸರ್ಕಾರಗಳು ನಿಷ್ಕಾಳಜಿ ವಹಿಸಿದೆʼ ಎಂದು ಆರೋಪಿಸಿದರು. ಅಲ್ಲದೆ, ಜನರ ಐಕ್ಯತೆಯನ್ನು ಮುರಿಯಲು ಜಾತಿವಾದ, ಕೋಮುವಾದ, ಪ್ರಾಂತಿಯ ಭಾವನೆಗಳನ್ನು ಸರ್ಕಾರಗಳು ಸೃಷ್ಟಿಸುತ್ತಿದ್ದು, ಜನರನ್ನು ಮೂಲಭೂತ ಸಮಸ್ಯೆಗಳಿಂದ ವಿಮುಖ ಮಾಡುತ್ತಿದೆʼ ಎಂದರು.

ʼವಿಶ್ವ ಬಂಡವಾಳವಾದವು ಅತ್ಯಂತ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಯುದ್ಧ ಅನಿವಾರ್ಯ ಎನ್ನುವ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ‘ವಿಶ್ವಶಾಂತಿಯು ಸಾಮ್ರಾಜ್ಯವಾದದ ಸಾವು’ ಎಂದು ನಡುಗುತ್ತಿರುವ ಸಾಮ್ರಾಜ್ಯವಾದವು ಕಾರ್ಮಿಕ ವರ್ಗದ ಕಾಂತಿಯಿಂದ ಇಂದು ಭಯಗೊಂಡಿದೆ. ಅಂತಿಮವಾಗಿ ಅವರು ಆರ್ಥಿಕ ಬಿಕ್ಕಟ್ಟು ಬಂಡವಾಳವಾದವನ್ನು ಸಂಕಷ್ಟಕ್ಕೆ ದೂಡಿದೆ. ಅದನ್ನು ಮರೆಮಾಚಲು ಬಡ ರಾಷ್ಟ್ರಗಳ ಮೇಲೆ ಯುದ್ಧದ ಅಕ್ರಮಣವನ್ನು ಮಾಡುತ್ತಿದೆʼ ಎಂದರು.

ʼಬಂಡವಾಳಶಾಹಿ ವ್ಯವಸ್ಥೆಯ ಸಾವಿನ ಅಂಚಿನಲ್ಲಿರುವುದರಿಂದ ಸಮಾಜದಲ್ಲಿ ಅತ್ಯಂತ ಕೊಳೆತ ಸಂಸ್ಕೃತಿಯು ಎಲ್ಲ ಕ್ಷೇತ್ರದಲ್ಲೂ ಬಿಂಬಿತವಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸಮಾಜವಾದಿ ಕ್ರಾಂತಿಗಾಗಿ ನಾವು ಸಜ್ಜಾಗುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಾನವನಿಂದ ಮಾನವನ ಶೋಷಣೆಯನ್ನು ದೇಶದಲ್ಲಿ ಕೊನೆಗಾಣಿಸಲು ಮಾರ್ಕ್ಸವಾದಿ ಚಿಂತನೆಗಳ ಆಧಾರದ ಮೇಲೆ ಪ್ರಬಲ ಜನಾಂದೋಲನವನ್ನು ಬೆಳೆಸಬೇಕುʼ ಎಂದು ಕರೆ ನೀಡಿದರು.

ಎಸ್‌ಯುಸಿಐ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಎ.ನಾಗಮ್ಮ, ರಾಮಣ್ಣ, ಎಸ್. ಇಬ್ರಾಹಿಂಪುರ್, ಗಣಪತರಾವ್ ಕೆ. ಮಾನೆ, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಆರ್.ಕೆ.ವೀರಭದ್ರಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...