ಕಲಬುರಗಿ | ಮಳೆ ಅಬ್ಬರಕ್ಕೆ ಕಕ್ಕಾಬಿಕ್ಕಿಯಾದ ಜನ

Date:

  • ಧಾರಾಕಾರವಾಗಿ ನೀರು ಹರಿದ ಕಾರಣ ಕೆಲಕಾಲ ಆಟೋ, ಬಸ್‌ ಸ್ಥಗಿತ
  • ಕಲಬುರಗಿ ಜಿಲ್ಲೆಯ ಹಲವು ಕಡೆ ನಾಲ್ಕೈದು ದಿನ ಇನ್ನಷ್ಟು ಮಳೆ ಸಾಧ್ಯತೆ

ಕಲಬುರಗಿ ನಗರದಲ್ಲಿ ನಿನ್ನೆ (ಶುಕ್ರವಾರ) ಸಂಜೆ ಸುರಿದ ದಿಢೀರ್‌ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ತವಾಗಿದ್ದು, ವಾಹನ ಸವಾರರು ಹಾಗೂ ಬೀದಿಬದಿ ವ್ಯಾಪಾರಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜಿಲ್ಲೆಯ ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ಬೆಳಗ್ಗೆಯಿಂದಲೂ ಬಿರು ಬಿಸಿಲಿನಿಂದ ಕೂಡಿತ್ತು. ಮಧ್ಯಾಹ್ನದ ವೇಳೆ 35ಡಿಗ್ರಿಗಿಂತಲೂ ಹೆಚ್ಚಿನ ಉಷ್ಣಾಂಶ ದಾಖಲಾಗಿತ್ತು. 3 ಗಂಟೆ ನಂತರ ಮೋಡ ಮುಸಿಕಿದ ವಾತವರಣದಿಂದಾಗಿ ಬಿಸಿಲಿನ ತಾಪಮಾನ ಕಡಿಮೆಯಾಗಿತ್ತು.

ಸಂಜೆ 4 ಗಂಟೆ ಆಗುತ್ತಿದ್ದಂತೆ ಗುಡುಗು-ಸಿಡಿಲು ಸಹಿತ ಮಳೆ ಶುರುವಾಗಿ ರಾತ್ರಿಯವರೆಗೂ ಧಾರಾಕಾರವಾಗಿ ಸುರಿದಿದೆ. ಕೆಲವೆಡೆ ಬೃಹತ್ ಗಾತ್ರದ ಆಲಿಕಲ್ಲುಗಳು ಸುರಿದಿದ್ದರಿಂದ ಕೆಲಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ನಗರದ ಮುಖ್ಯ ರಸ್ತೆಯಲ್ಲಿ ನೀರು ಹರಿದ್ದಿದ್ದರಿಂದ ಬೀದಿಬದಿ ವ್ಯಾಪಾರಸ್ಥರು ಪರದಾಡುವಂತಾಗಿತ್ತು. ನಗರದ ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ನೀರು ತುಂಬಿದ್ದರಿಂದ ಕೆಲಕಾಲ ಬಸ್ ಮತ್ತು ಆಟೋ ಸಂಚಾರ ಸ್ಥಗಿತಗೊಂಡಿತ್ತು.

ಶನಿವಾರ ಕೂಡ ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...