ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಒಕ್ಕೂಟಗಳು ಜಂಟಿಯಾಗಿ ಇಂದು 11-30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿವೆ.
KPRS ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಪತ್ರಿಕೆ ಹೇಳಿಕೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳನ್ನು ಧಿಕ್ಕರಿಸಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಬ್ಬು ಬೆಳೆಗಾರು ಆಕ್ರೋಶ ವ್ಯಕ್ತಪಡಿಸುತ್ತಿರುವುದಾಗಿ ತಿಳಿಸಿದ್ದಾರೆ.
ಈ ಬಾರಿಯ ಅತಿವೃಷ್ಟಿಯಿಂದಾಗಿ ರೈತರ ವಾಣಿಜ್ಯ ಬೆಳೆಗಳೆಲ್ಲವೂ ನೀರುಪಾಲಾಗಿವೆ. ಈಗ ರೈತರಿಗೆ ಉಳಿದಿರುವುದು ಕಬ್ಬಿನ ಬೆಳೆಯೊಂದೆ. ಅದರಲ್ಲಿಯೂ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸ ಮಾಡುವುದು, ರೈತರಿಗೆ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರದ ಆದೇಶಗಳನ್ನು ಕಾರ್ಖಾನೆಗಳು ಪಾಲಿಸುತ್ತಿಲ್ಲ” ಎಂದು ಆರೋಪಿಸಿದರು.
“ಕಬ್ಬಿಗೆ ಏಕರೂಪ ಬೆಲೆ ನಿಗದಿ ಮಾಡಬೇಕು. ಕಬ್ಬು ಸರಬರಾಜು ಮಾಡಿದ 14 ದಿನಗಳೊಳಗೆ ಹಣಪಾವತಿ ಮಾಡಬೇಕು.
ಕಬ್ಬಿನ ಉಪ ಉತ್ಪನ್ನ(ಬಗಾಸ್, ಮೋಲಾಸಿಸ್ ಇತ್ಯಾದಿ)ಗಳಲ್ಲಿ ರೈತರಿಗೆ ಶೇ.50 ಪಾಲು ನೀಡಬೇಕು. ಇತ್ತೀಚಿನ ಅತಿವೃಷ್ಟಿಯಿಂದ ರೈತರಿಗೆ ನಷ್ಟವಾಗಿರುವುದರಿಂದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ
“ಕೇಂದ್ರ ಸರ್ಕಾರದ FRP(Fair and Remunerative Price) ಪ್ರತಿ ಟನ್ಗೆ ಸಕ್ಕರೆ ಇಳುವರಿ ₹9.50 ಆಧಾರದ ಮೇಲೆ ₹5,500 ಇದೆ. ಆದರೆ ಕಾರ್ಖಾನೆಗಳು ಕನಿಷ್ಠ ₹3,000-₹3,500ರಷ್ಟಾದರೂ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದು, ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.





