ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ತಾಲ್ಲೂಕಿನ ಮೇಳಕುಂದಾ(ಬಿ) ಗ್ರಾಮದ ಅಂಬರೀಶ್ ಗೌನ್ನಳ್ಳಿ (26) ಸ್ನೇಹಿತನಿಂದಲೇ ಕೊಲೆಯಾದ ಯುವಕ. ಅಜಯ್ ಹಾಗೂ ಆತನ ಸ್ನೇಹಿತರು ಕೊಲೆ ಮಾಡಿರುವ ಆರೋಪಿಗಳು. ಅಜಯ್ ಪತ್ನಿ ಜೊತೆ ಅಂಬರೀಶ್ ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಕ್ಕೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಅಜಯ್ ತನ್ನ ಹೆಂಡತಿ ಜೊತೆ ಇರುವಂತೆ ಹೇಳಿ ಕಲಬುರಗಿಯಿಂದ ಮುರಡಿ ಗ್ರಾಮಕ್ಕೆ ಕರೆತಂದ ಅಜಯ್, ಆತನ ಸ್ನೇಹಿತರ ಜೊತೆ ಸೇರಿ ವಿದ್ಯುತ್ ತಂತಿಯನ್ನು ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಬಿಗಿದು ಕೊಲೆ ಮಾಡಿದ್ದಾರೆ..
ಅಂಬರೀಶ ತಾಯಿ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಆದಿವಾಸಿಗಳನ್ನು ಆದಿವಾಸಿಗಳೇ ಕೊಂದರು ಹೌದು… ಆದರೆ ಯಾಕಾಗಿ ಕೊಂದರು?





