ಕಲಬುರಗಿ | ಕೃಷಿ ಕಾಯ್ದೆಗಳನ್ನು ರೈತಸ್ನೇಹಿಯಾಗಿ ರೂಪಿಸಬೇಕು: ಕರೆಪ್ಪ ಅಂಕಲಗಿ

Date:

ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ರಾಜ್ಯ ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿ. ಕಾಯಿದೆಯನ್ನು ಮತ್ತಷ್ಟು ರೈತಸ್ನೇಯಿಯಾಗಿ ರೂಪಿಸಬೇಕು ಎಂದು ರೈತ ಸಮಾವೇಶದಲ್ಲಿ ಯುವ ಮೋರ್ಜಾ ಕಾರ್ಯದರ್ಶಿ ಕರೆಪ್ಪ ಅಂಕಲಗಿ ಹೇಳಿದರು.

ಕಲಬುರಗಿ ಪಟ್ಟಣದ ಎಂ.ಎಸ್. ಪಂಡೀತ ರಂಗಮಂದಿರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ರೈತ ಸಮಾವೇಶದಲ್ಲಿ ನಿರ್ಣಯಗಳನ್ನು ತೆಗೆದುಕೊಂಡು, ಸಹಾಯಕ ಆಯುಕ್ತರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಿ ಮಾತನಾಡಿದರು.

ಕೇಂದ್ರ ಸರಕಾರ ಮಾತು ಕೊಟ್ಟಂತೆ ಕೃಷಿ ಉತ್ಪನ್ನಗಳಿಗೆ ಡಾ. ಎಂ. ಎಸ್. ಸ್ವಾಮಿನಾಥನ್ ವರದಿಯ ಅನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಜಾರಿಗೊಳಿಸಬೇಕು. ಕುಲಾಂತರಿ ತಳಿಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವಿದ್ಯುತ್ ಕಾಯಿದೆಗೆ ತಿದ್ದುಪಡಿ ತರುವುದನ್ನು ಕೈಬಿಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀತಿಯನ್ನು ಮುಂದುವರೆಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಡಿತರ ವ್ಯವಸ್ಥೆಯಲ್ಲಿ ಐದು ಕೆ.ಜಿ. ಅಕ್ಕಿಯ ಬದಲು ಹಣ ಬದಲಿಗೆ ಪ್ರತಿಯೊಂದು ಕುಟುಂಬಕ್ಕೂ ಜೋಳ, ರಾಗಿ, ಕಾಳು ಮತ್ತು ಅಡುಗೆ ಎಣ್ಣೆಯನ್ನು ನೀಡಬೇಕು. ವಿದ್ಯುತ್ ಸಂಪರ್ಕ ಪಡೆಯಲು ರೈತರೇ ವೆಚ್ಚ ಭರಿಸಬೇಕೆಂಬ ತೀರ್ಮಾನವನ್ನು ಕೂಡಲೇ ವಾಪಸ್ಸು ಪಡೆಯಬೇಕು. ಯಾವುದೇ ಕಾರಣಕ್ಕೂ ಕೇಂದ್ರ ಸರಕಾರ ತರಲು ಹೊರಟಿರುವ ವಿದ್ಯುತ್‌ ತಿದ್ದುಪಡಿ ಕಾಯಿದೆಯನ್ನು ರಾಜ್ಯದಲ್ಲಿ ಜಾರಿಗೆ ತರಬಾರದು” ಎಂದು ಆಗ್ರಹಿಸಿದರು.

“ಕಲಬುರಗಿ ಜಿಲ್ಲೆಯ ಎಲ್ಲ ಬಡ ಕುಟುಂಬದವರಿಗೆ ನಿವೇಶನ ಮಂಜೂರು ಮಾಡಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್ ಕಂಪನಿಗೆ ಮೂರು ಸಾವಿರಕ್ಕೂ ಹೆಚ್ಚು  ಎಕರೆ ಜಮೀನನ್ನು ಮಾರಾಟ ಮಾಡಿರುವ ನೀರ್ಮಾಣವನ್ನು ವಾಪಸ್ ಪಡೆಯಬೇಕು. ದೇವದಾರಿ ಆರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು. ರೈತರು ದರಖಾಸ್ತು ಮಂಜೂರಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಸಾಗುವಳಿ ಪತ್ರ ನೀಡಬೇಕು” ಎಂದು ಕರೆಪ್ಪ ಅಂಕಲಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಮಲ್ಲಿಕಾರ್ಜುನ ಸತ್ಯಂಪೇಟೆ, ನಾಗೇಂದ್ರ ಆರ್. ಥಂಬೆ, ಉಮಾಪತಿ ಪಾಟೀಲ, ರಮೇಶ ಕೆ. ರಾಗಿ, ಮಂಜುಳಾ ಆರ್. ಭಜಂತ್ರಿ, ಸುನೀಲ ಕುಮಾರ್ ಮಠಪತಿ, ಶರಣಗೌಡ ಪಾಟೀಲ, ಸೈನಾಜಬಿ, ಕನ್ಯಾಕುಮಾರಿ, ವಿಜಯಕುಮಾರ್ ಹತ್ತರರ್ಕಿ, ಸುನೀಲಗೌಡ ಪಾಟೀಲ್, ಸಿದ್ದು ವೇದಶೆಟ್ಟಿ, ವೀರಣ್ಣಾ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...