ಕಲಬುರಗಿ | ಕಾರ್ಮಿಕ ಮಹಿಳೆಯರ ಕೊಲೆ ತನಿಖೆ ಸಿಐಡಿಗೆ ವಹಿಸಿ; ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

Date:

ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೋಲೆ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 5 ಲಕ್ಷ ರೂ. ತಕ್ಷಣ ಪರಿಹಾರ ಬಿಡುಗಡೆಗೆ ಒತ್ತಾಯಸಿ ಕೇಂದ್ರ ರಾಮಿರ್ ಸಂಧಾನಗಳಿ ಸಮನ್ವಯ ಸಮಿತಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿತು.

ಮನವಿ ಪತ್ರದಲ್ಲಿ, ಏಪ್ರಿಲ್ 07ರಂದು ಕಲಬುರಗಿ ಹೊರವಲಯದ ತಾವರಗೇರಾ ಕ್ರಾಸ ಬಳಿ ಜಮೀನಿನಲ್ಲಿ ಕಟ್ಟಡ ಕಾರ್ಮಿಕರಾದ ಶರಣಮ್ಮ ಮತ್ತು ಚಂದಮ್ಮ ಇವರನ್ನು ಭೀಕರವಾಗಿ ಕೋಲೆ ಮಾಡಲಾಗಿದೆ. ಕಡು ಬಡವರಾದ ಇವರು ಪ್ರತೀ ನಿತ್ಯ ದುಡಿಮೆಗಾಗಿ ಗಂಜ್ ಪ್ರದೇಶದ ನಾಕ ಬಂದಿ (ನಿರ್ಮಾಣ ವಲಯದ ಕೆಲಸಕ್ಕೆ ನಿಲ್ಲುವ ಜಾಗ) ಸ್ಥಳಗಳಲ್ಲಿ ಕಾರ್ಮಿಕರು ನಿರ್ಮಾಣವಲಯದ ದುಡುಮೆಗಾಗಿ ಸರಳವಾಗಿ ದೊರೆಯುತ್ತಾರೆ.

ಗುತ್ತಿಗೆದಾರರು ಅಥವಾ ಮಾಲೀಕರು ಈ ಸ್ಥಳದಿಂದ ದಿನಗೂಲಿ ಲೆಕ್ಕದಲ್ಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಾರೆ. ಅದರಂತೆ ಕಾರ್ಮಿಕ ಮಹಿಳೆಯರನ್ನು ಕೆಲಸಕ್ಕೆ ಕರೆದುಕೊಂಡು ಹೊದ ದುಷ್ಕರ್ಮಿಗಳು ಕಲಬುರಗಿ ಹೊರವಲಯದಲ್ಲಿ ಈ ಇಬ್ಬರು ಮಹಿಳೆಯರನ್ನು ಕೊಲೆ ಮಾಡಿ ಚಿನ್ನ-ಒಡವೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತ್ಯನಡೆದು ಮೂರು ದಿನಗಳು ಕಳೆದರೂ ಆರೋಪಿಗಳೂ ಪತ್ತೆಯಾಗಿಲ್ಲ. ಈ ಕೃತ್ಯ ಅತ್ಯಂತ ಹೀನಾಯವಾಗಿದ್ದು, ಕಾರ್ಮಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ಹೊತ್ತಿನ ಉಟಕ್ಕಾಗಿ ಕಷ್ಟ ಪಡುವ ಕಾರ್ಮಿಕರ ಜೀವಗಳಿಗೆ ಬೇಲೆ ಇಲ್ಲದಹಾಗಾಗಿದೆ. ಇಂತಹ ಸಂದರ್ಭದಲ್ಲಿ ಕಲಬುರಗಿಯಲ್ಲಿ ಕಾರ್ಮಿಕ ಇಲಾಖೆ ಪ್ರಾದೇಶಿಕ ಆಯುಕ್ತರ ಕಚೇರಿ ಇದ್ದರೂ ಸಹ, ಉಪ ಕಾರ್ಮಿಕ ಆಯುಕ್ತರು/ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಸೌಜನ್ಯಕ್ಕಾದರೂ ಮೃತ ಕುಟುಂಬಗಳಿಗೆ ಬೇಟಿ ನೀಡಿ ಸಾಂತ್ವನ ಹೇಳಿಲ್ಲ. ನೈಜ ಕಾರ್ಮಿಕರು ಆಗಿರುವದರಿಂದ ಹಾಗೂ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿರುವದರಿಂದ ಕಾರ್ಮಿಕ ಇಲಾಖೆ ನಿಯಮಗಳನ್ವಯ ವಿಶೇಷ ಪ್ರಕರಣವೆಂದು ಪ್ರತೀ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡಲು ಅವಕಾಶವಿದೆ.

ಕೂಡಲೇ ಪರಿಹಾರ ವಿತರಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಬೇಕು ಮತ್ತು ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಕಲಬುರಗಿಯಲ್ಲಿ ಇರುವ ಒಟ್ಟು 4 ನಾಕಾ ಬಂದಿ ಸ್ಥಳಗಳಲ್ಲಿ ಸುರಕ್ಷತೆ ಕ್ರಮಗಳು ಅಳವಡಿಸಲು ಕಾರ್ಮಿಕ ಇಲಾಖೆಗೆ ಸೂಚನೆ ನೀಡಬೇಕು ಹಾಗೂ ಸದರಿ ಕೊಲೆ ಪ್ರಕರಣವೂ ಅತ್ಯಂತ ಹೀನಾಯ ಮತ್ತು ದುಷ್ಕತ್ಯವಾಗಿದ್ದು, ಕೊಲೆ ಆರೋಪಿಗಳಿಗೆ ಅತ್ಯಂತ ಕಠೀಣ ಶಿಕ್ಷೆ ಆಗಬೇಕು ಮತ್ತು ಸಮಗ್ರ ತನಿಖೆ ಅವಶ್ಯಕತೆ ಇರುವುದರಿಂದ ಸದರಿ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೊಲೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಶಂಕರ್ ಕಟ್ಟಿ ಸಂಗಾವಿ, ಹಣಮಂತರಾಯ ಬಿ ಪೂಜಾರಿ, ಶಿವಲಿಂಗ ಹಾವನೂರ, ಮಲ್ಲಿಕಾರ್ಜುನ ಎಸ್. ಮಾಳಗೆ, ಸಂಜೂಕುಮಾರ್ ಗುತ್ತೇದಾರ, ನಾಗಪ್ಪ ರಾಯಚೂರಕರ್, ಪಾಸ್ವಾನ್ ಚಿಂಚನ್ಸೂರ್, ಶಿವಶರಣಪ್ಪ, ದಶರಥ ಹೇಮಸಿಂಗ, ಸಿದ್ದು ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...