ಕಲಬುರಗಿ | ಗಬ್ಬೆದ್ದು ನಾರುತ್ತಿದೆ ಹಡಗಿಲಹಾರುತಿ ಒಳಚರಂಡಿ; ದಲಿತ ಕೇರಿಗೆ ನುಗ್ಗುತ್ತಿದೆ ಕೊಳಚೆ ನೀರು

Date:

ಕಲಬುರಗಿ ದಕ್ಷಿಣ ಕ್ಷೇತ್ರದ ಹಡಗಿಲಹಾರುತಿ ಗ್ರಾಮದಲ್ಲಿನ ಚರಂಡಿಗಳು ಕಸ ಮತ್ತು ಕೊಳಚೆ ನೀರಿನಿಂದ ಕೆಸರಿನ ಮಡುವಿನಂತಾಗಿದ್ದರೂ ಕೂಡ ಹಲವು ವರ್ಷಗಳಿಂದ ಚರಂಡಿಗಳ ದುರಸ್ತಿಯಾಗಿಲ್ಲ. ಚರಂಡಿಯ ಕೊಳಚೆ ನೀರು ಮಳೆಗಾಲದಲ್ಲಿ ಮನೆಗಳಿಗೆ ನುಗ್ಗುತ್ತಿದೆ. ಅಲ್ಲದೇ ಮನೆಗಳ ಮುಂದೆ ಮಡುಗಟ್ಟಿ ನಿಂತಿರುವ ಕೊಳಚೆ ನೀರಿನಿಂದ ಅಲ್ಲಿಯ ಇಡೀ ಪ್ರದೇಶ ಕೆರೆಯಂತೆ ಕಾಣುತ್ತದೆ.

“ಗ್ರಾಮದ ಈ ಭಾಗದಲ್ಲಿ ಮೊದಲು 2 ದೊಡ್ಡ ಒಳಚರಂಡಿಗಳಿದ್ದವು. ಇದೀಗ ಅವುಗಳನ್ನು ಮುಚ್ಚಿ ಹಾಕಿದ್ದಾರೆ. ಉಳಿದ ಚರಂಡಿಗಳನ್ನು ನೇರವಾಗಿ ಮಾಡದೇ ಓರೆಯಾಗಿರುವುದರಿಂದ ನೀರು ಹೋಗಲು ಸಂಪರ್ಕ ಕಡಿತಗೊಂಡಿದೆ. ಇಳಿಜಾರು ಪ್ರದೇಶದಲ್ಲಿ ದಲಿತ ಕೇರಿ ಇದೆ. ಚರಂಡಿಯ ನೀರು ಸರಾಗವಾಗಿ ಹರಿಯಲು ಸ್ಥಳಾವಕಾಶ ಇಲ್ಲದ ಕಾರಣ ದಲಿತ ಕೇರಿಯಲ್ಲಿ ನಿಲ್ಲುತ್ತದೆ. ಅಲ್ಲದೆ ಮುಖ್ಯ ರಸ್ತೆಯ ಬದಿಯಲ್ಲಿ ಒಂದು ದೊಡ್ಡ ಚರಂಡಿ ಇದ್ದು, ರಸ್ತೆ ನಿರ್ಮಾಣ ಮಾಡುವಾಗ ಅದನ್ನು ಒಡೆದು ಹಾಕಿದ್ದಾರೆ. ರಸ್ತೆ ನಿರ್ಮಾಣವಾದ ಬಳಿಕ ಒಡೆದ ಚರಂಡಿಯನ್ನು ಹಾಗೆ ಬಿಟ್ಟಿದ್ದಾರೆ. ಇದರಿಂದ ನೀರು ಮನೆಯ ಮುಂದೆ ನಿಲ್ಲುತ್ತದೆ” ಎಂದು ಸ್ಥಳೀಯ ನಿವಾಸಿಗಳು ತಿಳಿಸಿದರು.

ಚರಂಡಿ ನೀರು

ಸ್ಥಳೀಯ ನಿವಾಸಿ ನಾಗಮ್ಮ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಡಿಗಲಹಾರುತಿ ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ವರ್ಷವೇ ಕಳೆದಿದೆ. ಅವುಗಳು ತುಂಬಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೂಡ ಈವರೆಗೆ ದುರಸ್ತಿ ಕಾರ್ಯ ನಡೆಸಿಲ್ಲ. ಸೂಕ್ತ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮನೆ ರಸ್ತೆ ಪಕ್ಕದ ತಗ್ಗು ಪ್ರದೇಶದಲ್ಲಿದೆ. ರಸ್ತೆ ಎತ್ತರಕ್ಕೆ ಇದೆ. ನಿತ್ಯವೂ ನೀರು ಸಂಗ್ರಹವಾಗಿ ಮನೆ ಮುಂದೆ ನಿಲ್ಲುತ್ತದೆ. ಮಳೆಗಾಲದಲ್ಲಂತೂ ಹಳ್ಳದ ಹಾಗೆ ನೀರು ಹರಿದು ಮನೆಗೆ ನುಗ್ಗಿ ಮನೆಯಲ್ಲಿದ್ದ ದವಸ ಧಾನ್ಯ ಹಾಳಾಗಿ ತಿಪ್ಪೆ ಪಾಲಾದವು. ರಾತ್ರಿಯೆಲ್ಲಾ ನಿದ್ದೆ ಇಲ್ಲದೆ, ಮಲಗಲು ಜಾಗವಿಲ್ಲದೆ ಪರದಾಡಿದ್ದೀವಿ. ಸಾಕಿದ ಕೋಳಿ, ಆಕಳು ನೀರಿನಲ್ಲಿ ಮುಳ್ಳುಗಿ ಸತ್ತು ಹೋಗಿವೆ. 20 ವರ್ಷದಿಂದ ಹೀಗೆ ಈ ಕೊಳಚೆ ನೀರಿನ ವಾಸನೆ ಕುಡಿಯುತ್ತ ಜೀವನ ಮಾಡುತ್ತಿದ್ದೇವೆ. ಕಾಲರಾ, ಮಲೇರಿಯಾದಂತಹ ರೋಗ ರುಜಿನಗಳು ಬಂದರೆ ಯಾರು ಹೊಣೆ?” ಎಂದು ತಮ್ಮ ಅಳಲು ತೋಡಿಕೊಂಡರು.

ಇದನ್ನೂ ಓದಿದ್ದೀರಾ? ಕಲಬುರಗಿ | ಕಾಮಗಾರಿಗಳಲ್ಲಿ ಅಕ್ರಮ; ಮೂವರು ಎಂಜಿನಿಯರ್‌ಗಳ ಅಮಾನತು

“ಅಧಿಕಾರಿಗಳು ಜನಪ್ರತಿನಿಧಿಗಳು ಬರುತ್ತಾರೆ. ಸರಿಪಡಿಸುತ್ತೇವೆಂದು ಆಶ್ವಾಸನೆ ಕೊಟ್ಟು ಹೋಗುತ್ತಾರೆ ಅಷ್ಟೇ. ಈವರೆಗೆ ಯಾರೂ ಕೂಡ ದುರಸ್ತಿಪಡಿಸಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದರು.

ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಅವರು “ನೀವು ಈ ವಿಚಾರ ನನ್ನ ಗಮನಕ್ಕೆ ತಂದಿದ್ದು, ಒಳಿತಾಯಿತು. ನಾನು ಬೆಂಗಳೂರಿಗೆ ಹೋಗುತ್ತಿರುವೆ. ಬಂದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...