ಕಲಬುರಗಿ | ರಾಧಾಕೃಷ್ಣ ದೊಡ್ಮನಿ ಅಭಿನಂದನಾ ಸಮಾರಂಭ: ಮೆರವಣಿಗೆಗೆ ರಂಗು ತಂದ ಬುಡಗ ಜಂಗಮರು

Date:

ಬಡವರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಕೊಂಚ ಹಣ ಗಳಿಸಿ ಹೊಟ್ಟೆ ಪಾಡು ನಡೆಸುವ ಕಾಲದಲ್ಲಿ ಅಭಿಮಾನಿ ಒಬ್ಬರು ತಮ್ಮ ಸ್ವಂತ ಹಣದಲ್ಲಿ ಕಲಾವಿದರನ್ನು ಕರೆಸಿ ಮೆರವಣಿಗೆಗೆ ರಂಗು ತಂದು, ಅಪಾರ ಅಭಿಮಾನ ಮೆರೆದಿದ್ದಾರೆ.

ಚಿತ್ತಾಪುರ ಪಟ್ಟಣದಲ್ಲಿ ಕಳೆದ 25ನೇ ತಾರೀಕಿನಂದು ಸಂಸದ ರಾಧಾಕೃಷ್ಣ ದೊಡ್ಮನಿ ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ದೊಡ್ಮನಿ ಅವರ ಅಪ್ಪಟ ಅಭಿಮಾನಿ ಬುಡಗ ಜಂಗಮ ಸಮಾಜದ ಜಿಲ್ಲಾ ಅಧ್ಯಕ್ಷ ಪಂಡಿತ್ ಶಿರವಾಟಿ ಅವರು, ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕಿನಲ್ಲಿರುವ ಅಲೆಮಾರಿ ಜನಾಂಗದವರಾದ ಬುಡಗ ಜಂಗಮರು, ಸುಡುಗಾಡು ಸಿದ್ದರನ್ನು ಅಭಿಮಾನಕ್ಕಾಗಿ ತಮ್ಮ ಸ್ವಂತ ಹಣದಲ್ಲಿ ಕರೆಯಿಸಿ ವಿವಿಧ ವೇಷ ಭೂಷಣಗಳನ್ನು ಧರಿಸಿ ಕುಣಿದು ಅದ್ದೂರಿ ಮೆರವಣಿಗೆಯಲ್ಲಿ ರಂಗು ತಂದಿದ್ದಾರೆ.

ಕಲಬುರ್ಗಿ, ರಾಯಚೂರು, ಯಾದಗಿರಿ, ಸೇಡಂ, ಶಹಾಬಾದ ಚಿತ್ತಾಪುರ ಸೇರಿದಂತೆ ವಿವಿಧ ಕಡೆಗಳಿಂದ ಬಂದ ಸುಮಾರು 50ಕ್ಕೂ ಹೆಚ್ಚು ಕಲಾವಿಧರು ಮೆರವಣಿಗೆಯಲ್ಲಿ ರಾಮಾಯಣದ ರಾಮ, ಸೀತೆ, ಲಕ್ಷಣ, ಆಂಜನೇಯ, ರಾವಣ, ಕುಂಭಕರ್ಣ, ಶೂರ್ಪನಖಿ ಅವರ ಛದ್ಮವೇಷ ಧರಿಸಿದ ಬುಡ್ಗ ಜಂಗಮ ಕಲಾವಿದರು ಮೆರವಣಿಗೆ ಸಾಗುತ್ತಿದ್ದ ರಸ್ತೆಯಲ್ಲಿ ಅಲ್ಲಲ್ಲಿ ರಾಮಾಯಣದ ವಿವಿಧ ಸನ್ನಿವೇಶಗಳನ್ನು ಆಕರ್ಷಕವಾಗಿ ಅಭಿನಯಿಸಿ ನೆರೆದ ಜನರನ್ನು ಮನರಂಜಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 30 at 5.25.12 PM

ಕಲಾವಿದರಾದ ಭೀಮಾಶಂಕರ ಕಟ್ಟಿಮನಿ ಯಡ್ರಾಮಿ, ಸಿದ್ರಾಮ ಶಿರವಾಟಿ, ಚೆನ್ನು ಪ್ಯಾರಲ್, ಸಾಯಪ್ಪ ಬೈಲಪಾಟಿ ಸೇಡಂ, ಲಕ್ಷ್ಮಣ ಸಿರಿಗಿರಿ ಸೇಡಂ, ನಿಂಗಣ್ಣ ಪಾಮತೀರ್ಥ, ರಮೇಶ ಕವಿತಾಳ, ಬುರ್ರಾಕತೆ ಕಲಾವಿದರಾದ ಶಾಂತಮ್ಮ ಪಾಮತೀರ್ಥ, ಬಸಮ್ಮ ರಾಮತೀರ್ಥ, ಅಂಜಮ್ಮ ಚಿತ್ತಾಪುರ, ಶರಣಮ್ಮ ಚಿತ್ತಾಪುರ, ಯಲ್ಲಮ್ಮ ಕಲಬುರಗಿ,ಶಿವಮ್ಮ ಕಲಬುರಗಿ, ನಿರ್ಮಲಾ. ಶಿರವಾಟಿ, ಮೋನಮ್ಮ ಶಿರವಾಟಿ, ಭೀಮಬಾಯಿ ಚಿತ್ತಾಪುರ, ಮಲ್ಲಮ್ಮ ಚಿತ್ತಾಪುರ, ಶಿವು ಶಹಾಬಾದ್, ಮಾರುತಿ ಶಹಾಬಾದ್‌, ಉದಯಕುಮಾರ ಮಾರುತಿ, ಪ್ರಶಾಂತ ಶಿರವಾಟಿ ಸೇರಿದಂತೆ ಅನೇಕ ಕಲಾವಿದರು ಮೆರವಣಿಗೆಯಲ್ಲಿ ಕಲೆ ಪ್ರದರ್ಶನ ಮಾಡಿದರು.
200ರಕ್ಕೂ ಹೆಚ್ಚು ಜನರು ಭಾಗಿಯಾಗಿ ಮೆರಗು ತಂದರು.

ಇವರ ಅಭಿಮಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್, ರಾಧಾಕೃಷ್ಣ ದೊಡ್ಮನಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವರದಿ: ಅನಂತ್ ದೇಶಪಾಂಡೆ, ವಾಲೆಂಟಿಯರ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...