ಕಲಬುರಗಿ | ಗ್ರಾಮದ ಸ್ವಚ್ಛತೆ ಜತೆಗೆ ತಮ್ಮ ಅಭಿವೃದ್ಧಿಯಲ್ಲೂ ಸಬಲರಾಗಬೇಕು: ಯೋಜನಾ ನಿರ್ದೇಶಕ ಜಗದೇವಪ್ಪಾ ಬಿ

Date:

ಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಮಹಿಳೆಯರು ಗ್ರಾಮದ ಸ್ವಚ್ಛತೆ ಜತೆಗೆ ತಮ್ಮನ್ನೂ ಅಭಿವೃದ್ಧಿಪಡಿಸಿಕೊಂಡು ಸಬಲರಾಗಬೇಕು ಎಂದು ಯೋಜನಾ ನಿರ್ದೇಶಕ ಜಗದೇವಪ್ಪಾ ಬಿ ತಿಳಿಸಿದರು.

ಕಲಬುರಗಿ ಜಿಲ್ಲಾ ಪಂಚಾಯತ್, ಸಾಹಸ್ ಸಂಸ್ಥೆ ಹಾಗೂ ರೈನ್ ಮ್ಯಾಟರ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಿಷನ್ ಸ್ವಚ್ಛ ಕಲ್ಯಾಣ ಕರ್ನಾಟದ ಸುಸ್ಥಿರ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮ ಅನುಷ್ಠಾನ ಕುರಿತು ಜಿಲ್ಲೆಯ 54 ಗ್ರಾಮ ಪಂಚಾಯಿತಿಗಳ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

“ಮಹಿಳೆಯರ ಸಬಲಿಕರಣಕ್ಕಾಗಿಯೇ ಎನ್‌ಆರ್‌ಎಲ್‌ಎಂ ಯೋಜನೆಯ ಇದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ಸದಾ ಬೆಂಬಲವಾಗಿ ನಿಲ್ಲುತ್ತದೆ” ಎಂದು ಕಲಬುರಗಿ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಜಗದೇವಪ್ಪಾ ಬಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಾರುಣಿಕ ಕೊರೆ ಮಾತನಾಡಿ, “ಪ್ರಸ್ತುತ ಸಂದರ್ಭದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸೊಳ್ಳೆ ಕಡಿತದಿಂದ ಡೆಂಘೀ ಹರಡುತ್ತಿದೆ. ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಮಹಿಳೆಯರು ಮುನ್ನೆಚ್ಚರಿಕೆ ಕ್ರಮವಾಗಿ ತಾವು ನಿರ್ವಹಿಸುವ ಘನತ್ಯಾಜ್ಯ ವಿಲೇವಾರಿ ಕೆಲಸದಲ್ಲಿ ಜಾಗರೂಕರಾಗಿರಬೇಕು. ತಮ್ಮ ಮನೆಯ ಸುತ್ತಮುತ್ತ ಸಂಗ್ರಹಗೊಂಡ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನೀರು ಸಂಗ್ರಹಿಸಿಡುವ ಡ್ರಮ್, ಬಕೆಟ್‌, ಕೊಡ ಹಾಗೂ ಇನ್ನಿತರ ವಸ್ತುಗಳನ್ನು ಪ್ರತಿದಿನ ತೊಳೆದು ಸ್ವಚ್ಛವಾಗಿಟ್ಟುಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಮಾಜ್‌ ವೇಳೆ ಮಸೀದಿಗೆ ಮದ್ಯದ ಬಾಟಲಿ ಎಸೆತ : ಇಬ್ಬರ ಬಂಧನ

ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಜಿಲ್ಲಾ ಆರೋಗ್ಯ ತರಬೇತುದಾರರಾದ ಡಾ ಲಕ್ಷ್ಮಿದೇವಿ ಮಾತನಾಡಿ, “ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತ್ಯಾಜ್ಯದಲ್ಲಿ ವಿಲೇವಾರಿಯಲ್ಲಿ ತೊಡಗಿರುವ ಮಹಿಳೆಯರು ತಮ್ಮ ವೈಯಕ್ತಿಕ ಸ್ವಚ್ಛತೆ ಹಾಗೂ ಮುಟ್ಟಿನಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಬಿಎಂ(ಜಿ) ಸಮಾಲೋಚಕರು, ಸಾಹಸ್ ಸಂಸ್ಥೆಯ ಪಿ ಸಿ ರಾಜಶೇಖರ್ ಬಿರಾದಾರ್, ದೇವರಾಜ್ ಆರ್ ಕನ್ನಡಿಗ ಹಾಗೂ ಸಿಬ್ಬಂದಿಗಳು, ಎನ್‌ಆರ್‌ಎಲ್‌ಎಂ, ಡಿಪಿಎಂ, ಎಸ್‌ಎಚ್‌ಜಿ ಮಹಿಳೆಯರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...