ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

Date:

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಿಸುವುದಾಗಿ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಸದಸ್ಯರು ಹಾಗೂ ಹಿರಿಯ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 2024 ಲೋಕಸಭೆ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಸಿ ದ. ಸಂ. ಸ ಐಕ್ಯ ಹೋರಾಟ ಚಾಲನ ರಾಜ್ಯ ಸಮಿತಿ ಆದೇಶದ ಮೇರೆಗೆ ಪತ್ರಿಕಾಗೋಷ್ಠಿನಡೆಸಿ ಕರ್ಪತ್ರಗಳನ್ನು ಬಿಡುಗಡೆ ಮಾಡಿತು.

ಈ ವೇಳೆ ಮಾತನಾಡಿದ ಮುಖಂಡ ಸಿದ್ರಾಮ್ ಕಟ್ಟಿ, 2024ರ ಲೋಕಸಭಾ ಚುನಾವಣೆ ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ಭಾರತ ಉಳಿಸಿಕೊಳ್ಳಲು ನಮಗಿರುವ ಕೊನೆಯ ಅವಕಾಶ. ರಾಜಕೀಯ ಜನಜಾಗೃತಿಗಾಗಿ ದಸಂಸ ಆಂದೋಲನ, ಅಂಬೇಡ್ಕರ್ ಸಮಾನತೆಯ ರಥವನ್ನು ಮುಂದಕ್ಕೆ ಒಯ್ಯೋಣ, ಭಾರತದ ಸಂವಿಧಾನ, ಪ್ರಜಾಪ್ರಭುತ್ವದ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸೋಣ, ಲೋಕಸಭಾ ಚುನಾವಣೆ ನಮ್ಮ ಮುಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಹಲವು ಚುನಾವಣೆ ಕಂಡಿರುವ ಕೆಲವರಿಗೆ ಇದು ಅಂತಹದ್ದೇ ಮತ್ತೊಂದು ಚುನಾವಣೆ ಅನಿಸಬಹದು. ಆದರೆ, ಈ ಚುನಾವಣೆ ಅಂತಹ ಮತ್ತೊಂದು ಚುನಾವಣೆಯಲ್ಲ ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಚುನಾವಣೆ ಎಂದರು.

ಈ ದೇಶವು ಮತ್ತೊಂದು ಪ್ರತಿಕ್ರಾಂತಿಗೆ ಗುರಿಯಾಗದಂತೆ ತಡೆಯುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ʼಏನು ಮಾಡಲು ಆಗುತ್ತದೆ ಬಿಡು’, ‘ಯಾರು ಬಂದರೂ ಅಷ್ಟೇ’, ‘ಕಾಂಗ್ರೆಸ್ ನವರೇನು ಕಡಿಮೆಯಾ’ ಎಂಬಂತಹ ನಿರಾಸೆಯ, ನಿಸ್ತೇಜಗೊಳಿಸುವ ಮಾತುಗಳನ್ನು ನಾವು ಸಾರಾಸಗಟು ತಿರಸ್ಕರಿಸಬೇಕಿದೆ. ಅಂಬೇಡ್ಕರರ ಪರಿಶ್ರಮ ವ್ಯರ್ಥವಾಗದಂತೆ ನೋಡಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಸಂವಿಧಾನವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಪ್ರಪ್ರಥಮ ಆದ್ಯ ಕರ್ತವ್ಯವಾಗಿದೆ. ಪ್ರತಿಕ್ರಾಂತಿಯನ್ನು ಹಿಮ್ಮೆಟ್ಟಿಸೋಣ, ಜನಕ್ರಾಂತಿಯನ್ನು ಸಾಧಿಸೋಣ ಸಂವಿಧಾನವನ್ನು ಸಂರಕ್ಷಿಸಿಕೊಳ್ಳೋಣ ಎಂದರು.

ಇದೇವೇಳೆ ಬಿಜೆಪಿ ಸೋಲಿಸಿ-ಕಾಂಗ್ರೆಸ್ ಗೆಲ್ಲಿಸಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಜೇವರ್ಗಿ ಹಾಗೂ ಯಡ್ರಾಮಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಶಿವಕುಮಾರ ಹೆಗಡೆ ಸೋನ್ನ, ಸಿದ್ರಾಮ ಕಟ್ಟಿ, ಭೀಮರಾಯ ನಗನೂರ, ಮಲ್ಲಣ್ಣ ಕೋಡಚಿ, ದವಲಪ್ಪ ಮದನಕರ್, ಶ್ರೀಹರಿ ಕರಕಳ್ಳಿ, ರವಿ ಕುಳಗೇರಿ, ಸಂಗಣ್ಣ ಹೋಸಮನಿ, ನಿಂಗಣ್ಣ ದರೇನ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...