ಕಲಬುರಗಿ | ಜಾತಿ, ಧರ್ಮದ‌ ಆಧಾರದಲ್ಲಿ ಸಮಾಜವನ್ನು ಇಬ್ಬಾಗಿಸುವವರೇ ನಿಜವಾದ ದೇಶದ್ರೋಹಿಗಳು: ಸಚಿವ ಪ್ರಿಯಾಂಕ್‌ ಖರ್ಗೆ

Date:

ಕೇಂದ್ರಿಯ ವಿವಿ ಬರಲು ನಡೆಸಿದ ಹೋರಾಟ ಕಣ್ಣ ಮುಂದಿದೆ. ಖರ್ಗೆ ಸಾಹೇಬರ ಪರಿಶ್ರಮ ಅಪರಿಮಿತವಾಗಿದೆ. ಇಲ್ಲಿನ‌ ಪರಿಸ್ಥಿತಿ ಗಮನಿಸಿದರೆ ಇಲ್ಲಿನ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಇದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ಜಾತಿ, ಧರ್ಮದ‌ ಆಧಾರದ ಮೇಲೆ‌ ಸಮಾಜವನ್ನು ಇಬ್ಭಾಗಿಸುವವರೇ ನಿಜವಾದ ದೇಶದ್ರೋಹಿಗಳು ಎಂದು ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಆಳಂದ ತಾಲೂಕಿನ ಕಡಗಂಚಿಯ ಕೇಂದ್ರಿಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘ ಏರ್ಪಡಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ತತ್ವಗಳು ವಿಚಾರಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಚಾರ ಸಂಕಿರಣ‌ ಏರ್ಪಡಿಸಲು ವಿವಿಯ ರಿಜಿಸ್ಟ್ರಾರ್ ಅವರ ಹಾಕಿರುವ ಷರತ್ತುಗಳ ಪತ್ರ ಪ್ರದರ್ಶಿಸಿ ಕಟುವಾಗಿ ಟೀಕಿಸಿದ ಸಚಿವರು, “ಶೈಕ್ಷಣಿಕ ಸಮಗ್ರತೆಗೆ ಧಕ್ಕೆ ತರದಂತೆ ಕಾರ್ಯಕ್ರಮ ನಡೆಸಬೇಕೆನ್ನುವ ಷರತ್ತು ಖಂಡನೀಯ. ಇಂದಿನ ಕಾರ್ಯಕ್ರಮದಲ್ಲಿ ಜನರಿಂದ ಆಯ್ಕೆಯಾದ ಈ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಭಾಗವಾಗಿರುವ ನಾನು ಭಾಗವಹಿಸುವ ಕಾರ್ಯಕ್ರಮಕ್ಕೆ ಇಷ್ಟೊಂದು ಷರತ್ತು ಹಾಗೂ ಪೊಲೀಸ್ ಭದ್ರತೆ ಹಾಕುವ ಅವಶ್ಯಕತೆ ಏನಿತ್ತು?. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ವಿವಿಯ ಕುಲಪತಿ ಅಥವಾ ರಿಜಿಸ್ಟ್ರಾರ್‌ಗೆ ಪತ್ರ ಬರೆಯಲು ಕೋರುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿವಿಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನಿನ ಅಡಿಯಲ್ಲಿ ಪ್ರಶ್ನಿಸಿ ನಾನು ನಿಮ್ಮೊಂದಿಗೆ ಇದ್ದೇನೆ, ಇರುತ್ತೇನೆ. ವಿವಿಗೆ ಬರದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಪದೇ ಪದೆ ಬರುತ್ತೇನೆ. ಒಟ್ಟಿನಲ್ಲಿ ಉಸಿರುಕಟ್ಟುವ ವಾತಾವರಣ‌ ನಿರ್ಮಾಣವಾಗದಂತೆ ತಡೆಯಬೇಕು” ಎಂದರು.

ವಿವಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಒಟ್ಟು 25 ಕೇಸುಗಳು ದಾಖಲಾಗಿರುವ ಬಗ್ಗೆ ಪೊಲೀಸರೊಂದಿಗೆ ವೇದಿಕೆಯಿಂದಲೇ ಮಾತನಾಡಿದ ಸಚಿವರು, ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಕೇಸುಗಳ ವಿವರವನ್ನು ನಾಳೆ ನನಗೆ ತಿಳಿಸಬೇಕು” ಎಂದು ಸ್ಥಳದಲ್ಲಿದ್ದ ಡಿಎಸ್‌ಪಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ʼಕೊನೆಯವರೆಗೆ ಬಯಲು ಸೀಮೆಗೆ ನೀರು ಕೊಡಿʼ ಎಂದು ಹೋರಾಡಿದವರು ಪರಮಶಿವಯ್ಯ: ಆಂಜನೇಯ ರೆಡ್ಡಿ

“ಭಾರತ ಪ್ರಪಂಚದ ಅತಿದೊಡ್ಡ ಪ್ರಜಾತಂತ್ರ ರಾಷ್ಟ್ರವಾಗಿ ಉಳಿದಿರುವುದಕ್ಕೆ ಕಾರಣವೇ ಸಂವಿಧಾನವಾಗಿದೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲಿ ಸಾಕಷ್ಟು ಚರ್ಚೆಗಳು ನಡೆದು ಕೊನೆಗೆ ಮಹಾತ್ಮಾ ಗಾಂಧಿ‌ ಅವರು ಡಾ ಬಾಬಾಸಾಹೇಬರಿಗೆ ಆ ಜವಾಬ್ದಾರಿ ವಹಿಸಿದರು. ಅದರಂತೆ ಏಳು ಮಂದಿ ಸದಸ್ಯರ ಸಮಿತಿ ರಚಿಸಲಾಯಿತು” ಎಂದು ವಿವರಿಸಿದರು.

ಮಾಹಿತಿ :ಸಹಜೀದ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...