ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

Date:

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ ನಡೆಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ತಿಳಿದುಬಂದಿದೆ ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಮೊಟ್ಟೆಗಳನ್ನು ಅಕ್ಟೋಬರ್, ನವೆಂಬರ್, ಡಿಸೆಂಬರ್ ಮೂರು ತಿಂಗಳ ಮಕ್ಕಳಿಗೆ ಒದಗಿಸದೇ ತತ್ತಿ ಪೂರೈಕೆ ಮಾಡುವ ಏಜೆಂಟರು ಅಂಗನವಾಡಿ ಕೇಂದ್ರಗಳ ಸಿಡಿಪಿಒ, ಸೂಪ್ರವೈಜರ್‌ಗಳನ್ನು, ಕಚೇರಿಯ ಸಿಬ್ಬಂದಿ ಸೇರಿದಂತೆ, ಅಂಗನವಾಡಿ ಕಾರ್ಯಕರ್ತೆಯರು ತತ್ತಿ ಪೂರೈಸದಿದ್ದರು, ಪೂರೈಸಿದ್ದಾರೆಂದು ನಕಲಿ ರಸಿದಿ ಪಡೆದು ಕೋಟಿಗಟ್ಟಲೇ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಬೆಲ್ಲ, ಬೇಳೆ, ಎಣ್ಣೆ ಮತ್ತಿತ್ತರ ಆಹಾರ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ಒದಗಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪೂರ್ಣ ಪ್ರಮಾಣದ ಸಾಮಗ್ರಿಗಳನ್ನು ಒದಗಿಸಿದ್ದಾರೆಂದು ಹಲವಾರು ವರ್ಷಗಳಿಂದ ಹಣ ಲೂಟಿ ಮಾಡಲಾಗುತ್ತಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಬಡ ಮತ್ತು ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಈ ಮಹತ್ವದ ಐಸಿಡಿಎಸ್ ಕಾರ್ಯಕ್ರಮ ಜಾರಿಗೊಳಿಸಿದ್ದು, ಈ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸೇರಿಕೊಂಡಿರುವ ಹೆಗ್ಗಣಗಳು ಸೇರಿಕೊಂಡು ಇಡಿ ಐಸಿಡಿಎಸ್ ಕಾರ್ಯಕ್ರಮದ ಉದ್ದೇಶವನ್ನೇ ನಿರ್ಥಕಗೊಳಿಸಿವ ಎಂದು ಹೇಳಿದರು.

ಈ ಬೃಹತ್ ಭ್ರಷ್ಟಚಾರ ಕುರಿತು ಸರ್ಕಾರವು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಉನ್ನತ ಮಟ್ಟದ ತನಿಖೆ ನಡೆಸಿ ಜಿಲ್ಲಾ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕೇಂದ್ರಗಳಿಗೆ ತತ್ತಿ ವಿತರಿಸುವ ತತ್ತಿ ಏಜೆನ್ಸಿ ಟೆಂಡ‌ರ್ ತೊಗೊಂಡು ವ್ಯಕ್ತಿ ಮೇಲೆ ಕ್ರಿಮಿನಲ್ ಕೆಸ್ ದಾಖಲಿಸಿ ಜೈಲಿಗೆ ಹಾಕಿ ಮಕ್ಕಳಿಗೆ ನ್ಯಾಯ ದೊರಕಿಸಿ ಕೊಡಲು ಮತ್ತು ಭ್ರಷ್ಟರನ್ನು ಶಿಕ್ಷಕೆಗೆ ಒಳಪಡಿಸಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕೆಪಿಆರ್‌ಎಸ್‌ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ ಅರ್ಜಿ ಸಲ್ಲಿಸಿ ಒಂದು ತಿಂಗಳ ಕಳೆದರು ಯಾವುದೇ ಕಾನೂನು ಕ್ರಮ ಕೈ ಗೊಂಡಿರುವುದಿಲ್ಲ ದೊಡ್ಡ ಪ್ರಮಾಣದ ಭ್ರಷ್ಟಾ ಚಾರ ಮುಚ್ಚಿ ಹಾಕುವ ಹುನ್ನಾರ ಎದ್ದು ಕಾಣುತ್ತದೆ. ಕ್ರಮ ಜರುಗಿಸದಿದ್ದರೆ ರೈತ ಸಂಘವು ಭಾರಿ ಪ್ರಮಾಣದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹೋರಾಟ ಮಾಡುವುದೆಂದು ಎಚ್ಚರಿಸಲಾಗುತ್ತದೆ ರಸ್ತಾ ರೋಖೋ ಚಳವಳಿ ನಡೆಸಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ದಿಲೀಪ್ ನಾಗೂರೇ, ರೇವಣಸಿದ್ಧಪ್ಪ, ಪ್ರೋ. ಪಾಟೀಲ್, ಜಾಫರ್ ಖಾನ್ ಮಿರಿಯಾಣ, ರಾಜಪ್ಪ ಪೂಜಾರಿ, ರಸೂಲ್ ಪಟೇಲ್, ರಾಜಪ್ಪ ಎಸ್. ಪಿ ಆರ್. ಎಸ್ ಇನ್ನಿರರು ಇದ್ದರು.

ಬೇಡಿಕೆಗಳು

1) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ತತ್ತಿ ಸಪ್ಲಾಯ್ ಮಾಡುವ ಮೇನ್ ಏಜೆನ್ಸಿ (ಟೆಂಡರ್) ಪಡೆದವರ ಕಂಪನಿ ಹೆಸರು ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನವರು. ವಿಕೆ ರಂಗರಾಜನ್ ಫ್ಯಾನ್ಸ್ ಅಂಡ್ಯ ಕಂಪನಿ ಕಲಬುರಗಿ ಗ್ರಾಮೀಣ ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತತ್ತಿ ಸಪ್ಲಾಯಿ ಮಾಡುತ್ತಾರೆ. ಇವರ ಮೇಲೆ ಸೂಕ್ತ ವಾದ ತನಿಖೆ ನಡೆಸಿ ಕ್ರಿಮಿನಲ್ ಪೊಲೀಸ್ ಕೆಸ್ ಹಾಕಿ ಟೆಂಡರ್ ರದ್ದುಪಡಿಸಿ ಜೈಲಿಗೆ ಕಳುಸಿ ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ನ್ಯಾಯ ಒದಗಿಸಬೇಕು.

2) ವಿಕೆ ರಂಗರಾಜನ್ ಫ್ರಾನ್ಸ್ ಆ್ಯಂಡ್ ಕಂಪನಿ ಮೆನ್ ಏಜೆನ್ಸಿಯು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ಸಬ್ ಏಜೆನ್ಸಿ ಗಳು ಇದ್ದಾರೆ ಇವರೆಲ್ಲರೂ ಮೇಲೂ ಸಹ ಕಾನೂನಿನ ಪ್ರಕಾರ ಸೂಕ್ತ ಕ್ರಮ ಜರುಗಿಸಿ ಇದರ ಒಳಗಡೆ ಶಾಮಿಲಾದ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮೇಲೆ ಸಹ ಸೇವೆಯಿಂದ ಅಮಾನತ್ತು ಮಾಡಬೇಕು ತಕ್ಷಣವೇ ಅವರ ಬಿಲ್ ತಡೆಹಿಡಿಯ ಬೇಕು.

3) ಕಲಬುರಗಿ ಜಿಲ್ಲೆಯ ಗ್ರಾಮೀಣ ತಾಲ್ಲೂಕಿನಲ್ಲಿ ಶಾಸಕರ ಆಪ್ತಾರಾ ಮೂಲಕ ಅಂಗನವಾಡಿ ಕೇಂದ್ರಗಳಿಗೆ ತತ್ತಿ ಸಪ್ಲಾಯಿ ಮಾಡುತ್ತಿದ್ದು ಅವರ ಮೇಲೂ ಸಹ ತನಿಖೆ ನಡೆಸಿ ಬಡವರ ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕು.

4) ಅಂಗನವಾಡಿ ಕೇಂದ್ರಗಳಿಗೆ ತತ್ತಿ ಸಪ್ಲಾಯಿ ಮಾಡುವಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿರುವ ಜೇವರ್ಗಿ ತಾಲೂಕು ಮತ್ತು ಅಫಜಲಪುರ ತಾಲೂಕಿನಲ್ಲಿ ವಿಶೇಷ ತನಿಖೆ ನಡೆಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...