ಜಿಲ್ಲೆಯ ಶಹಾಬಾದ ತಾಲೂಕಿನ ತೋನಸನಹಳ್ಳಿ (ಎಸ್) ಗ್ರಾಮ ಮಾರ್ಗವಾಗಿ ಜೇವರ್ಗಿಗೆ ಹೋಗುವ ರಸ್ತೆ ಹೊಂಡ, ಗುಂಡಿಗಳಿಂದ ತುಂಬಿ ಅಪಾಯಕಾರಿಯಾಗಿ ಮಾರ್ಪಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗ್ರಾಮದ ಮುಖ್ಯರಸ್ತೆ ತಡೆದು ಗ್ರಾಮಸ್ಥರು ಮತ್ತು ರೈತರು ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಮುಖಂಡ ಮರೆಪ್ಪ ಹಳ್ಳಿ ಮಾತನಾಡಿ, ‘ಪ್ರತಿದಿನ ಈ ಮಾರ್ಗವಾಗಿ ಶಹಾಬಾದ–ಜೇವರ್ಗಿ ಬಸ್ಗಳು ಸಂಚರಿಸುತ್ತಿದ್ದು, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಈ ಮಾರ್ಗದ ಮೂಲಕ ಸಂಚಾರ ಮಾಡುತ್ತಾರೆಂದು ತಿಳಿಸಿದರು. ಆದರೆ, ರಸ್ತೆ ಹದಗೆಟ್ಟಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ’ ಎಂದು ಹೇಳಿದರು.
ಇದನ್ನೂ ಓದಿ: ಕಲಬುರಗಿ | ಮಾನವೀಯ ತುರ್ತುಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ
ರಸ್ತೆಯ ದುಸ್ಥಿತಿಯ ಕಾರಣದಿಂದ ಚಿತ್ತಾಪೂರ-ಶಹಾಬಾದ ಮಾರ್ಗವಾಗಿ ಸಂಚರಿಸುವ ಜೇವರ್ಗಿ ಬಸ್ಗಳು ಸ್ಥಗಿತಗೊಂಡಿದ್ದು, ಇದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರಸ್ತೆ ದುರಸ್ತಿ ಕಾರ್ಯ ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು,” ಎಂದು ಗ್ರಾಮಸ್ಥರು ಎಚ್ಚರಿಸಿದರು.





