ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

Date:

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.

ಭೀಮಾ ನದಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ, ಅಲ್ಮೇಲ್, ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ, ಕಲಬುರಗಿ ಮತ್ತು ಚಿತ್ತಾಪುರ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಪತ್ರ ಬರೆದಿದ್ದು, ನೀರನ್ನು ಕಬ್ಬು ಬೆಳೆಗೆ ಹರಿಸದಿರುವಂತೆ ಎಚ್ಚರಿಸಿದ್ದಾರೆ.

ಬೇಸಿಗೆಗಾಗಿ ನೀರು ಉಳಿಸಬೇಕಿದ್ದು, ರೈತರು ತಮ್ಮ ಬೆಳೆಗಳಿಗೆ ನದಿಯಿಂದ ನೀರು ಹರಿಸಿದರೆ ಕಲಬುರಗಿ, ಅಫಜಲಪುರ, ಜೇವರ್ಗಿ ಮುಂತಾದ ನಗರಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ತೊಂದರೆಯಾಗುತ್ತದೆ. ಬೇಸಿಗೆಯಲ್ಲಿ ರೈತರಿಗೆ ಆಸರೆಯಾಗಿರುವ ಏಕೈಕ ಬೆಳೆ ಕಬ್ಬು. ಇದಕ್ಕೆ ನೀರು ಬೇಕೇ ಬೇಕು. ಆದರೆ, ಕುಡಿಯುವ ನೀರಿನ ಅವಶ್ಯಕತೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಕಷ್ಟಪಟ್ಟು ಕಬ್ಬು ಬೆಳೆದಿದ್ದೇವೆ, ಇಳುವರಿ ಕಡಿಮೆಯಾಗಿದೆ. ಈ ವರ್ಷ ಮಳೆಯಾಗದೇ ನಾವು ಸಂಕಷ್ಟದಲ್ಲಿದ್ದೇವೆ. ಈ ಬೇಸಿಗೆಯಲ್ಲಿ ಬೆಳೆ ಉಳಿಸಲು ಹೋರಾಡುತ್ತಿದ್ದೇವೆ. ನಮ್ಮಲ್ಲಿ ವಿದ್ಯುತ್ ಸಂಪರ್ಕಕೂಡ ಸ್ಥಗಿತಗೊಂಡಿದೆ ಎಂದು ಹೇಳುತ್ತಾರೆ ಅಫಜಲಪುರದ ರೈತರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಫಜಲಪುರ ತಹಸೀಲ್ದಾರ್ ಸಂಜೀವಕುಮಾರ ದಾಸರ್, ಶಾಸಕ ಎಂ.ವೈ.ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿದ್ದು, ನದಿ ದಡದಲ್ಲಿರುವ ಹೊಲಗಳಿಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯೋಚಿಸಲಾಗಿದೆ. ಭೀಮಾ ಮದಿಗೆ ಅಡ್ಡಲಾಗಿ ಸುಮಾರು ನಾಲ್ಕು ಬ್ಯಾರೇಜ್‌ಗಳಿವೆ. ನದಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ, ಭೀಮಾ ನದಿ ದಡದಲ್ಲಿರುವ ರೈತರು ಬೆಳೆಯುಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅಧಿಕಾರಿಗಳು ಕುಡಿಯುವ ನೀರನ್ನು ಉಳಿಸಿ ಬಳಸಲು ಯೋಚಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...