ಕಲಬುರಗಿ | ತೊಗರಿ ಬೆಲೆ ಹೆಚ್ಚಾದರೆ ರೈತರಿಗೇನು ಲಾಭ?; ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಅಸಮಾಧಾನ

Date:

ತೊಗರಿ ಬೆಳೆಗಾರರ ಹತ್ತಿರ ತೊಗರಿ ಇಲ್ಲದ ಸಮಯದಲ್ಲಿ ಬೆಲೆ ಗಗನಕ್ಕೇರಿದರೆ ತೊಗರಿ ಬೆಳೆಗಾರರಿಗೆ ಏನು ಲಾಭ? ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಬೆಲೆ ಹೆಚ್ಚಳವಾಗುವುದರಿಂದ ಕೇವಲ ವ್ಯಾಪಾರಸ್ಥರಿಗೆ ಮತ್ತು ಬಂಡವಾಳಶಾಹಿಗಳಿಗೆ, ಅದಾನಿ ಅಂಬಾನಿಗಳಿಗೆ, ದಲ್ಲಾಳಿಗಳಿಗೆ ಮಾತ್ರ ಲಾಭವಾಗುತ್ತದೆ. ಆದರೆ ತೊಗರಿ ಬೆಳೆಗಾರರಿಗೆ ಕವಡೆಯಷ್ಟೂ ಲಾಭವಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯಾಪಾರಸ್ಥರಿಗೆ ಮತ್ತು ದಲ್ಲಾಳಿಗಳಿಗೆ, ಬಂಡವಾಳಶಾಹಿಗಳಿಗೆ ಮಾತ್ರ ಲಾಭವಾಗುತ್ತಿದೆಯೇ ಹೊರತು ನಿಜವಾದ ಅನ್ನದಾತರಿಗೆ, ತೊಗರಿ ಬೆಳೆಗಾರರಿಗೆ ಲಾಭವಿಲ್ಲ. ಈ ಸಮಯದಲ್ಲಿಯೂ ತೊಗರಿ ಬೆಳೆಗಾರರು ಸಾಲದ ಮಡುವಿನಲ್ಲಿ ಒದ್ದಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ರಾಜ್ಯ ಮತ್ತು ದೇಶದಲ್ಲಿ 130 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಪ್ರೊಟೀನ್ ಉಪಯುಕ್ತವಾದ ತೊಗರಿ ಬೆಳೆ ಉತ್ಪಾದನೆ 3 ವರ್ಷಗಳಲ್ಲಿ ಕಡಿಮೆಯಾಗಿದೆ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಮತ್ತು ಅತಿವೃಷ್ಟಿ ಮಳೆಯಿಂದ ಹಾನಿಯಾದ ತೊಗರಿ ಅಲ್ಲದೆ ನೇಟೆ ರೋಗದಿಂದ ಒಣಗಿ ಹೋದ ತೊಗರಿ ಬೆಳೆ ತೊಗರಿ ಬೆಳೆಗಾರರಿಗೆ ಕೈ ಕೊಟ್ಟಂತಾಗಿದೆ. ಹೀಗಾಗಿ ನಾನಾ ರೀತಿಯ ಸಮಸ್ಯೆಗಳಿಂದಾಗಿ ಇಡೀ ದೇಶದಲ್ಲಿ ತೊಗರಿ ಬೆಳೆ ಉತ್ಪಾದನೆ ನೆಲಕಚ್ಚಿದರೂ ಕೇಂದ್ರ ಸರ್ಕಾರ ರೈತರ ನೆರವಿಗೆ ಬಾರದಿರುವುದು ದುರಂತವೇ ಸರಿ” ಎಂದು ಬೇಸರ ವ್ಯಕ್ತಪಡಿಸಿದರು.

“ಕಲಬುರಗಿ ಜಿಲ್ಲೆಯ ಜನಸಂಖ್ಯೆ 25.66 ಕೋಟಿ ಜನಸಂಖ್ಯೆ ಹೊಂದಿರುವ ನಮ್ಮ ಜಿಲ್ಲೆಯಲ್ಲಿ ಒಟ್ಟು 6.37 ಲಕ್ಷ ಮಂದಿ ರೈತರಿದ್ದಾರೆ. ಆದರೆ ತಿಂಗಳಿಗೆ ಸರಾಸರಿ 20 ಲಕ್ಷ ಕ್ವಿಂಟಲ್ ತೊಗರಿ ಬೇಳೆ ಬೇಕಾಗುತ್ತದೆ. 5 ತಿಂಗಳವರೆಗೆ ಎಷ್ಟು ತೊಗರಿ ಬೇಕಾಗಬಹುದೆಂದು ಆಂತಕ ಪಡುವಂತಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

“ಬರ್ಮಾ ದೇಶದಿಂದ ತೊಗರಿಯನ್ನು ಆಮದು ಮಾಡಿಕೊಂಡು ಪ್ರತಿ ಕ್ವಿಂಟಾಲ್ ತೊಗರಿಗೆ ಅಂದಾಜು ₹11,000 ಬೆಲೆ ಕೊಡುತ್ತಾರೆ. ಆದರೆ, ಇದೇ ನೆಲದ ಅನ್ನದಾತರಿಗೆ ಬೆಂಬಲ ಬೆಲೆ ನೀಡುವುದಿಲ್ಲ. ನಮ್ಮಲ್ಲಿಯೇ ಬೆಳೆಯುವ ಬೆಳೆಗಳನ್ನೂ ಹೊರದೇಶದಿಂದ ಆಮದು ಮಾಡಿಕೊಂಡರೆ ಇಲ್ಲಿಯ ರೈತರ ಗತಿ ಏನಾಗಬಹುದು ಎಂಬುದನ್ನು ಸರ್ಕಾರ ಯೋಚಿಸಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.

“ಈ ವರ್ಷ ತೊಗರಿ ನಾಡು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇನ್ನೂ ಕೆಲವು ತಾಲೂಕುಗಳಲ್ಲಿ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬಿತ್ತನೆಯೂ ಆಗಿಲ್ಲ. ಈ ವರ್ಷವೂ ಕೂಡ ತೊಗರಿ ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವುದು ತಿಳಿದುಬಂದಿದೆ. ಇದರಿಂದ ಮತ್ತಷ್ಟು ಆತಂಕ ಎದುರಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...