ಕಲಬುರಗಿ | ಮಕ್ಕಾ ಮಸೀದಿಯಲ್ಲಿ ರಂಜಾನ್ ಇಫ್ತಾರ್ ಕೂಟ: ಸಾಮರಸ್ಯದ ಸಂದೇಶ

Date:

ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ ರಂಜಾನ್ ಹಬ್ಬದ ಅಂಗವಾಗಿ ಇಫ್ತಾರ್ ಕೂಟವನ್ನು ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ರಂಜಾನ್ ಮಾಸದ ಮಹತ್ವವನ್ನು ವಿವರಿಸಿದರು.

ಇದೆ ವೇಳೆ ಗಣ್ಯರು ಮಾತನಾಡಿ, ‘ರಂಜಾನ್ ಮಾಸವು ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರ ಕಾಲವಾಗಿದ್ದು, ಇದು ಆತ್ಮಶುದ್ಧೀಕರಣ, ನಿಯಮಾನುಸರಣೆ ಮತ್ತು ಅಲ್ಲಾಹನಿಗೆ ಹತ್ತಿರವಾಗುವ ಸಮಯವಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಉಪವಾಸದ ಮೂಲಕ ಶಾರೀರಿಕ ಮತ್ತು ಮಾನಸಿಕ ನಿಯಂತ್ರಣ ಸಾಧಿಸುವುದರ ಜೊತೆಗೆ, ಬಡವರ ನೋವು-ನಲಿವುಗಳನ್ನು ಅರಿಯುವ ಮಾನವೀಯತೆ ಬೆಳೆಸಿಕೊಳ್ಳಲು ಅವಕಾಶ ಸಿಗುತ್ತದೆ’ ಎಂದು ತಿಳಿಸಿದರು.

‘ರಂಜಾನ್ ತಿಂಗಳಲ್ಲಿ ಪ್ರತಿದಿನ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ‘ರೋಜಾ’ ಉಪವಾಸವನ್ನು ಆಚರಿಸುವುದು ಕಡ್ಡಾಯವಾಗಿದ್ದು, ಇದು ಕೇವಲ ಆಹಾರ ತ್ಯಾಗವಲ್ಲದೆ, ಕೆಟ್ಟ ಆಲೋಚನೆಗಳು, ಅಸಹನೀಯತೆ ಹಾಗೂ ಅನೈತಿಕ ವರ್ತನೆಗಳಿಂದ ದೂರವಿರುವ ಶಿಸ್ತಿನ ಜೀವನಕ್ಕೆ ಮಾರ್ಗದರ್ಶನ ನೀಡುತ್ತದೆ’ ಎಂದು ವಿವರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1588093

‘ಈ ಪವಿತ್ರ ಅವಧಿಯಲ್ಲಿ ಕುರಾನ್ ಪಠಣಕ್ಕೆ ವಿಶೇಷ ಮಹತ್ವವಿದ್ದು, ಪ್ರತಿಯೊಬ್ಬರೂ ತಮ್ಮ ಜೀವನವನ್ನು ಸತ್ಯನಿಷ್ಠೆಯಿಂದ ನಡೆಸಿಕೊಳ್ಳುವಂತೆ ಪ್ರೇರಣೆ ಪಡೆಯುತ್ತಾರೆ. ಜೊತೆಗೆ, ಬಡವರಿಗಾಗಿ ಝಕಾತ್ ಮತ್ತು ಫಿತ್ರ ರೂಪದಲ್ಲಿ ದಾನ ಮಾಡುವುದನ್ನು ಧಾರ್ಮಿಕ ಕರ್ತವ್ಯವಾಗಿ ಪರಿಗಣಿಸಲಾಗುತ್ತದೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು ‘ಧರ್ಮ, ಜಾತಿ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಕಾಪಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಇಫ್ತಾರ್ ಕೂಟವು ಕೇವಲ ಉಪವಾಸ ಮುರಿಯುವ ಕಾರ್ಯಕ್ರಮವಲ್ಲ, ಪರಸ್ಪರ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಗಿದೆ’ ಎಂದು ಹೇಳಿದರು.

ರಂಜಾನ್ ಅಂತ್ಯದಲ್ಲಿ ಚಂದ್ರದರ್ಶನವಾದ ನಂತರ ಷವ್ವಾಲ್ ತಿಂಗಳ ಮೊದಲ ದಿನ ಈದ್-ಉಲ್-ಫಿತರ್ ಹಬ್ಬವನ್ನು ಭರ್ಜರಿಯಾಗಿ ಆಚರಿಸಲಾಗುತ್ತದೆ. ಆ ದಿನ ವಿಶೇಷ ನಮಾಜ್ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂತೋಷವನ್ನು ಹಂಚಿಕೊಳ್ಳುವುದು ಸಂಪ್ರದಾಯವಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮಾ. 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ

ಇಫ್ತಾರ್ ಕೂಟದಲ್ಲಿ ಅನೇಕ ಮುಸ್ಲಿಂ ಬಾಂಧವರು, ಯುವಕರು ಹಾಗೂ ವಿವಿಧ ಸಮುದಾಯದ ಜನರು ಭಾಗವಹಿಸಿ, ಉಪವಾಸ ಮುರಿದು ಸಾಮರಸ್ಯದ ಸಂದೇಶವನ್ನು ಸಾರಿದರು. ಕಾರ್ಯಕ್ರಮವು ಸೌಹಾರ್ದ ಮತ್ತು ಏಕತೆ ಸಾರುವ ಮೂಲಕ ಯಶಸ್ವಿಯಾಗಿ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...