ಕಲಬುರಗಿ | ಬಿಕ್ಕಟ್ಟಿನ ಸ್ಥಿತಿಯಲ್ಲಿವೆ ಅಂಗನವಾಡಿ ಕೇಂದ್ರಗಳು

Date:

ಅಂಗನವಾಡಿ ಕೇಂದ್ರಗಳು ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಸೇವೆ ನೀಡುವ ದೃಢವಾದ ವೇದಿಕೆಗಳಾಗಿವೆ. ಅಂಗನವಾಡಿಗಳು ಮಗುವಿನ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕುವ ಸಮುದಾಯ ಸ್ಥಳಗಳಾಗಿವೆ. ಅಂಗನವಾಡಿ ಕೇಂದ್ರಗಳ ಸೇವಾ ವಿತರಣೆಯು ಸಮುದಾಯದ ಒಳಗೊಳ್ಳುವಿಕೆಯ ಮೇಲೆ ಅವಲಂಬಿತವಾಗಿದೆ. ಮೂಲಸೌಕರ್ಯ ಲಭ್ಯತೆ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯ ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ.

ಸ್ಥಳೀಯವಾಗಿ ಇಷ್ಟೆಲ್ಲ ಸೇವೆ ಒಗಿಸವು ಅಂಗನವಾಡಿ ಕೇಂದ್ರಗಳು ಕಲಬುರಗಿ ಜಿಲ್ಲೆಯಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿವೆ. ಜಿಲ್ಲೆಯ ಆಳಂದ ತಾಲ್ಲೂಕಿನ ಕೊಡಲಹಂಗರಗಾ ಗ್ರಾಮದ ಅಂಗನವಾಡಿ ಕೇಂದ್ರಗಳ ಸ್ಥಿತಿಯಂತೂ ಹೇಳತೀರದಂತಿದೆ.

ಗ್ರಾಮದ ಅಂಗನವಾಡಿ ಕೇಂದ್ರ ಸಂ.2ರಲ್ಲಿ ವಿದ್ಯುತ್ ಸಮಸ್ಯೆಯಿಂದ ಮಕ್ಕಳು ಬೇಸಿಗೆಯ ಬೇಗೆಯಲ್ಲಿ ಬಳಲುವಂತಾಗಿದೆ. ಕೇಂದ್ರದಲ್ಲಿ ಫ್ಯಾನ್‌ ಇದ್ದರೂ, ಅದನ್ನು ಉಪಯೋಗಿಸಲಾಗುತ್ತಿಲ್ಲ. ಅಡುಗೆ ಕೋಣೆ ಮಳೆಗಾಲದಲ್ಲಿ ಸೋರುತ್ತದೆ. ಶೌಚಾಲಯ ಇದ್ದರೂ, ಅದಕ್ಕೆ ನೀರಿನ ವ್ಯವಸ್ಥೆ ಇಲ್ಲ. ಅಂಗನವಾಡಿಗೆ ಕಾಂಪೌಡ್ ಗೊಡೆಯೂ ಇಲ್ಲ. ಸಣ್ಣ ಮಕ್ಕಳು ರಸ್ತೆಗೆ ಹೋದರೆ, ಅನಾಹುತ ಎದುರಾಗುವ ಭೀತಿ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಡುತ್ತಲೇ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಗನವಾಡಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಧೋರಣೆ ತಳೆದಿದೆ. ಮಕ್ಕಳ ಪೋಷಕರು ಸಮಸ್ಯೆಗಳ ಬಗ್ಗೆ ನಮ್ಮನ್ನು ಪ್ರಶ್ನಿಸುತ್ತಾರೆ. ಅದರೆ, ನಾವು ಏನು ಮಾಡಲಾಗದ ಪರಿಸ್ಥಿತಿಯಲ್ಲಿದ್ದೇವೆ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಹೇಳುತ್ತಾರೆ.

ಇನ್ನು, ಗ್ರಾಮದ ಅಂಗನವಾಡಿ ಕೇಂದ್ರ ಸಂ.3ರಲ್ಲಿ ಅಂಗನವಾಡಿಗೆ ಸ್ವತ ಕಟ್ಟಡವೇ ಇಲ್ಲ. 13 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಹಲವು ಸಂದರ್ಭಗಳಲ್ಲಿ ಸರಿಯಾಗಿ ಬಾಡಿಗೆ ಪಾವತಿಸದೆ, ಕಟ್ಟಡದ ಮಾಲೀಕರು ಖಾಲಿ ಮಾಡಿಸಿರುವ ಪ್ರಹಸನಗಳೂ ನಡೆದಿವೆ. ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಅಂಗನವಾಡಿ ಸ್ಥಳಾಂತರವಾಗುತ್ತಲೇ ಇದೆ.

“ಕೆಲವು ಸಂದರ್ಭಗಳಲ್ಲಿ ಬಾಡಿಗೆ ಮನೆಗಳು ಸಿಗದೆ, ನನ್ನ ಸ್ವಂತ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸಿದ್ದೇನೆ. ಮಕ್ಕಳಿಗೆ ಪೂರ್ವ ಶಾಲಾ ಶಿಕ್ಷಣ ಅತಿ ಮುಖ್ಯ. ಆದರೆ, ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲದಿರುವುದು ಬೇಸರ ತಂದಿದೆ” ಎಂದು ಅಂಗನವಾಡಿ ಕಾರ್ಯಕರ್ತೆ ರೇಣುಕಾ ಹೇಳಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಗ್ರಾಮದ ಅಂಗನವಾಡಿ ಕೇಂದ್ರ ಸಂ.1ರ ಕಾರ್ಯಕರ್ತೆ ಸುನೀತಾ, “ಅಂಗನವಾಡಿಗೆ ಸ್ವಂತ ಕಟ್ಟಡವಿದೆ. ಆದರೆ, ಒಂದೇ ಕೋಣೆ ಇರುವ ಕಾರಣ ಬಾಡಿಗೆ ಮನೆ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ಇರುವ ಕಟ್ಟಡವು ಮಳೆಗಾಲದಲ್ಲಿ ಸೋರುತ್ತದೆ. ಮಳೆ ಸುರಿಯುವ ಸಮಯದಲ್ಲಿ ನೀರು ಸೋರುವ ಜಾಗಕ್ಕೆ ಬಕೆಟ್‌ಗಳನ್ನು ಇಟ್ಟು, ಮಕ್ಕಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಇದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...