ಕಲಬುರಗಿ | ಜಾತಿನಿಂದನೆ ಆರೋಪ: ಶಾಸಕ ಬಿ.ಆರ್ ಪಾಟೀಲ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

Date:

ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರಿಗೆ ಜಾತಿನಿಂದನೆ ಮಾಡಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಆಳಂದ ಮಂಡಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸೋಮವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಶಾಸಕ ಬಿ.ಆರ್.ಪಾಟೀಲ ಅವರ ಪ್ರತಿಕೃತಿ ದಹಿಸಿ ಘೋಷಣೆ ಕೂಗಿದರು.

ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ, “ಶಾಸಕ ಬಿ.ಆರ್.ಪಾಟೀಲ ನಕಲಿ ಸಮಾಜವಾದಿಯಾಗಿದ್ದಾರೆ. ಕೇವಲ ಚುನಾವಣೆ ಗೆಲ್ಲುವುದಕ್ಕಾಗಿ ಮಾತ್ರ ಬಣ್ಣದ ಮಾತುಗಳನ್ನು ಹೇಳುತ್ತಾರೆ. ಬಿ.ಆರ್. ಪಾಟೀಲರಿಗೆ ಅಸಲಿಗೆ ಸಿದ್ಧಾಂತ ಎನ್ನುವುದೇ ಇಲ್ಲ. ಅವರೊಬ್ಬ ಸಮಯಸಾಧಕ ರಾಜಕಾರಣಿ. ಸಮಾಜದ ಯಾವ ವರ್ಗದ ಬಗ್ಗೆಯೂ ಅವರಿಗೆ ಕಾಳಜಿಯಿಲ್ಲ. ಈ ಹಿಂದೆಯೂ ಅನೇಕ ಬಾರಿ ಸಮಾಜದ್ರೋಹಿ ಹೇಳಿಕೆ ಮೂಲಕ ಸಮಾಜವನ್ನು ಒಡೆಯುವುದು, ಸಾಮರಸ್ಯ ಕೆಡಿಸುವ ಹೇಳಿಕೆ ನೀಡಿದ್ದಾರೆ ಇಂಥವರು ಶಾಸಕ ಸ್ಥಾನದಲ್ಲಿ ಮುಂದುವರೆಯಲು ಅರ್ಹತೆಯಿಲ್ಲ. ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಮುಖಂಡ ಬಸವರಾಜ ಬಿರಾದಾರ ಮಾತನಾಡಿ, “ಶಾಸಕ ಬಿ.ಆರ್.ಪಾಟೀಲ ತಮ್ಮ ಕಾರ್ಯಕರ್ತರ ಜೊತೆಗೆ ದೂರವಾಣಿ ಮೂಲಕ ಮಾತನಾಡುವಾಗ ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರಿಗೆ ಜಾತಿ ನಿಂದನೆ ಮಾಡಿ ಅವಹೇಳನ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ. ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲೆಂದೇ ಜಾತಿ ನಿಂದನೆ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ದೂರವಾಣಿಯಲ್ಲಿ, ಜಾತಿವಾದಿ ಟೀಕೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು” ಎಂದು ಆರೋಪಿಸಿದರು.

“ಸಂವಿಧಾನ ಬದ್ದವಾಗಿ ಪ್ರಮಾಣ ವಚನ ಸ್ವೀಕರಿಸಿ ಜಾತಿನಿಂದನೆ ಮಾಡಿ ಸಂವಿಧಾನಕ್ಕೆ ಮತ್ತು ಶಾಸಕ ಸ್ಥಾನಕ್ಕೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಇವರ ಮೇಲೆ ಜಾತಿನಿಂದನೆ ಪ್ರಕರಣ ದಾಖಲಿಸಲು ಸೂಕ್ತ ನಿರ್ದೇಶನ ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು” ಒತ್ತಾಯಿಸಿದರು.

ಈ ಸುದ್ದಿ ಓದಿದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ

ಈ ಸಂದರ್ಭದಲ್ಲಿ ಮುಖಂಡರಾದ ಹಣಮಂತರಾವ ಕಾಬಡೆ, ಗೊರಖನಾಥ ದೊಡ್ಡಮನಿ, ಮಲ್ಲಿಕಾರ್ಜುನ ಕಂದಗೂಳೆ, ಮಲ್ಲಣ್ಣ ನಾಗೂರೆ, ಮಲ್ಲಿಕಾರ್ಜುನ ತಡಕಲ, ಚಂದ್ರಕಾಂತ ಭೂಸನೂರ, ರುದ್ರಯ್ಯ ಹಿರೇಮಠ, ಶ್ರೀಮಂತ ನಾಮಣೆ, ಶಿವಪುತ್ರ ಬೆಳ್ಳೆ, ಅಮೃತ ಬಿಬ್ರಾಣಿ, ಆದಿನಾಥ ಹೀರಾ, ಜಗನ್ನಾಥ ಹೊಸಕುರುಬ, ಗೌಡಪ್ಪ ಪಾಟೀಲ, ಪ್ರಭಾಕರ ರಾಮಜಿ, ಅಶೋಕ ಗುತ್ತೇದಾರ, ಶಿವಾನಂದ ಪಾಟೀಲ, ಶರಣಗೌಡ ಪಾಟೀಲ. ಸುಭಾಷ ಪಾಟೀಲ, ರಮೇಶ ಪಾಟೀಲ, ತಿಪ್ಪಯ್ಯ ಗುತ್ತೇದಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...