ಕಲಬುರಗಿ | ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ₹25 ಕೋಟಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಮನವಿ

Date:

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು.

ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ನೇತೃತ್ವದ ಮಂಗಳವಾರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ವಿಕ್ರಮ್ ತೇಜಸ್ ಮಾತನಾಡಿ, ‘ರಾಜ್ಯ ಸರ್ಕಾರವು ಈಗಾಗಲೇ ಸ್ಮಾರಕ ನಿರ್ಮಾಣಕ್ಕಾಗಿ 10 ಎಕರೆ ಭೂಮಿಯನ್ನು ಮಂಜೂರು ಮಾಡಿ ₹3 ಕೋಟಿ ಅನುದಾನ ನೀಡಿರುವುದನ್ನು ಉಲ್ಲೇಖಿಸಿ, ಯೋಜನೆಯ ವಿಸ್ತಾರವನ್ನು ಗಮನಿಸಿದರೆ ಈ ಅನುದಾನ ಅಪರ್ಯಾಪ್ತವಾಗಿದೆ’ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸ್ಮಾರಕದ ಅಂಗವಾಗಿ ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಅಂತರಾಷ್ಟ್ರೀಯ ಮಟ್ಟದ ಗ್ರಂಥಾಲಯ, ಉದ್ಯಾನವನ, ಬೌದ್ಧಧಮ್ಮ ಅಧ್ಯಯನ ಕೇಂದ್ರ, ಸಭಾಂಗಣ, ಅತಿಥಿಗೃಹ ಹಾಗೂ ಬಾಬಾ ಸಾಹೇಬರು ಸ್ಥಳೀಯರೊಂದಿಗೆ ತೆಗೆಸಿಕೊಂಡ ಭಾವಚಿತ್ರದ ಬೃಹತ್ ಪ್ರತಿಮೆ ನಿರ್ಮಾಣದ ಯೋಜನೆ ಹೊಂದಲಾಗಿದೆ. ಜೊತೆಗೆ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿ-ಯುವಕರಿಗಾಗಿ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಐಎಎಸ್, ಐಪಿಎಸ್, ಕೆಎಎಸ್, ಐಎಫ್‌ಎಸ್, ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಿದೆ’ ಎಂದು ವಿವರಿಸಿದರು.

‘ಅಂಬೇಡ್ಕರ್ ಅವರು ವಾಡಿ ಭೇಟಿಯ ಕುರಿತು ಸಂಶೋಧನಾ ಗ್ರಂಥ ರಚನೆಗಾಗಿ ₹10 ಲಕ್ಷ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಸಮಿತಿ ಮನವಿ ಮಾಡಿದೆ. ಸ್ಮಾರಕ ನಿರ್ಮಾಣಕ್ಕೆ ಮಂಜೂರಾದ ಭೂಮಿಯನ್ನು ಸ್ಮಾರಕದ ಹೆಸರಿಗೆ ನೊಂದಣಿ ಮಾಡಿ, ಬೇರೆ ಯಾವುದೇ ಯೋಜನೆಗೆ ಬಳಸಬಾರದು ಎಂಬಂತೆ ಸರ್ಕಾರದಿಂದ ಸ್ಪಷ್ಟ ಆದೇಶ ಹೊರಡಿಸಬೇಕು. ಸಮಗ್ರ ನೀಲನಕ್ಷೆ ಸಿದ್ಧಪಡಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಜೊತೆಗೆ ಕಟ್ಟಡಗಳನ್ನು ಬೌದ್ಧ ವಾಸ್ತುಶಿಲ್ಪ ಮಾದರಿಯಲ್ಲಿ ನಿರ್ಮಿಸಬೇಕು’ ಎಂದು ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬೆಂಕಿ ಅವಘಡ; ₹50 ಲಕ್ಷಕ್ಕೂ ಅಧಿಕ ನಷ್ಟ

ಈ ಸಂದರ್ಭದಲ್ಲಿ ಪಿಎಂಕೆ ಫ್ಯಾನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರವಿ ಕೋಳಕೂರ, ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಖಜಾಂಚಿ ಸಿದ್ದರಾಮ ನಡಗೇರಿ, ಸಾಮಾಜಿಕ ಕಾರ್ಯಕರ್ತೆ ರಮಾ ದೊಡ್ಡಮನಿ ಹಾಗೂ ಭೀಮರತ್ನ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಮೈಲಾರಿ ದೊಡ್ಡಮನಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...