ಕಾರ್ಕಳ ಹತ್ತಿರ ಕ್ರೂಸರ್ ಬಸ್ ಮುಖಾಮುಖಿ : ಕಲಬುರಗಿ ಜಿಲ್ಲೆಯ ನಾಲ್ವರು ಸ್ಥಳದಲ್ಲೇ ಮೃತ

Date:

ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್ (ತೂಫಾನ್) ವಾಹನ ಮತ್ತು ರಾಜ್ಯ ಸಾರಿಗೆ ಬಸ್ ನಡುವೆ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಕಲಬುರಗಿ ಜಿಲ್ಲೆಯ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಗ್ರಾಮದ ಚೇತನ್ ಮಾದರ (18), ರೋಹಿದಾಸ್ ಮಾದರ (19), ಮಲ್ಲಮ್ಮ (45) ಹಾಗೂ ಕ್ರೂಸರ್ ಚಾಲಕ ಮಾನಪ್ಪ (30) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಕ್ರೂಸರ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ದೇವಲ ಗಾಣಗಾಪುರದ ಒಂದೇ ಕುಟುಂಬದ 12 ಮಂದಿ ಕ್ರೂಸರ್ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಕಳದಿಂದ ಉಡುಪಿಯತ್ತ ಸಂಚರಿಸುತ್ತಿದ್ದ ವೇಳೆ ಕಾರ್ಕಳ ಸಮೀಪ ಎದುರಿನಿಂದ ಬಂದ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.

ದುರ್ಘಟನೆಯಲ್ಲಿ ಗಾಯಗೊಂಡ ಇನ್ನೂ 9 ಮಂದಿಯನ್ನು ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸಂಗೀತ ಎಂಬವರಿಗೆ ಒಂದು ಕೈ ಹಾಗೂ ಕಾಲು ಮುರಿದಿರುವುದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಶಾಂತಿ, ಸಮಾನತೆಯ ಸಂದೇಶದೊಂದಿಗೆ ಪ್ರಬುದ್ಧ ಬುದ್ಧ ವಿಹಾರ ಉದ್ಘಾಟನೆ

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ದೇವಲ ಗಾಣಗಾಪುರ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಈ ಸಂಬಂಧ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...