ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿಗಳು ಸಾಥ್‌ ನೀಡಿವೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ನೆರೆಯ ತೆಲಂಗಾಣದಲ್ಲಿ ಸಾಥ್‌ ನೀಡಿದ ಪರಿಣಾಮ ಜನರು ಕಾಂಗ್ರೇಸ್‌ ಗೆ ಆಶೀರ್ವಾದ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಐಟಿಎಫ್ ಕಲಬುರಗಿ ಫೈನಲ್ ಪಂದ್ಯ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ಭರವಸೆ ನೀಡಿದ ಆರು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಕೊಂಡು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಇದೇ ಜನಪರ ಯೋಜನೆ ಹಾಗೂ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡುವ ಯೋಜನೆಗಳನ್ನು ಇಟ್ಟುಕೊಂಡೇ ನಾವು ಛತ್ತೀಸ್ ಗಡ್, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಪ್ರಣಾಳಿಕೆ ತಯಾರಿಸಲಾಗಿತ್ತು. ಆದರೆ ಹಿನ್ನಡೆ ಆಗಿರುವುದು ನಿಜವಾದರೂ, ಪೂರ್ಣ ಫಲಿತಾಂಶದ ಬಳಿಕ ಪಕ್ಷದ ವರಿಷ್ಠರು ಕುಳಿತು ಪರಾಮರ್ಶೆ ನಡೆಸಲಿದ್ದಾರೆ” ಎಂದು ನುಡಿದರು.

“ತೆಲಂಗಾಣದಲ್ಲಿ ಬಿ.ಆರ್.ಎಸ್ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆಯಾಗಿದೆ. ನಾನು ಚುನಾವಣೆ ಪ್ರಚಾರಕ್ಕೆ ಹೋಗಿದ್ದೇನೆ, ಕಳೆದ ಹತ್ತು ವರ್ಷದ ಕೆಸಿಆರ್ ಆಡಳಿತದಲ್ಲಿ 10 ಹಗರಣಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಲೇಶ್ವರಂ ನೀರಾವರಿ ಯೋಜನೆ ಒಂದೇ 1.50 ಲಕ್ಷ ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಅಲ್ಲಿನ ಜನರು ಮಾತ‌ನಾಡಿಕೊಳ್ಳುತ್ತಿದ್ದರು. ಇದನ್ನು ಮನಗಂಡ ಮತದಾರರು ತೆಲಂಗಾಣ ಉಳಿಯಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂದು ಪಣತೊಟ್ಟು ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ನಮ್ಮದು ಜನಪರ ನಿಲುವು, ಆದರೆ ಬಿಜೆಪಿ ಜಾತಿ-ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ. ಅವರ ಒಂದೇ ಒಂದು‌ ಜನಪರ ಹಾಗೂ ಆರ್ಥಿಕ‌ ಸಬಲತೆ ಮೂಡಿಸುವ ಕಾರ್ಯಕ್ರಮಗಳು ಇಲ್ಲ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, “ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಕಳೆದ ಬಾರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೂ ಬಿಜೆಪಿ ಅಪರೇಷನ್ ಕಮಲದ ಮೂಲಕ ಅಧಿಕಾರಕ್ಕೇರಿತು. ಕರ್ನಾಟಕದಲ್ಲಿ ಮಾಡಿದಂತೆಯೇ ಮಧ್ಯಪ್ರದೇಶಲ್ಲಿ ಬಿಜೆಪಿಯವರು ಅಪರೇಷನ್ ಮೂಲಕ ಅಧಿಕಾರ ನಡೆಸಿದರು. ಕಾಂಗ್ರೇಸ್‌ ಪ್ರಜಾಪ್ರಭುತ್ವದ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಪಕ್ಷ, ನಾವು ಬಿಜೆಪಿಯವರಂತೆ ಅಪರೇಶನ್‌ ಮಾಡುವುದಿಲ್ಲ” ಎಂದರು.

ಪಂಚರಾಜ್ಯ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ:

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ನುಡಿದರು. .

ಈ ಸುದ್ದಿ ಓದಿದ್ದೀರಾ? ದೇಶವನ್ನು ಆಳುವ ನಾಯಕತ್ವ ಇರುವುದು ಬಿಜೆಪಿಗೆ ಮಾತ್ರ: ಯಡಿಯೂರಪ್ಪ

“ಆಯಾ ರಾಜ್ಯಗಳ ಚುನಾವಣೆಯೇ ಬೇರೆ. ರಾಷ್ಟ್ರೀಯ ಚುನಾವಣೆ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಅಲ್ಲ ಎಂದರು. ಅಪರೇಶನ್‌ ಕಮಲ ಶುರು ಮಾಡಿದ್ದೇ ಬಿಜೆಪಿ, ಅಧಿಕಾರಕ್ಕಾಗಿ ಅವರು ರಂಗೋಲಿ ಕೆಳಗೂ ನುಗ್ಗುತ್ತಾರೆ. ಆದರೆ ನಮಗೆ ಯಾವುದೇ ಅಪರೇಷನ್ ಬಗ್ಗೆ ಭಯವಿಲ್ಲ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇ.ಡಿ ಬಳಕೆ ಮಾಡುತ್ತಾರೆ, ಹೀಗಾಗಿ ನಮ್ಮ ಶಾಸಕರನ್ನು ನಾವು ಸುರಕ್ಷಿತವಾಗಿಟ್ಟುಕೊಳ್ಳಬೇಕಿದೆ” ಎಂದು ಟೀಕಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...