ಸೇಡಂ ತಾಲೂಕಿನ ಬಿರನಹಳ್ಳಿ ಗ್ರಾಮದ ಸಮೀಪ ಹರಿಯುವ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಶಿವಪ್ರಕಾಶ ಬೆಳಮಗಿ (27) ನಾಪತ್ತೆಯಾಗಿರುವ ಯುವಕನಾಗಿದ್ದು, ಅವರು ಆಳಂದ ತಾಲೂಕಿನ ಬೆಳಮಗಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಬಿರನಹಳ್ಳಿ ಗ್ರಾಮದ ಐದು ಮಂದಿ ಗೆಳೆಯರೊಂದಿಗೆ ಪಾರ್ಟಿ ಮುಗಿಸಿಕೊಂಡು ಕಾಗಿಣಾ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಶಿವಪ್ರಕಾಶ ಅವರು ಜಿಯೋ ಪೆಟ್ರೋಲ್ ಬಂಕ್ನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಯಾಂತ್ರಿಕ ಬೋಟ್ ಸಹಾಯದಿಂದ ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅಗ್ನಿಶಾಮಕ ದಳದ ಪ್ರಭಾರಿ ಠಾಣಾಧಿಕಾರಿ ಬಸಪ್ಪ ಎಂ, ಪ್ರಮುಖ ಅಗ್ನಿಶಾಮಕ ಶರಣಯ್ಯ ಗುತ್ತೇದಾರ್, ಮಳಖೇಡ ಎಎಸ್ಐ ಯಲಗುರೇಶ, ಸಂಜು ಕುಮಾರ್, ಪೊಲೀಸ್ ಶರಣಪ್ಪ, ಡಿಎಂ ವಾಜಿದ್, ಅಗ್ನಿಶಾಮಕ ಚಾಲಕ ಮೂಲಿಮನಿ, ಸುನಿಲ್, ಕಿರಣ್ ಕೆ ಹಾಗೂ ಯುವರಾಜ್ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ : ಕುಡಿದ ಮತ್ತಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ
ಈ ಸಂಬಂಧ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





