ಕಲಬುರಗಿ | ಭೂಸ್ವಾಧೀನ ಪರಿಹಾರ ವಿಳಂಬ ಆರೋಪ: ಜಿಲ್ಲಾಧಿಕಾರಿ ಕಾರು ಜಪ್ತಿ

Date:

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷಗಳಿಂದ ಪರಿಹಾರ ಪಾವತಿಸದೆ ವಿಳಂಬ ಮಾಡಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡುವಂತೆ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ದಿವಾಣಿ ಹಿರಿಯ ಶ್ರೇಣಿ ನ್ಯಾಯಾಧೀಶರು ಕೇಸ್ ನಂ. 59/19 ವಿಚಾರಣೆ ನಡೆಸಿ, ಪರಿಹಾರ ಪಾವತಿಯಲ್ಲಿ ಉಂಟಾದ ದೀರ್ಘಕಾಲದ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿದರು. ಅದರಂತೆ ಜಿಲ್ಲಾಧಿಕಾರಿಗಳ ಅಧಿಕೃತ ವಾಹನ ಇನ್ನೋವಾ ಕ್ರಿಷ್ಟಾ(ಕೆ.ಎ 32 ಜಿ 9990) ಕಾರನ್ನು ಜಪ್ತಿ ಮಾಡಲು ಆದೇಶ ಹೊರಡಿಸಲಾಗಿದೆ.

ಪ್ರಕಾಶ್ ಮಕಲಪ್ಪ ಎಂಬ ಭೂಸ್ವಾಮಿ, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದರೂ ಪರಿಹಾರ ನೀಡದಿರುವ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಹಲವು ವರ್ಷಗಳಿಂದ ಮುಂದುವರೆದಿದ್ದರೂ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಸ್ಪಷ್ಟ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ನಿಲುವು ತಾಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದೇಶ ಹೊರಬಿದ್ದ ಬಳಿಕ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಸಹಾಯಕ ಆಯುಕ್ತ ಸಾಹಿತ್ಯ ಆಲದಕಟ್ಟಿ ನ್ಯಾಯಾಲಯಕ್ಕೆ ಆಗಮಿಸಿ ವಕೀಲರೊಂದಿಗೆ ಚರ್ಚೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ಸುದ್ದಿ ಓದಿದ್ದೀರಾ? ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

ನ್ಯಾಯಾಲಯದ ಈ ಕ್ರಮ ಜಿಲ್ಲಾಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭೂಸ್ವಾಧೀನ ಪ್ರಕರಣಗಳಲ್ಲಿ ಪರಿಹಾರ ಪಾವತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಅಗತ್ಯತೆಯನ್ನು ಮತ್ತೊಮ್ಮೆ ಒತ್ತಿಹೇಳಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...