ಕಲಬುರಗಿ ನಗರದ ಬ್ರಹ್ಮಪೂರ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸಿ ಮುಚ್ಚುವ ಕ್ರಮ ಖಂಡಿಸಿ, ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.
ಕಲಬುರಗಿಯ ತಿಮ್ಮಾಪುರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ನವೋದಯ ಹಾಗೂ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕರ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತ್ತಾ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರವು “ಕೆಪಿಎಸ್ ಮ್ಯಾಗ್ನೆಟ್ ಶಾಲೆ” ಎಂಬ ಹೆಸರಿನಲ್ಲಿ ರಾಜ್ಯದ 40, ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಅದರ ಭಾಗವಾಗಿ ಸರ್ಕಾರಿ ಎಂ.ಪಿ.ಎಸ್ ಜೇವರ್ಗಿ ಕಾಲೋನಿ ರಸ್ತೆ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯಾಗಿ ಗುರುತಿಸಿ, ಬ್ರಹ್ಮಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣವಾಗಿ ಮುಚ್ಚಲು ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್ ಕೆ ಮಾತನಾಡಿ, ‘ಗುಣಮಟ್ಟ ಹಾಗೂ ಮಾದರಿ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಮುಚ್ಚುವ ಸರ್ಕಾರದ ನೀತಿ ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ಆಶಯಗಳಿಗೆ ವಿರುದ್ಧವಾಗಿದೆ. 6-7 ಕಿಲೋಮೀಟರ್ ದೂರದ ಶಾಲೆಗಳಿಗೆ ಬಡ ಮಕ್ಕಳನ್ನು ಕಳುಹಿಸುವುದು ಅಸಾಧ್ಯವಾಗಿದ್ದು, ಇದರಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಈ ಯೋಜನೆಗಾಗಿ ಸರ್ಕಾರವು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದಿದ್ದು, ಕಾರ್ಪೊರೇಟ್ ಹಿತಾಸಕ್ತಿಗಾಗಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. “ಸರ್ಕಾರಿ ಶಾಲೆಗಳು ಮುಚ್ಚುವುದಿಲ್ಲ ಎಂಬ ಸಚಿವರ ಹೇಳಿಕೆಗಳು ಕೇವಲ ಜನರನ್ನು ದಾರಿ ತಪ್ಪಿಸುವಂತಿವೆ. ಒಂದೇ ಒಂದು ಸರ್ಕಾರಿ ಶಾಲೆಯೂ ಮುಚ್ಚದಂತೆ ಲಿಖಿತ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು
ಇದೇ ವೇಳೆ ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡಿ, ‘ಉಚಿತ ಸಾರಿಗೆ ವ್ಯವಸ್ಥೆಯ ಜವಾಬ್ದಾರಿಯನ್ನು ಪೋಷಕರು ಹಾಗೂ ಎಸ್ಡಿಎಂಸಿ ಮೇಲೆ ಹಾಕಿರುವುದು ಅನ್ಯಾಯವಾಗಿದ್ದು, ಪ್ರತಿಯೊಂದು ಶಾಲೆ ತನ್ನ ಆದಾಯದ ಮೂಲವನ್ನು ತಾವೇ ಹುಡುಕಿಕೊಳ್ಳಬೇಕೆಂಬ ನಿಲುವು ಉಚಿತ ಶಿಕ್ಷಣದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಯಳವರ, ಸದಸ್ಯರಾದ ಬಾಬು ಪವರ್, ಯುವರಾಜ ರಾಠೋಡ್, ಪೋಷಕರಾದ ಶ್ರೀಮಂತ, ಪ್ರಶಾಂತ, ಚೆಂದಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿ,





