ಕಲಬುರಗಿ | ಕ್ರೀಡೆಗೆ ಶಕ್ತಿಯ ಜತೆಗೆ ಯುಕ್ತಿಯೂ ಮುಖ್ಯ: ಭೀಮರಾಯ ನಗನೂರ

Date:

ಕ್ರೀಡೆಯು ಮನುಷ್ಯನಿಗೆ ಬಹಳ ಮುಖ್ಯ. ಕ್ರೀಡೆಯಲ್ಲಿ ಕೇವಲ ದೈಹಿಕವಾಗಿ ಬಲಿಷ್ಟರಾಗಿದ್ದರೆ ಮಾತ್ರ ಸಾಲದು, ಯುಕ್ತಿಯಿಂದಲೂ ಬಲಿಷ್ಟನಾಗಿರಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಜಯ ಸಾಧಿಸಬಹುದು ಎಂದು ಭೀಮರಾಯ ನಗನೂರ ಅಭಿಪ್ರಾಯಪಟ್ಟರು.

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ 12ನೇ ರಾಷ್ಟ್ರೀಯ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಜೇವರ್ಗಿ ತಾಲೂಕಿನ ಹೆಮ್ಮೆಯ ಕ್ರೀಡಾಪಟುಗಳು ರಾಷ್ಟ ಮಟ್ಟದಲ್ಲಿ ಬಾಗವಹಿಸಿ ನಮ್ಮ ತಾಲೂಕಿಗೆ ಮಾತ್ರವಲ್ಲದೆ ನಮ್ಮ ಜಿಲ್ಲೆಗೂ ಹೆಸರು ತರುವಂತಹ ಕಾರ್ಯ ಮಾಡಿದ್ದಾರೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದ 12ನೇ ರಾಷ್ಟ್ರೀಯ ಚಾಂಪಿಯನ್ ಶಿಪ್ ಕಬ್ಬಡಿ ಆಟದಲ್ಲಿ ಭಾಗವಹಿಸಿ ಬಂಗಾದರ ಪದಕ ಗಳಿಸಿದ್ದಾರೆ. ಕ್ರೀಡೆಗೆ ಕೇವಲ ದೇಹವನ್ನು ಬೆಳೆಸಿಕೊಂಡರೆ ಸಾಲದು ಬಹು ಮುಖ್ಯವಾಗಿ ಯುಕ್ತಿಯನ್ನು ಬೆಳೆಸಿಕೊಳ್ಳಬೇಕು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಬಾಗವಹಿಸಿ ತಾಲೂಕಿನ ಕ್ರೀಡಾಪಟುಗಳಿಗೆ ಉತ್ಸಾಹ ತಂದಿದ್ದಾರೆ. ಕ್ರೀಡೆಯಲ್ಲಿ ಇನ್ನೂ ಹೆಚ್ಚಿನ ಸಾದನೆ ಮಾಡಿ ನಮ್ಮ ತಾಲೂಕಿನ ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಬೆಳಸಲಿ” ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬ್ದುಲ್ ಘನಿ ಮಾತನಾಡಿ, “ತಾಲೂಕು ಆಡಳಿತ ಇಂತಹ ಕ್ರೀಡಾಪಟುಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವಂತಹ ಕಾರ್ಯ ಮಾಡಬೇಕು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಬಂಗಾರದ ಪದಗ ಗೆದ್ದು ಬಂದಿದ್ದಾರೆ. ಇಂತಹ ಕ್ರೀಡಾ ಪಟುಗಳಿಗೆ ಸನ್ಮಾನಿಸಿ ಸರಿಯಾದ ಪ್ರೋತ್ಸಾಹವನ್ನು ಮಾಡಬೇಕು. ಮುಂದಿನ ದಿನಗಳಲ್ಲಿ ನಮ್ಮ ತಾಲೂಕಿನಿಂದ ಒಲಂಪಿಕ್ಸ್‌ಗೂ ಕೂಡ ಭಾಗಿಯಾಗುವಂತ ಕ್ರೀಡಾಪಟುಗಳು ಸಿಕ್ಕರೂ ಸಿಗಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸೈಬರ್ ವಂಚನೆ | ಪಾರ್ಟ್‌ ಟೈಮ್‌ ಜಾಬ್‌ನಲ್ಲಿ ಹೂಡಿಕೆ ಮಾಡಿ ₹23 ಲಕ್ಷ ಕಳೆದುಕೊಂಡ ಟೆಕ್ಕಿ

ಬಂಗಾರದ ಪದಕ ಗೆದ್ದ ಆನಂದ್ ಸಾಗರ್ ಜೇವರ್ಗಿ ಹಾಗೂ ಚಂದಸಾಬ್ ಗಂವ್ಹಾರ ಅವರಿಗೆ ತಾಲೂಕಿನ ವಿವಿಧ ಸಂಘಟನೆಯ ಮುಖಂಡರು ಹಾಗೂ ಸಮಾಜ ಸೇವಕರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಾಹೇಬಗೌಡ ಕಡ್ಲಿ ಅವರಾದ, ದೇವೆಗೌಡ ಅವರಾದ, ಸಿದ್ದು ಪಾಟೀಲ್, ರವಿ ಕುಳಗೇರಿ, ಪ್ರಭಾಕರ ಸಾಗರ, ಮಹೇಶ ಕೋಕಿಲೆ, ಶ್ರೀಮಂತ ಹರನೂರ, ಮಲ್ಲು ನೇದಲಗಿ, ಅಬ್ದುಲ್ ಘನಿ ರಾವಣ, ವಿಶ್ವರಾಧ್ಯ ಗೋಪಾಲಕರ್, ಬಸವರಾಜ ಇಂಗಳಗಿ, ಅಫ್ಸರ್ ಪಟೇಲ್, ಹರಿಷ್ ಗೂಡುರು, ಸಿದ್ದು ಹೂಲ್ಲೂರ, ಪ್ರಸಾದ ಬಡಿಗೇರ, ಜೈಭೀಮ್ ಸಿಂಗೆ, ಗಣೇಶ, ಗಿರೀಶ ಕೊಡಚಿ, ಮಿಲಿಂದ ಸಾಗರ ದೇವು ಬಡಿಗೇರ, ವಿಶ್ವ ಆಲೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...