‌ಕಲಬುರಗಿ | ಅಂಬೇಡ್ಕರ್ ವಿಚಾರಗಳು ನಮಗೆ ಸ್ಪೂರ್ತಿ ನೀಡುತ್ತವೆ: ತಹಶೀಲ್ದಾರ್ ಜಮಖಂಡಿ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರ ವಿಚಾರಗಳನ್ನು ನಾವು ಪ್ರತಿನಿತ್ಯ ಮೆಲುಕು ಹಾಕುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಮ್ಮೊಳಗೊಂದು ಶಕ್ತಿ ತಯಾರಾಗುತ್ತದೆ ಎಂದು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ದಂಡಾಧಿಕಾರಿ ಸುಬ್ಬಣ್ಣ ಜಮಖಂಡಿ ತಿಳಿಸಿದರು.

ಚಿಂಚೋಳಿ ಪಟ್ಟಣದ ಬಿಸಿಎಂ ಕಾಲೇಜು ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ರಾಷ್ಟ್ರೀಯ ಮೂಲನಿವಾಸಿ ಕೂಲಿ ಕಬ್ಬಲಿಗ ಯುವ ಸಂಘಟನೆ ವತಿಯಿಂದ
ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ದೃಷ್ಟಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆ ಜೊತೆಗೆ ಮಹಾತ್ಮರ, ಶರಣರ, ಸಂತರ ವಿಚಾರಗಳನ್ನು ಅರಿತು ನಡೆದರೆ ಬಾಳು ಸಾರ್ಥಕವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ್ ಮಾತನಾಡಿ, “ಭಾರತ ರಾಷ್ಟ್ರವಲ್ಲದೆ ಬಹುತೇಕ ರಾಷ್ಟ್ರಗಳು ತಮ್ಮ ರಾಷ್ಟ್ರದ ಧ್ವಜವನ್ನು ಅರ್ಧಕ್ಕೆ ಇಳಿಸಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರಿಗೆ ಗೌರವ ನಮನ ಸಲ್ಲಿಸುವುದನ್ನು ನೋಡಿದರೆ ಅಂಬೇಡ್ಕರ್ ಅವರಲ್ಲಿರುವ ಪಾಂಡಿತ್ಯ ಎಂತಹದ್ದೆಂದು ನಾವು ತಿಳಿದುಕೊಳ್ಳಬೇಕಾಗಿದೆ” ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಕಾಳಗಿಯ ಹಿರಿಯ ಉಪನ್ಯಾಸಕ ಪ್ರೊ ಸುಭಾಷ್ ಶೀಲವಂತ ಅವರು ಸುದೀರ್ಘವಾಗಿ ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

ಮುಖ್ಯ ಅತಿಥಿ ಈಡಿಗ ಸಮಾಜದ ಅಧ್ಯಕ್ಷ ಚಂದ್ರಶೇಖರ ಗುತ್ತೆದಾರ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಂಜೀವಕುಮಾರ್‌ ಪಾಟೀಲ್, ಕೂಲಿ ಸಮಾಜದ ಮುಖಂಡ ಶರಣು ನಾಟಿಕಾರ, ಅನುಸೂಯ ಚೌವ್ಹಾಣ್, ಮಾರುತಿ ಗಂಜಗಿರಿ, ಗೋಪಾಲ ಗಾರಂಪಳ್ಳಿ, ಮೋಹನ ಐನಾಪೂರ, ಹರ್ಷವರ್ಧನ, ದೀಪಾ, ವಿಜಯಲಕ್ಷ್ಮಿ, ಸಾಗರ, ವಿಜಯ ಸೇರಿದಂತೆ ಇತರರು ಇದ್ದರು.

ವರದಿ: ಸಿಟಿಜ಼ನ್ ಜರ್ನಲಿಸ್ಟ್ ಮಾರುತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...