ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಒಂದು ಕೈಕಾಲು ಕಳೆದುಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ 10:30 ಗಂಟೆ ಸುಮಾರಿಗೆ ನಡೆದಿದೆ.
ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು, ರೈಲ್ವೆ ಸಿಬ್ಬಂದಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ʼಈದಿನʼಕ್ಕೆ ತಿಳಿಸಿದ್ದಾರೆ.
ಬೀದರ್-ಯಶವಂತಪುರ ರೈಲ್ವೆ ಚಿತ್ತಾಪುರ ನಿಲ್ದಾಣಕ್ಕೆ ತೆರಳಿದ್ದ ರೈಲಿಗೆ ಸಿಲುಕಿ ಎಡಗೈ ಭಾಗದ ಕೈ-ಕಾಲು ಕಳೆದುಕೊಂಡು ರಕ್ತದ ಮಡವಿನಲ್ಲಿ ಹೊರಳಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಅನಾಮಧೇಯ ವ್ಯಕ್ತಿಯಾಗಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.
ಇದನ್ನೂ ಓದಿ : ಬೀದರ್ | ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ





