ಕಲಬುರಗಿ | ತೊಗರಿ ಬೆಳೆಗೆ ಗೊಣ್ಣೆಹುಳು ಬಾಧೆ; ಅಗತ್ಯ ಕ್ರಮಕ್ಕೆ ಕೃಷಿ ಅಧಿಕಾರಿಗಳ ಸಲಹೆ

Date:

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ಗೊಣ್ಣೆಹುಳುವಿನ ಬಾಧೆ ಕಂಡು ಬಂದಿದ್ದು, ರೈತರು ಆತಂಕಗೊಂಡಿದ್ದಾರೆ. ಮಳೆ ವಿಳಂಬದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಇದೀಗ ತೊಗರಿ ಬೆಳೆಗೆ ರೋಗ ಬಡಿದಿರುವುದರಿಂದ ತೊಗರಿ ಬೆಳೆಗಾರರು ಇನ್ನಷ್ಟು ಆತಂಕಕ್ಕೀಡಾಗಿದ್ದಾರೆ.

ಅಲ್ಪಸ್ವಲ್ಪ ಬಂದ ಮಳೆಗೆ ತೊಗರಿ ಬಿತ್ತನೆ ಮಾಡಿ ಉತ್ತಮ ಬೆಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಇದೀಗ ಗೊಣ್ಣೆ ಹುಳಿವಿನ ಬಾಧೆ ಉಂಟಾಗಿದೆ. ಕಳೆದ ವರ್ಷ ಬೆಳೆದ ಬೆಳೆ ನೆಟೆ ರೋಗದಿಂದ ಹಾಳಾಗಿತ್ತು. ಈ ಬಾರಿ ಗೊಣ್ಣೆ ಹುಳುವಿನ ರೋಗ ಬಂದಿರುವುದು ರೈತರಿಗೆ ದಿಕ್ಕು ತೋರದಂತಾಗಿದೆ.

ಕಲಬುರಗಿ ತಾಲೂಕಿನ ಫರಹತಾಬಾದ ಹೋಬಳಿಯ ಫೀರೊಜಾಬಾದ್ ನಡುವಿನಹಳ್ಳಿ ಮತ್ತು ಸೋಮನಾಥಹಳ್ಳಿಗೆ ಕಲಬುರಗಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕೃಷಿ ಅಧಿಕಾರಿ ಶೃತಿ ಹಾಗೂ ಶಿವರಾಯ ಬಿಟಿಎಂ ಅವರು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಮಣ್ಣಿನಲ್ಲಿ ತೇವಾಂಶ ಕೊರತೆಯಿಂದ ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳುವಿನ ಬಾಧೆ ಉಂಟಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅದರ ಹತೋಟಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೊಣ್ಣೆ ಹುಳು ಬಾಧೆ ಲಕ್ಷಣಗಳು

“ಬೇರು ಮತ್ತು ಕಾಂಡ ಕೊರೆದು ಗಿಡಗಳು ಬಾಡುವುದು ಈ ಬಾಧೆಯ ಲಕ್ಷಣಗಳಾಗಿದ್ದು, ರೈತರು ಕೆಲವು ಹತೋಟಿ ಕ್ರಮಗಳನ್ನು ಅನುಸರಿಸಬೇಕು” ಎಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.

ಹತೋಟಿ ಕ್ರಮಗಳು

  • ನೀರು ಲಭ್ಯವಿದ್ದಲ್ಲಿ ಜಮೀನಿಗೆ ನೀರು ಹಾಯಿಸುವುದು.
  • ಅಂತರ ಬೇಸಾಯ
  • ಕೈಯಿಂದ ಮಣ್ಣಿನಲ್ಲಿ ಇರುವ ಹುಳುವನ್ನು ಆರಿಸಿ ತೆಗೆಯುವುದು.
  • ಬೇವಿನ ಹಿಂಡಿ 50 ಕೆಜಿ + ಮೆಟಾರಿಜಿಯಂ ಪುಡಿ 2 ಕೆಜಿ ಪ್ರತಿ ಎಕರೆಗೆ ಮಣ್ಣಿಗೆ ಹಾಕಬೇಕು.
  • ಕ್ಲೋರೋಪೈರಿಫಾಸ್ 3 ಮಿ ಲೀ ಪ್ರತಿ ಒಂದು ಲೀಟರ್ ನೀರಿಗೆ ಬೇರಿಸಿ ಬೆಳೆಯ ಬೇರಿಗೆ ಸಿಂಪರಣೆ ಮಾಡಬೇಕು.
  • ಪ್ರತಿ ಎಕರೆಗೆ 4 ಕೆಜಿ ಫೋರೇಟ್ ಅಥವಾ ಕಾರ್ಬೋಪ್ಯೊರಾನ್-3ಜಿಯನ್ನು ಬೆಳೆಯ ಸಾಲಿಗೆ ಸುರಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...