ಕಲಬುರಗಿ | ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಸಿಪಿಐ ಪ್ರತಿಭಟನೆ

Date:

ಕೇಂದ್ರ ಸರ್ಕಾರ ನಡೆಸುತ್ತಿರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡುವಂತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್‌ ಪೂರ್ವ ಜನರ ಹಕ್ಕೊತ್ತಾಯಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ‌ ಆಗ್ರಹಿಸಿದೆ.

ಸಿಪಿಐ ರಾಜ್ಯ ಮಂಡಳಿ ಕರೆಯ ಮೇರೆಗೆ ಇಂದು ಸಿಪಿಐ ಕಲಬುರಗಿ ಜಿಲ್ಲಾ ಮಂಡಳಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ಪ್ರತಿಕೃತಿ ದಹನ ಚಳವಳಿ ನಡೆಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶ ಕುಮಾರ ರಾಠೋಡ್ ಮಾತನಾಡಿ, “ದೇಶದ ಸುಪ್ರೀಂ ಕೋರ್ಟ್‌ ಕೊಟ್ಟ ತೀರ್ಪಿನ ಆಧಾರದ ಮೇಲೆ ನಿರ್ಮಾಣಗೊಳ್ಳುತ್ತಿದ್ದು, ರಾಜಕೀಯ ಲಾಭಕ್ಕಾಗಿ ಬಿಜೆಪಿಯು ರಾಮ ಮಂದಿರದಂತಹ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ನಡೆಸುತ್ತಿದೆ. ಕೇಂದ್ರ ಸರ್ಕಾರ ಸೇರಿದಂತೆ ಎಲ್ಲ ರಾಜ್ಯ ಸರ್ಕಾರಗಳು ಈ ರೀತಿಯ ನಡೆಯು ಸಂವಿಧಾನ ವಿರೋಧಿಯಾಗಿದ್ದು, ಇಂತಹ ಭಾವನಾತ್ಮಕ ವಿಷಯಗಳ ರಾಜಕಾರಣದ ಬದಲಿಗೆ ನಿಜವಾಗಲೂ ಜನರ ಬದುಕನ್ನು ಕಟ್ಟುವಂತಹ ರಾಜಕಾರಣ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರಗಾಲ ಪರಿಹಾರ ನಿಧಿ, ಮನರೇಗಾ ಯೋಜನೆ, ರಾಜ್ಯದ ಜನತೆಯ ವಸತಿ ಸಮಸ್ಯೆ, ಕಾರ್ಪೊರೇಟ್- ಪರ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ರೈತ-ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಕಾಂಗ್ರೆಸ್ ಪಕ್ಷದ 6ನೇ ಗ್ಯಾರಂಟಿಯಾದ ಅಂಗನವಾಡಿ, ಅಕ್ಷರ ದಾಸೋಹ ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆ ಈ ಮೂರೂ ಕ್ಷೇತ್ರಗಳ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

“ಮೋದಿ ಭರವಸೆ ಕೊಟ್ಟಿದ್ದ ವಾರ್ಷಿಕ ಎರಡು ಕೋಟಿ ಉದ್ಯೋಗ, ದಲಿತ ಕಾಲೋನಿಗಳ ಮತ್ತು ಬುಡಕಟ್ಟು ಭರವಸೆ ಕೊಟ್ಟಿದ್ದ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಪ್ರತಿ ಕಾಲೋನಿ ಮತ್ತು ಹಾಡಿಗೂ ಪ್ರತ್ಯೇಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಅಗತ್ಯ ಹಣಕಾಸಿನ ನೆರವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ಭರಿಸಬೇಕು. ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಿಂದಿನ ಅಧಿಕಾರಾವಧಿಯಲ್ಲಿ ನಡೆಸಲಾದ ಸಾಮಾಜಿಕ ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಬಿಹಾರ ರಾಜ್ಯದಲ್ಲಿ ಬಿಡುಗಡೆ ಮಾಡಿರುವಂತೆ ನಮ್ಮ ರಾಜ್ಯದಲ್ಲೂ ಬಿಡುಗಡೆಗೊಳಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂಬರುವ ಬಜೆಟ್‌ನಲ್ಲಿ ಈ ಎಲ್ಲ ಅಂಶಗಳನ್ನು ಸೇರ್ಪಡೆಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಧಾನಿ ಮೋದಿ ಡೋಂಗಿ ಪ್ರಚಾರ ಮಾಡುತ್ತಿದ್ದಾರೆ: ಸಿಪಿಐ

ಹೋರಾಟದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ಸಿಪಿಐ ಜಿಲ್ಲಾ ಸಹಕಾರ್ಯದರ್ಶಿಗಳಾದ ಪ್ರಭುದೇವ ಯಳಸಂಗಿ, ಪದ್ಮಾವತಿ ಪಾಟೀಲ್, ಸಿಪಿಐ ಕಾರ್ಯಕಾರಿ ಮಂಡಳಿ ಸದಸ್ಯ ಭೀಮಾಶಂಕರ ಮಾಡಿಯಾಳ, ಸಿಪಿಐ ನಗರ ಸಹ ಕಾರ್ಯದರ್ಶಿ ಶಿವಲಿಂಗಮ್ಮ ಲೇಂಗಟೀಕರ್, ಸಿಪಿಐ ತಾಲೂಕು ಕಾರ್ಯದರ್ಶಿ ಶರಣಬಸಪ್ಪ ಗಣಜಲಖೇಡ, ಸಹ ಕಾರ್ಯದರ್ಶಿ  ಶರಣಮ್ಮ, ಜಿಲ್ಲಾ ಖಜಾಂಚಿ ಹೆಚ್ ಎಸ್ ಪತಕಿ, ಸಿಪಿಐ ಜೇವರ್ಗಿ ತಾಲೂಕು ಕಾರ್ಯದರ್ಶಿ ಮಲ್ಲಿಕಾರ್ಜುನ ದೊಡ್ಡಮನಿ, ಯಡ್ರಾಮಿ ತಾಲೂಕು ಕಾರ್ಯದರ್ಶಿ ಭೀಮರಾಯ ಮುದಬಸ್ಸಪ್ಪಗೋಳ, ಆಳಂದ ತಾಲುಕು ಕಾರ್ಯದರ್ಶಿ ಮೈಲಾರಿ ಜೋಗೆ, ನಗರ ಮುಖಂಡರುಗಳಾದ ಜಯಶ್ರೀ, ಅನಿಲ ಕಾಂಬಳೆ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...