ಕಲಬುರಗಿ | ದಿನಗೂಲಿ ಪೌರಕಾರ್ಮಿಕರ ನೇರನೇಮಕಾತಿಗೆ ಆಗ್ರಹ; ಡಿ.15ರಿಂದ ಅನಿರ್ದಿಷ್ಟಾವಧಿ ಧರಣಿ

Date:

ಪೌರಕಾರ್ಮಿಕರ ನೇರನೇಮಕಾತಿ ಮತ್ತು ಕಾಯಮಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿರುವುದನ್ನು ಕೂಡಲೇ ರದ್ದುಗೊಳಿಸಿ, ದಿನಗೂಲಿ ಪೌರಕಾರ್ಮಿಕರ ನೇರನೇಮಕಾತಿ, ಕಾಯಮಾತಿ ಆಯ್ಕೆಗೊಳಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 15 ರಂದು ಕಲಬುರಗಿ ಭೀಮ್‌ ಆರ್ಮಿ ಕರ್ನಾಟಕ, ಭಾರತ್ ಏಕತಾ ಮಿಷನ್ ಜಿಲ್ಲಾ ಸಮಿತಿಯಿಂದ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡ ಸೂರ್ಯಕಾಂತ ನಿಂಬಾಳಕರ್ ತಿಳಿಸಿದರು.

ಕಲಬುರಗಿ ನಗರದಲ್ಲಿ ನಡೆದ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ಮಹಾನಗರ ಪಾಲಿಕೆಯಲ್ಲಿ ದುಡಿಯುತ್ತಿರುವ ದಿನಗೂಲಿ ನೌಕರರ ಕಾಯಮಾತಿಯಲ್ಲಿ ಪಾಲಿಕೆ ಮತ್ತು ಜಿಲ್ಲಾಡಳಿತದಲ್ಲಿನ ಅಧಿಕಾರಿಗಳಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಕಾನೂನು ಪಾಲಿಸದೇ ಪೌರಕಾರ್ಮಿಕರು ಅಲ್ಲದವರನ್ನು ಮತ್ತು ಮೃತಪಟ್ಟಿರುವರನ್ನು ಆಯ್ಕೆಗೊಳಿಸಿ ಸಕ್ರಮ ಪ್ರಾಧಿಕಾರ ನೇರನೇಮಕಾತಿ ಪೌರಕಾರ್ಮಿಕರ ನೇಮಕಾತಿ ಕರ್ತವ್ಯಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಶಿಸ್ತುಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ದಿನಗೂಲಿ ಪೌರಕಾರ್ಮಿಕರನ್ನು ಆಯ್ಕೆಯಲ್ಲಿ ಪ್ರಥಮ ಆದ್ಯತೆ ನೀಡಲು ಮತ್ತು ಸೇಡಂ ತಾಲೂಕಿನ ಮಳಖೇಡ ಅಲ್ಟ್ರಾಟೆಕ್ ಸಿಮೆಂಟ್ ಲೋಡಿಂಗ್ ಮತ್ತು ಪ್ಯಾಕಿಂಗ್ ವಿಭಾಗದ ಕಾರ್ಮಿಕರ ಬೇಡಿಕೆಗಾಗಿ ಮನವಿ ಪತ್ರ ಸಲ್ಲಿಸಲ್ಲಿಸಿದರೂ ಕೂಡ ಈವರೆಗೆ ಯಾರೂ ಸ್ಪಂದಿಸಿರುವುದಿಲ್ಲ. ಇತರ ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಭೀಮ್ ಆರ್ಮಿ ಜಿಲ್ಲಾ ಸಮಿತಿ‌ ಮನವಿ ಪತ್ರಗಳನ್ನು ಸಲ್ಲಿಸಲಾಗಿತ್ತು. ಜಿಲ್ಲಾಡಳಿತವು ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ ಡಿಸೆಂಬರ್ 15 ರಂದು ಬೆಳಿಗ್ಗೆ  11ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಬೇಡಿಕೆ ಈಡೇರುವವರೆಗೆ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿಗೆ ಆಗ್ರಹಿಸಿ ಡಿ.17ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸೂರ್ಯಕಾಂತ ಬೆಡಗಾ, ಸೂರ್ಯಕಾಂತ ನಿಂಬಾಳಕರ್, ಸೋಮಶೇಖರ್ ಬಂಗರಗಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...