ಕಲಬುರಗಿ | ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ

Date:

ಜನ ವಿರೋಧಿ, ರೈತ ವಿರೋಧಿಯಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದೆ. ಸಂಘಟನೆಯ ಮುಖಂಡರು ಕಬ್ಬು ಮತ್ತು ಅಭಿವೃದ್ಧಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಕಲಬುರಗಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಘಟನೆಯ ಮುಖಂಡರು, “ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದರೂ, ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕಾಯ್ದೆಯನ್ನು ಜಾರಿಗೆ ತಂದಿದೆ. ತನ್ನ ಮೊಂಡುತನದಿಂದ ಕಾಯ್ದೆಯನ್ನು ಹಿಂಪಡೆಯದೆ, ರೈತರನ್ನು ಶೋಷಣೆ ಮಾಡಲು ಖಾಸಗಿ ಬಂಡವಾಳಿಗರಿಗೆ ದಾರಿ ಮಾಡಿದೆ. ಆ ಕಾಯ್ದೆಯನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

“ಕೃಷಿ ಮಾರುಕಟ್ಟೆಯು ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯವಾಗಿದೆ. ಹೀಗಾಗಿ, ಎಪಿಎಂಸಿ ಸಂಬಂಧ ನೇರವಾಗಿ ಕಾಯಿದೆ ಅಂಗೀಕರಿಸಲು ಸಾಧ್ಯವಿಲ್ಲದ ಕೇಂದ್ರ ಸರ್ಕಾರವು ಮಾದರಿ ಕೃಷಿ ಉತ್ಪನ್ನ ಹಾಗೂ ಜಾನುವಾರು ಮಾರುಕಟ್ಟೆ ಕಾಯಿದೆ-2017ಅನ್ನು ರಚಿಸಿತ್ತು. ಎಲ್ಲ ರಾಜ್ಯಗಳಿಗೆ ಈ ಮಾದರಿಯಲ್ಲಿ ತಮ್ಮ ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡುವಂತೆ ಸೂಚಿಸಿತ್ತು. ಈ ಸೂಚನೆ ಪಾಲಿಸದಿದ್ದರೆ ಅನುದಾನ ನೀಡುವುದಿಲ್ಲ ಎಂಬ ಬೆದರಿಕೆಯನ್ನು ಸಹ ಹಾಕಿತ್ತು. ಈ ಹಿಂದೆ, ಇದೇ ಸ್ವರೂಪದ ಮಾದರಿ ಮಾರುಕಟ್ಟೆ ಕಾಯ್ದೆ-2003ಅನ್ನು ರಾಜ್ಯ ಸರ್ಕಾರ ಅಂಗೀಕರಿಸಲು ಯತ್ನಿಸಿತ್ತು. ಆದರೆ, ರೈತ ಹೋರಾಟದಿಂದ ಕಾಯ್ದೆ ಜಾರಿಯಾಗಲಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾಯ್ದೆಯಿಂದಾಗಿ ಎಪಿಎಂಸಿ ಮಾರುಕಟ್ಟೆಗಳು ಶಾಶ್ವತವಾಗಿ ಮುಚ್ಚಿಹೋಗುತ್ತದೆ. ಹಮಾಲರು ಚಿಲ್ಲರೆ ವ್ಯಾಪಾರಿಗಳು ದಿವಾಳಿಯಾಗಿ, ರೈತರು ಅದರಲ್ಲೂ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ತಮ್ಮ ಉತ್ಪನ್ನಗಳಿಗೆ ಖರೀದಿದಾರರೇ ಇಲ್ಲದೇ ಕೃಷಿ ಸಹವಾಸವೇ ಬೇಡ ಎಂದು ಕೃಷಿಯಿಂದ ಹೊರಗುಳಿಯುವ ಆತಂಖವಿದೆ. ಸರ್ಕಾರಿ ಖರೀದಿ ವ್ಯವಸ್ಥೆ ಇಲ್ಲದೇ ಅಂತಿಮವಾಗಿ ಆಹಾರ ಭದ್ರತೆಗೆ ದೊಡ್ಡ ಆಪತ್ತಿಗೆ ಎಡೆ ಮಾಡಿಕೊಡಲಿದೆ” ಎಂದು ಎಚ್ಚರಿಕೆ ನೀಡಿದದಾರೆ.

ಈ ಸುದ್ದಿ ಓದಿದ್ದೀರಾ?: ಕೋಮು ದ್ವೇಷದ ಹೇಳಿಕೆ: ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

“ಎಪಿಎಂಸಿ ಅಂದರೆ ಮಾರುಕಟ್ಟೆಯಲ್ಲಿ ರೈತರು ತಮ್ಮ ಕೃಷಿ ಉತ್ಪನ್ನಗಳ ಮಾರಾಟದ ಸಂದರ್ಭದಲ್ಲಿ ಶೋಷಣೆಗೆ ಒಳಗಾಗದಂತೆ ನಿಯಂತ್ರಣ ಹಾಗೂ ನಿಗಾವಹಿಸುವ ವ್ಯವಸ್ಥೆ. ಲೈಸೆನ್ಸ್ ಟು ಪ್ರೊಕ್ಯರ್, ಲೈಸೆನ್ಸ್ ಟು ಪರ್ಚೇಸ್, ಲೈಸೆನ್ಸ್ ಟು ಟ್ರಾನ್ಸರ್ ಅಂದರೆ ಖರೀದಿ, ಸಂಗ್ರಹಣೆ, ಸಾಗಾಣಿಕೆಗೆ ಲೈಸೆನ್ಸ್ ಅನ್ನು ಎಪಿಎಂಸಿ ಮೂಲಕ ಪಡೆದ ನೋಂದಾಯಿತರಿಗೆ ಮಾತ್ರ ವ್ಯವಹಾರ ಮಾಡಲು ಅವಕಾಶ ನೀಡಿ, ಪ್ರಾಂಗಣದ ಒಳಗೆ ಸ್ಪರ್ಧಾತ್ಮಕ ದರ ಪಡೆಯುವಂತೆ ಅವಕಾಶ ಕಲ್ಪಿಸುವುದು. ಮಾರಾಟ ಮಾಡಿದ ನಂತರ ಹಣ ಪಡೆಯುವ ಖಾತರಿಯನ್ನೂ ಎಪಿಎಂಸಿ ಕಲ್ಪಿಸುತ್ತದೆ” ಎಂದು ವಿವರಿಸಿದ್ದಾರೆ.

“ತಿದ್ದುಪಡಿ ಕಾಯ್ದೆಯಿಂದ ಎಂಪಿಎಂಸಿಗಳು ಮುಚ್ಚುವ ಸಾಧ್ಯತೆಗಳಿವೆ. ಎಪಿಎಂಸಿಯ ಲಕ್ಷಾಂತರ ಕಾರ್ಮಿಕರು ಬೀದಿಪಾಲಾಗುತ್ತಾರೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಸಿಗದೆ, ಬೆಲೆ ಏರಿಕೆಯಾಗುತ್ತದೆ. ಗ್ರಾಮಕರ ಮೇಲೂ ನೇರ ಪರಿಣಾಮ ಬೀರುತ್ತದೆ” ಎಂದು ತಿಳಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...