ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಕಲಬುರಗಿಯ ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯ ನಡುವಿನ ಜಗಳವೇ ಈ ಕೃತ್ಯಕ್ಕೆ ಕಾರಣವಾಗಿರಬಹುದು. ಭಾನುವಾರ ಪತ್ನಿಯೊಂದಿಗೆ ಜಗಳವಾಗಿತ್ತು. ಇದರಿಂದ ಹೆಂಡತಿ ಖಂಡುರಾಜ್ ವಿರುದ್ಧ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.
ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : 2025 ಹಿನ್ನೋಟ | ಕೃಷಿ-ತಂತ್ರಜ್ಞಾನದಲ್ಲಿ AI ಪ್ರಯೋಗ; ಈ ವರ್ಷ ಸಾಧಿಸಿದ್ದೆಷ್ಟು?





