ಕಲಬುರಗಿ | ಕೀಟನಾಶಕದಿಂದ ರೈತರು ಅಸ್ವಸ್ಥ; ನೆರವಿಗೆ ಎಐಕೆಕೆಎಂ ಆಗ್ರಹ

Date:

ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು ನೀಡಬೇಕೆಂದು ಎಐಕೆಕೆಎಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಸ್‌.ಬಿ ಮಹೇಶ್ ಹೇಳಿದ್ದಾರೆ.

“ತಾಂಡಾದ ರೈತ ಸುನೀಲ್ ಜಾಧವ್ (32), ಅನೀಲ್ ಜಾಧವ್ (26), ಕುಮಾರ್ ಜಾಧವ (24) ಹಾಗೂ ಖೇಮು ರಾಠೋಡ್ (35) ಅವರು ಕೀಟನಾಶಕ ಸಿಂಪಡಿಸುವ ವೇಳೆಯಲ್ಲಿ ಕೀಟನಾಶಕ ದೇಹ ಸೇರಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಕಳೆದ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಸಂಸದರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಆದರೆ, ಅವರಿಗೆ ಸಹಾಯ ಮಾಡುವುದಾಗಿ ಹೇಳಿಲ್ಲ. ಅವರಿಗೆ ಸಹಕಾರ ನೀಡದೇ ಇರುವುದು ದುರಂತ ಸಂಗತಿ” ಎಂದು ಮಹೇಶ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ರೈತರ ಚಿಕಿತ್ಸೆಗೆ ದಿನನಿತ್ಯ 2 ಲಕ್ಷ ರೂ. ವೆಚ್ಚವಾಗುತ್ತಿದೆ. ರೋಗಿಗಳು ಇನ್ನೂ ಯಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಬಾರಿ ದರವನ್ನು ಕುಟುಂಬದವರು ಭರಿಸಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ಬಂದು ಕೇವಲ ಮಾತನಾಡಿ ಹೋದರು. ಅವರುಗೆ ಯಾವುದೇ ರೀತಿಯ ನೆರವು ನೀಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನೂ ನೋವಿನ ವಿಷಯವೇನೆಂದರೆ ಈ ಭಾಗದ ಶಾಸಕರು ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿಯೇ ಇಲ್ಲ. ಜವಬ್ದಾರಿ ಸ್ಥಾನದಲ್ಲಿರುವವರು ರೈತರ ಪರಿಸ್ಥಿತಿಯನ್ನು ಗಮನಿಸದೇ ಇರುವುದು ಖಂಡನೀಯ. ರೈತರ ತಾಯಂದಿರು ನೊಂದಿದ್ದಾರೆ. ಅವರಿಗೆ ಇಂತಹ ಸಂದರ್ಭದಲ್ಲಿ ಸರಿಯಾದ ಬೆಂಬಲ, ಸಹಕಾರ ಮತ್ತು ಸಹಾಯ ಸಿಗದೇ ಹೋದರೆ ಅವರ ಇಡೀ ಕುಟುಂಬವು ಸರ್ವಸ್ವವನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರೈತರ ಚಿಕಿತ್ಸೆಯ ಜವಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಹತ್ತಿಗೆ ಔಷಧಿ ಸಿಂಪಡಿಸಲು ಬಳಸಲಾದ ಮೋನೋಕ್ರಾಟ್ ಕಂಪನಿಯಿಂದ ರೈತರ ಆಸ್ಪತ್ರೆಯ ಖರ್ಚನ್ನು ಕೊಡಿಸಬೇಕು. ಅವರ ಜೀವನಾಧಾರಕ್ಕೆ ಸೂಕ್ತವಾದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...