ಕಲಬುರಗಿ | ಮಾನವ ಸಂಪನ್ಮೂಲ‌ ಈ ದೇಶದ ಪ್ರಬಲ ಆಸ್ತಿ, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು: ಸಚಿವ ಪ್ರಿಯಾಂಕ್ ಖರ್ಗೆ

Date:

ಮಾನವ ಸಂಪನ್ಮೂಲ ಈ ದೇಶದ ಪ್ರಬಲ ಆಸ್ತಿಯಾಗಿದೆ. ಈ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಪ್ರೊ. ಪಿ ಎಸ್ ಚೌಧರಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮ‌ದಲ್ಲಿ ಮಾತನಾಡಿದರು. “ಗುಣಮಟ್ಟದ ಶಿಕ್ಷಣ ಹಾಗೂ ಕೌಶಲ್ಯ ತರಬೇತಿ ನೀಡುವ ಮೂಲಕ ಯುವಕರನ್ನು ಸಮರ್ಪಕ ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸಬೇಕು. ಬಲಿಷ್ಠ ಸಮಾಜ‌ ನಿರ್ಮಾಣ ಮಾಡುವಲ್ಲಿ ಇದು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

“ವಿದೇಶದಲ್ಲಿ ಭಾರತ ಸಂಪನ್ಮೂಲ ಅದರಲ್ಲೂ ಕರ್ನಾಟಕ ಕೌಶಲ್ಯ ತರಬೇತಿ ಹೊಂದಿದ ಮಾನವ ಸಂಪನ್ಮೂಲಕ್ಕೆ ಭಾರೀ ಬೇಡಿಕೆ ಇದೆ. ಇತ್ತೀಚಿಗೆ ಅಮೇರಿಕಾಕ್ಕೆ ತಾವು ಭೇಟಿ ನೀಡಿದಾಗ ಅಲ್ಲಿನ ಉದ್ಯಮಿಗಳು ತಮಗೆ ರಾಜ್ಯದ ಕೌಶಲ್ಯ‌ ತರಬೇತುದಾರರನ್ನು ಒದಗಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐಟಿಐ ಮುಗಿಸಿದ ವಿದ್ಯಾರ್ಥಿಗಳು ರೀ ಸ್ಕಿಲ್ಲಿಂಗ್, ಅಪ್ ಸ್ಕಿಲ್ಲಿಂಗ್ ಆಗುವ ಮೂಲಕ ವಿದೇಶಕ್ಕೆ ಬೇಕಾಗುವ ತರಬೇತಿ ಹೊಂದಿದ ಯುವಕರನ್ನು ಒದಗಿಸಲು ಅನುಕೂಲವಾಗುತ್ತದೆ. ಬೆಂಗಳೂರಿನಲ್ಲಿ ಐ-ಫೋನ್ ತಯಾರಿಕ ಘಟಕ ಸ್ಥಾಪನೆ ಮಾಡುತ್ತಿದೆ. ಅದಕ್ಕೆ 48,000 ಮಂದಿ ತರಬೇತಿ ಹೊಂದಿದ‌ ಯುವಕರು ಬೇಕಾಗುತ್ತದೆಂದು ಕಂಪನಿ ಬೇಡಿಕೆ ಇಟ್ಟಿದೆ. ಒಂದು ಪ್ರಮುಖ ಅಂಶವೆಂದರೆ‌ ಈ ತರಹದ ಹೊಸ ಆವಿಷ್ಕಾರಗಳಿಗೆ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ನಾವೂ ಕೂಡಾ ಈ ವಿಷಯದಲ್ಲಿ ಅವರಂತೆ ಆಧುನಿಕ ಜಗತ್ತಿಗೆ ಅನುಕೂಲವಾಗುವಂತ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಉತ್ಪನ್ನ ಮಾಡಿದಾಗ ಮಾತ್ರ ಚೀನಾಗೆ ಸರಿಗಟ್ಟಬಹುದು” ಎಂದರು.

“ಸ್ಕಿಲ್ಲಿಂಗ್ ಇನ್ನೋವೇಷನ್ ಹಾಗೂ ಇನ್ಕ್ಯೂಬೇಷನ್ ಸೆಂಟರ್ ನಿರ್ಮಾಣ ಮಾಡುವ ಆಲೋಚನೆ ಇದ್ದು, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಅವರ ನೇತೃತ್ವದಲ್ಲಿ ಈಗಾಗಲೇ ಸ್ಕಿಲ್ ಅಡ್ವೈಸರಿ ಕಮಿಟಿ ಸ್ಥಾಪಿಸಲಾಗಿದೆ. ನಮ್ಮ ರಾಜ್ಯದಲ್ಲಿರುವ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಬಳಸಿಕೊಂಡು ಕರ್ನಾಟಕವನ್ನು ‘ಸ್ಕಿಲ್ ಕ್ಯಾಪಿಟಲ್’ ಮಾಡುತ್ತೇವೆ” ಎಂದು ಸಚಿವರು ಘೋಷಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕೆಲ ವರ್ಷಗಳ ಹಿಂದೆ ಕೈಗಾರಿಕ ತಯಾರಿಕೆಗೆ ಒತ್ತು ನೀಡಲಾಗುತ್ತಿತ್ತು. ಈಗ ತಾಂತ್ರಿಕತೆ ಹಾಗೂ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭಾರತದ ಮಾನವ ಸಂಪನ್ಮೂಲಕ್ಕೆ ಹೆಚ್ಚು ಬೇಡಿಕೆ ಇದೆ. ಸ್ಲೋವಾಕಿಯಾ ದೇಶದವರು 2000 ಟ್ರೈನಿಡ್ ಐಟಿಐ ಪದವೀಧರರ ಬೇಡಿಕೆ ಇಟ್ಟಿದ್ದಾರೆ. ತರಬೇತಿ ನೀಡಿ 200 ಅಭ್ಯರ್ಥಿಗಳನ್ನು ಕಳಿಸಲಾಗುತ್ತದೆ. ಅವರಲ್ಲಿ ಕಲಬುರಗಿಯಿಂದ 20 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ” ಎಂದರು.

“ಉತ್ಪಾದಕರು ಐಟಿಐ, ಡಿಪ್ಲೋಮ ಹಾಗೂ ಎಂಜಿನಿಯರ್ ಪಾಸಾದವರಿಗೆ ತರಬೇತಿ ನೀಡಿ ಕೆಲಸ ಕೊಡಿಸುವುದು ಸರ್ಕಾರದ ಈಗಿನ ಆದ್ಯ ಕರ್ತವ್ಯವಾಗಿದೆ. ಸಂಪರ್ಕ ಸೇರಿದಂತೆ ಹೆಚ್ಚುವರಿ ತರಬೇತಿ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಈ ಬಗ್ಗೆ ಸಚಿವರುಗಳಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ ಸಿ ಸುಧಾಕರ್ ಜೊತೆಗೂಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇವೆ” ಎಂದರು.

“ರಾಜ್ಯದಲ್ಲಿ 250 ಸರ್ಕಾರಿ ಐಟಿಐ ಕಾಲೇಜುಗಳು, 33 ಜಿಟಿಟಿಸಿ, ಕೆಜಿಡಿಟಿಐ ಸಂಸ್ಥಗಳಿವೆ. ಇಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಕಲಬುರಗಿಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ಇತರೆ ತಾಂತ್ರಿಕ ಸಂಸ್ಥೆಗಳ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ” ಎಂದರು.

“ಕಲಬುರಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿಯಾಗಿವೆ. ಜಿಮ್ಸ್, ಜಯದೇವ ಸಂಸ್ಥೆಯ ವಿಸ್ತರಣೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಜೊತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ, ಯುವನಿಧಿಯನ್ನು ಜನವರಿ 12ರಂದು ವಿವೇಕಾನಂದ ಜಯಂತಿಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು” ಎಂದು ಸಚಿವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ವೈದ್ಯರ ಮೇಲೆ ನಡೆಯುತ್ತಿರುವ ಕಿರುಕುಳ ತಡೆಗೆ ಆಗ್ರಹ

ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಇತರರಿಗೆ ಬೆಳ್ಳಿ ಪದಕ ಹಾಗೂ ಕಂಚಿನ ಪದಕ ನೀಡಿ ಗೌರವಿಸಿದರು.

ವೇದಿಕೆಯ ಮೇಲೆ ಶಾಸಕರುಗಳಾದ ಕನೀಜ್ ಫಾತೀಮಾ ಹಾಗೂ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ರವೀಂದ್ರನಾಥ ಬಾಳಿ, ವಿಜಯಕುಮಾರ ಕಲ್ಮಣಕರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...