ಕಲಬುರಗಿ | ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ; ಮೇಲ್ವಿಚಾರಕಿ ಅಮಾನತಿಗೆ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರನ್ನು ಅಮಾನತು ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೇಡಂನಲ್ಲಿ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ.

“ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರ ಅಮಾನತಿಗೆ ಆಗ್ರಹಿಸಿ ಅಕ್ಟೋಬರ್‌ 7ರಂದು ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತಂದರೂ ಕೂಡ ಅವರು ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಕುರಿತು ಉಪ ನಿರ್ದೇಶಕರೊಟ್ಟಿಗೆ ಮಾತನಾಡಿದರೆ ಹಾರಿಕೆಯ ಉತ್ತರ ನೀಡುತ್ತಿದ್ದು, ಸರಿತಾ ಆರ್ ಕುಲಕರ್ಣಿತಯವರ ಲಂಚ ಮತ್ತು ಅಧಿಕಾರ ದರ್ಪದ ಬಗ್ಗೆ ನಮಗೆ ಸಾಕ್ಷಿ ಕೊಡಿರೆಂದು ಕೇಳುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೌಕರಿಗೆಂದು ಬಂದವರು ಕಡುಬಡವರು ಹಣ ಕೊಟ್ಟಿರುತ್ತಾರೆ. ಆದರೆ ಅಂಥವರು ಸಾಕ್ಷಿ ಹೇಳಿದರೆ ನೌಕರಿ ಹೋಗುತ್ತದೆಂದು ಹೆದರಿ ಯಾರೂ ಹೇಳುವುದಿಲ್ಲ. ಸಬ್ ಇನ್ಸ್‌ಪೆಕ್ಟರ್ ಹುದ್ದೆಗಾಗಿ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಐಎ) ನಡೆಸಿದ. ನೇಮಕ ಪ್ರಕ್ರಿಯೆಯಲ್ಲಿ ತನಿಕೆಯಾದಾಗ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾರು ಲಂಚ ತೆಗೆದುಕೊಂಡಿರುತ್ತಾರೆ, ಕೆಳ ಹಂತದ ನೌಕರಿದಾರರಿಗೆ ಹೆದರಿಸುವುದು ಮತ್ತು ನೊಟೀಸ್ ಕೊಟ್ಟು ಬೆದರಿಸುವುದು‌, ಅಂಗನವಾಡಿ ಶಿಕ್ಷಕಿಯರಿಗೆ ಇನ್ನೊಂದು ಶಿಕ್ಷಕಿಯ ಸ್ಥಾನದ ಇನ್‌ಚಾರ್ಜ್ ಕೊಡಬೇಕಾದರೆ, ಸುಮಾರು ₹5‌,000 ಲಂಚವನ್ನು ಫೋನ್ ಪೇ ಮಾಡುತ್ತಿದ್ದಾರೆ. ಒಂದು ದಿನದ ಮಟ್ಟಿಗೆ ಶಾಲೆ ಬಿಟ್ಟು ಹೋದಲ್ಲಿ ₹1000 ದಂತೆ ಎಷ್ಟು ದಿನ ಬಿಡುತ್ತಾರೆ ಅಷ್ಟೂ ಹಣ ಪಡೆಯುತ್ತಿದ್ದಾರೆ. ವರ್ಗಾವಣೆಗೆ ₹50,000, ಪ್ರಮೋಷನ್‌ಗೆ ₹50,000 ಹಣ ಪಡೆದಿರುವುದು ಸೂಕ್ತ ತನಿಖೆ ಆದರೆ ಮಾತ್ರ ಬಯಲಿಗೆ ಬರಲಿದೆ” ಎಂದು ಆಗ್ರಹಿಸಿದರು.

“ಒಂದು ಅಂಗನವಾಡಿ ಕೇಂದ್ರದಲ್ಲಿ ಉಳಿದ ಆಹಾರ ಧಾನ್ಯದಲ್ಲಿ ಶೇ.50ರಷ್ಟು ತನಗೆ ಕೊಡಬೇಕೆಂದು ಅಲಿಖಿತ ನಿಯಮ ಇಟ್ಟು ಅದನ್ನು ಅವರಿಗೆ ಕೊಡದವರಿಗೆ ನೊಟೀಸ್ ಕೊಟ್ಟು ವಸೂಲಿ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ಎಲ್ಲ ನೇಮಕಾತಿಗಳಿಗೂ ಮೂಲ ದಾಖಲಾತಿಗಳನ್ನು ತಮ್ಮ ಬಳಿ ಅವರಿಗೆ ನೌಕರಿ ಮಾಡಿಸಿಕೊಡುತ್ತೇನೆಂದು ಮುಂಗಡ ಹಣ ಪಡೆದಿರುತ್ತಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ

“ನಮ್ಮ ಮನವಿ ಪತ್ರದ ಆಧಾರದ ಮೇಲೆ ಅವರನ್ನು ಕೂಡಲೇ ವರ್ಗಾವಣೆ ಮಾಡಿ ಶೀಘ್ರ ತನಿಖೆ ನಡೆಸಿ ಅಮಾನತು ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಳಂಬ ನೀತಿ ಅನುಸರಿಸಿದರೆ ನಾವು ಮುಂದೆ ಹಂತ ಹಂತವಾಗಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಾಗಣ್ಣ ಕಲ್ಲದೇವನಹಳ್ಳಿ, ಸದ್ದಾಂ ಹುಸೇನ್, ಮಾನಪ್ಪ ಕಲ್ಲದೇವನಳ್ಳಿ, ಸಾಬಣ್ಣ ಕುರಕುಂದಿ, ಮಲ್ಲಪ್ಪ ಲಂಡನ್ಕರ್, ದೇವು ಎಂಟಮನಿ, ಶರಣಪ್ಪ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...