ಕಲಬುರಗಿ | ಅತಿಥಿ ಉಪನ್ಯಾಸಕನಿಂದ ಜೀವ ಬೆದರಿಕೆ ದೂರು ; ಗುಲ್ಬರ್ಗಾ ವಿವಿ ಕುಲಸಚಿವರ ವಿರುದ್ಧ ಗಂಭೀರ ಆರೋಪ

Date:

ಗುಲ್ಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಡಾ. ರಾಜಕುಮಾರ ದಣ್ಣೂರ ಅವರಿಗೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ್ ಲಂಡನಕರ್ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಡಾ. ದಣ್ಣೂರ ಅವರು ಶನಿವಾರ ಕುಲಪತಿಗಳಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ.

ಕಳೆದ ಏಳು ವರ್ಷಗಳಿಂದ ಪೂರ್ಣಕಾಲಿಕ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜಕುಮಾರ ದಣ್ಣೂರ, 2026ರ ಶೈಕ್ಷಣಿಕ ಸಾಲಿನಲ್ಲಿ ತಮ್ಮ ಬೋಧನಾ ಅವಧಿಯನ್ನು ಏಕಾಏಕಿ 12 ಗಂಟೆಗಳಿಗೆ ಇಳಿಸಲಾಗಿದೆ ಎಂದು ದೂರಿದ್ದಾರೆ. ಮೆರಿಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ತಮಗೆ 16 ಗಂಟೆಗಳ ಬೋಧನಾ ಅವಧಿಗೆ ಅರ್ಹತೆ ಇದ್ದರೂ ಅನ್ಯಾಯ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಮನವಿ ಸಲ್ಲಿಸಲು ಜನವರಿ 16ರಂದು ಕುಲಸಚಿವರ ಕಚೇರಿಗೆ ತೆರಳಿದ ವೇಳೆ, ಕುಲಸಚಿವರು ಅಶ್ಲೀಲ ಪದಗಳಿಂದ ನಿಂದಿಸಿ, “ಏನು ಮಾಡ್ಕೋತೀಯಾ?” ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆಯಲ್ಲಿ ಕಚೇರಿ ಪರಿಚಾರಕರು ಮಧ್ಯಪ್ರವೇಶಿಸಿ ಅವರನ್ನು ಹೊರಗೆ ಕಳುಹಿಸಿದರು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಬಳಿಕ ತನ್ನ ಜೀವಕ್ಕೆ ಅಪಾಯವಿದ್ದು, ವಿಶ್ವವಿದ್ಯಾಲಯ ಹಾಗೂ ನಗರದಲ್ಲಿ ಒಬ್ಬಂಟಿಯಾಗಿ ಸಂಚರಿಸುವ ವೇಳೆ ಆತಂಕ ಎದುರಿಸುತ್ತಿದ್ದೇನೆ ಎಂದು ಡಾ. ದಣ್ಣೂರ ಹೇಳಿದ್ದಾರೆ. ತನ್ನ ಮೇಲೆ ಯಾವುದೇ ಅನಾಹುತ ಸಂಭವಿಸಿದರೆ ಅದರ ಸಂಪೂರ್ಣ ಹೊಣೆ ಕುಲಸಚಿವರ ಮೇಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವಂತೆ ಅವರು ಕುಲಪತಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಲುಂಬಿನಿ ಗಾರ್ಡನ್‌ನಲ್ಲಿ ದೆವ್ವದ ಸಂಚಾರವೆಂಬ ವಂದತಿ; ಜ.18ರಂದು ವೈಜ್ಞಾನಿಕ ಜಾಗೃತಿ ಕಾರ್ಯಕ್ರಮ

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಕುಲಸಚಿವ ಪ್ರೊ. ರಮೇಶ್ ಲಂಡನಕರ್ , ‘ವಿಭಾಗದ ಅಧ್ಯಕ್ಷರು, ಡೀನ್ ಹಾಗೂ ವಿಷಯ ಪರಿಣಿತರನ್ನೊಳಗೊಂಡ ಸಮಿತಿಯು ಅತಿಥಿ ಉಪನ್ಯಾಸಕರ ನೇರ ಸಂದರ್ಶನ ನಡೆಸಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿದೆ. ಕುಲಪತಿಗಳ ನಿರ್ಣಯದ ಬಳಿಕ ನಾನು ಕೇವಲ ಸಹಿ ಮಾಡುವ ಅಧಿಕಾರವಷ್ಟೇ ಹೊಂದಿದ್ದೇನೆ. ಆಯ್ಕೆ ಮಾಡುವ ಯಾವುದೇ ಅಧಿಕಾರ ನನಗೆ ಇಲ್ಲ. ಡಾ. ರಾಜಕುಮಾರ ದಣ್ಣೂರ ಅವರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅನ್ಯಾಯವಾಗಿದೆ ಎಂದು ಭಾವಿಸಿದರೆ ಕಾನೂನು ಮಾರ್ಗವನ್ನು ಅನುಸರಿಸಲಿ ಎಂದು ನಾನು ತಿಳಿಸಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...