ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರನ್ನು ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೃಹ್ಮಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಗಾಜಿಪುರ ಬಡಾವಣೆಯ ಶರಣಬಸಪ್ಪ ಗೌಳಿ(35) ಕೊಲೆಯಾದವರು ಎಂದು ತಿಳಿದು ಬಂದಿದೆ.
ಎದೆಗೆ ಚಾಕು ಚುಚ್ಚಿದ್ದರಿಂದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಕಮೀಷನರ್ ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ : ಕಲಬುರಗಿ | ಸಂಜೆ 7ರಿಂದ 9ರವರೆಗೆ ಮೊಬೈಲ್, ಟಿವಿ ಬಂದ್: ಯಡ್ರಾಮಿ ತಾಲೂಕು ಪಂಚಾಯತ್ ಆದೇಶ





