ಕಲಬುರಗಿ | ಎಳ್ಳು, ತೊಗರಿ ಸಂಪೂರ್ಣ ನೆಲಸಮ ಮಾಡಿದ ಕಿಡಿಗೇಡಿಗಳು

Date:

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಅಮೀನಾ ಬಿ ಎಂಬುವವರ ಜಮೀನಿನಲ್ಲಿ 1 ಎಕರೆ 37 ಗುಂಟೆಯಲ್ಲಿ ಎಳ್ಳು, ತೊಗರಿ ಬೆಳೆಯಲು ಬೀಜ, ಗೊಬ್ಬರ, ಕಳೆ ತೆಗಿಸಲು ಸೇರಿದಂತೆ ಇತರೆ ಕಾರ್ಯಗಳಿಗೆ ₹2 ಲಕ್ಷ ರೂ. ಖರ್ಚು ಮಾಡಿ ಬೆಳೆ ಬೆಳೆದಿದ್ದರು. ಜಮೀನಿನಲ್ಲಿ ಬೆಳೆದು ನಿಂತ ಬೆಳೆಯನ್ನು ಕಿಡಿಗೇಡಿಗಳು ಸಂಪೂರ್ಣ ನಾಶ ಮಾಡಿದ್ದಾರೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಮೀನಾ ಬಿ ತಂದೆಗೆ ಒಬ್ಬಳೆ ಮಗಳು ಇದ್ದು, ಅವರ ತಂದೆ 1 ಎಕರೆ 37 ಗುಂಟೆ ಜಮೀನು ನೀಡಿದ್ದರು. ಜಮೀನು ಅಮೀನಾ ಬಿ ಅವರ ಹೆಸರಿನಲ್ಲಿದ್ದರೂ ಅವರ ದೊಡ್ಡಪ್ಪನ ಸೊಸೆ, ಮಕ್ಕಳು ರಸೂಲ್ ಬಿ, ಗಂಡ ಬಾಬುಮಿಯ್ಯ ಜಮೀನು ವಿಚಾರದಲ್ಲಿ ಮೊದಲಿನಿಂದಲು ತಕರಾರು ಇತ್ತು. ಹಳೆಯ ದ್ವೇಷ ಇಟ್ಟುಕೊಂಡು ಅಮೀನಾ ಬಿ ಅವರ ಪತಿ ಖಾಜಾ ಹುಸೇನ್ ತೀರಿಕೊಂಡ ಬಳಿಕ ಮತ್ತೆ ಅದೇ ಹಗೆ ಸಾಧಿಸಲು ದೊಡ್ಡಪ್ಪನ ಸೊಸೆ ಮಕ್ಕಳು ಸೇರಿಕೊಂಡು 1 ಎಕರೆ 37 ಗುಂಟೆಯಲ್ಲಿ ಬೆಳೆದು ನಿಂತಿದ್ದ ಬೆಳೆಯನ್ನು ಸಂಪೂರ್ಣ ನಾಶ ಪಡಿಸಿದ್ದಾರೆ. ಇದರಿಂದ ಅಮೀನಾ ಬಿ ಅವರು ಊಟ ನೀರು ಇಲ್ಲದೆ ಹಾಸಿಗೆ ಹಿಡಿದ್ದಾರೆ.

ಅಮೀನಾ. ಬಿ. ಇವರಿಗೆ ಮೂರು ಮಂದಿ ಹೆಣ್ಣು ಮಕ್ಕಳು 3 ಮಂದಿ ಗಂಡು ಮಕ್ಕಳು. ಹೆಣ್ಣು ಮಕ್ಕಳು ತಮ್ಮ ಗಂಡನ ಮನೆಯಲ್ಲಿದ್ದಾರೆ. ಇಬ್ಬರು ಗಂಡು ಮಕ್ಕಳು ಯಡ್ರಾಮಿ ತಾಲೂಕು ಮಳಿಯಲ್ಲಿ ವಾಸವಾಗಿದ್ದಾರೆ. ಇನ್ನೊಬ ಮಗನ ಜೊತೆಗೆ ಅಮೀನಾ. ಬಿ ನೆಲೋಗಿ ಅವರ ತವರಿನಲ್ಲಿ ವಾಸವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೀನಾ ಬಿ ಕುಟುಂಬಸ್ಥರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮಗೆ ಬೆಂಬಲವಾಗಿ ಹಿಂದೆ ಮುಂದೆ ಯಾರೂ ಇಲ್ಲವೆಂದು ತಿಳಿದು ನಮ್ಮ ಮೇಲೆ ದ್ವೇಷ ಸಾಧಿಸುತ್ತಾರೆ. ಇದೀಗ ಇಂಥ ಬರಗಾಲದಲ್ಲಿಯೂ ಕಷ್ಟಪಟ್ಟು ಬೆಳೆದ ಬೆಳೆಯನ್ನು ನಾಶ ಮಾಡಿದ್ದಾರೆ. ಈ ವಿಚಾರವಾಗಿ ನೆಲೋಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ” ಎಂದು ಅವಲತ್ತುಕೊಂಡರು.

ಈ ಸುದ್ದಿ ಓದಿದ್ದೀರಾ? ಕಂದಾಯ ಕರ್ಮಕಾಂಡ-1 | ರೈತರನ್ನು ಹೆಜ್ಜೆ ಹೆಜ್ಜೆಗೂ ಹಿಂಸಿಸುವ ಇಲಾಖೆ

ಪಿಎಸ್‌ಐ ಅಶೋಕ್ ಪಾಟೀಲ್ ಮಾತನಾಡಿ, “ಸಂತ್ರಸ್ತರು ದೂರು ನೀಡಿದ್ದಾರೆ. ಇನ್ನೂ ದೂರು ದಾಖಲಿಸಿಕೊಂಡಿಲ್ಲ. ದಾಖಲಿಸಿಕೊಳ್ಳುವಂತೆ ತಿಳಿಸಿದ್ದೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...