ಕಲಬುರಗಿ | ಇಂದು ರಾಮ ಮಂದಿರ ಉದ್ಘಾಟನೆಯಲ್ಲ, ಪ್ರಜಾಪ್ರಭುತ್ವ ಕಗ್ಗೊಲೆಯಾದ ದಿನ: ಮೀನಾಕ್ಷಿ ಬಾಳಿ

Date:

ಅಯೋಧ್ಯೆಯಲ್ಲಿ ಒಂದು ಗೋರಿ ಉರುಳಿಸಿ ಇನ್ನೊಂದು ಗೋರಿಯನ್ನೇ ಕಟ್ಟಿದ್ದು ಪ್ರಜಾತಾಂತ್ರಿಕ ವ್ಯವಸ್ಥೆಯ ಸಮಾಧಿಯಾಗಿದೆ. ಆದರೆ ದೇಶದ ಪ್ರಜ್ಞಾವಂತ ಜನರು ನಿಮ್ಮ ಆಟ ನಡೆಸಲು ಬಿಡುವುದಿಲ್ಲ ಎಂದು ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿಯ ಜಗತ್‌ ವೃತ್ತದ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ಶೂದ್ರ ಶಂಭೂಕ ಮುನಿಯವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಇಂದು ಇಡೀ ದೇಶದ ತುಂಬಾ ಸೂತಕದ ಛಾಯೆ ಆವರಿಸಿಕೊಂಡಿದೆ. ಅವರು ಮಾಡುತ್ತಿರುವುದು ರಾಮಮಂದಿರ ಉದ್ಘಾಟನೆ ಅಲ್ಲ, ಸೂತಕ ಮನೆಯ ಗಳ ಹಿರಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮನೆ-ಮನೆಗೆ ಬೆಂಕಿ ಹಚ್ಚಿ ಬೆಂಕಿಯಲ್ಲಿ ಕಾಯಿಸಿಕೊಳ್ಳುವ ರಾಕ್ಷಸಿ ಕೆಲಸ ಮಾಡುತ್ತಿದ್ದಾರೆ, ರಾಮ ಹಾಗೂ ರಾಮ ಸಂಸ್ಕೃತಿಗೆ ನಾವು ಧಿಕ್ಕರಿಸಿ, ಕರಾಳ ದಿನವನ್ನಾಗಿ ಆಚರಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮ ಮಂದಿರ ತರಾತುರಿಯಲ್ಲಿ ಉದ್ಘಾಟನೆ ಮಾಡುವಲ್ಲಿ ಆ‌ರ್.ಎಸ್.ಎಸ್. ಮತ್ತು ಬಿ.ಜೆ.ಪಿ. ಸರ್ಕಾರದ ಷಡ್ಯಂತ್ರ ಅಡಗಿದೆ. ಸಾಮಾಜಿಕ, ಸಾಂಸ್ಕೃತಿಕವಾಗಿ ದೇಶದ ಮನೋಧರ್ಮವನ್ನು ಬದಲಾಯಿಸುವುದರಲ್ಲಿಯೇ ಆರ್.ಎಸ್.ಎಸ್‌. ಮತ್ತು ಬಿ.ಜೆ.ಪಿ. ಯಶಸ್ವಿಯಾಗಿದೆ. ಕೇವಲ 20 ವರ್ಷಗಳ ಹಿಂದಿನ ದಿನಗಳಿಗಿಂತಲೂ ಇಂದು ದೇಶದಲ್ಲಿ ಹಿಂದುತ್ವ ಪ್ರಮಾಣ ಅಧಿಕವಾಗಿದೆ” ಎಂದರು.

“ದೇಶದಲ್ಲಿ ಮನುಸ್ಮೃತಿ ಹೇರಿ ಮತ್ತೆ ವರ್ಣಾಶ್ರಮ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಇಂದು ರಾಮಮಂದಿರ ಉದ್ಘಾಟನೆಯ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಕಗ್ಗೊಲೆಯಾದ ದಿನ ಎಂದು ಭಾವಿಸಬೇಕು” ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಅರ್ಜುನ ಭದ್ರೆ ಹೇಳಿದರು.

ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಓದಿ ನಂತರ ಶಂಭುಕ ಮುನಿಯವರ ಸ್ಮರಣೆ ಅಂಗವಾಗಿ ಶೋಕಾಚರಣೆ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಲ್ಲಿ ರಾಮ, ರಾಮಾಯಣ, ರಾಮರಾಜ್ಯ, ಮಂದಿರಗಳು…

ಕಾರ್ಯಕ್ರಮದಲ್ಲಿ ಚಿಂತಕ ಆರ್.‌ಕೆ. ಹುಡುಗಿ, ಅಶ್ವಿನಿ ಮದನಕರ್‌, ಪ್ರಭು ಖಾನಾಪುರೆ, ಮಹಾಂತೇಶ ಬಡದಾಳ, ಸೂರ್ಯಕಾಂತ ಅಜಾದಪೂರ ಮಲ್ಲಿಕಾರ್ಜುನ ಖನ್ನಾ, ಮಹೇಶ ಕೋಕಿಲೆ, ಪರಶುರಾಮ ಯಡ್ರಾಮಿ ಸೇರಿದಂತೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...