ಕಲಬುರಗಿ | ಆರ್.​ಡಿ ಪಾಟೀಲ್ ಅವ​ರನ್ನೂ ಶೀಘ್ರವೇ ಬಂಧಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Date:

ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾದ ಆರೋಪಿಗಳನ್ನು ಬಿಡಿಸಲು ಖುದ್ದು ಬಿಜೆಪಿಯ ಹಾಲಿ ಶಾಸಕರೊಬ್ಬರು ಕರೆ ಮಾಡಿದ್ದರು. ಆದರೆ, ಈಗ ಕಾಂಗ್ರೆಸ್​ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಮುನ್ನ ಬಿಜೆಪಿ ನಾಯಕರು ಹೋಂವರ್ಕ್ ಮಾಡಿಕೊಂಡು ಬರಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು. “ಆರ್.ಡಿ ಪಾಟೀಲ್ ಇರಲಿ ಬೇರೆ ಯಾರೇ ಇರಲಿ, ತಪ್ಪು ಮಾಡಿದವರನ್ನು ಕಾಂಗ್ರೆಸ್​ ಸರ್ಕಾರ ಬಿಡುವುದಿಲ್ಲ. ಕಳೆದ ನಾಲ್ಕು ದಿನಗಳಲ್ಲಿ ಅಕ್ರಮದಲ್ಲಿ ಭಾಗಿಯಾದ 20ಕ್ಕೂ ಅಧಿಕ ಜನರನ್ನು ಬಂಧಿಸಿದ್ದೇವೆ. ಆರ್.​ಡಿ. ಪಾಟೀಲ್ ಅವ​ರನ್ನು ಕೂಡಾ ಶೀಘ್ರವೇ ಬಂಧಿಸುತ್ತೇವೆ. ಆರ್​ಡಿಪಿ ಇರುವ ಸ್ಥಳದ ಮಾಹಿತಿ ಸಿಕ್ಕಿದೆ ಕೂಡಲೇ ಬಂಧಿಸಲಾಗುವುದು. ಪೊಲೀಸ್​ ಅಧಿಕಾರಿಗಳು ಆರೋಪಿ ಬಂಧನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದರೂ ಆರ್.ಡಿ. ಪಾಟೀಲ್ ತಪ್ಪಿಸಿಕೊಂಡಿದ್ದಾರೆ. ಅಧಿಕಾರಿಗಳ ಪಾತ್ರ ಇದ್ದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

“ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಪ್ರಥಮ ಬಾರಿಗೆ ಇಷ್ಟು ಬಿಗಿ ಭದ್ರತೆ ನಡುವೆ ಪ್ರಾಮಾಣಿಕ ಪರೀಕ್ಷೆ ನಡೆಸಿದ್ದೇವೆ. ಹ್ಯಾಂಡ್​ ವೈಡ್​ ಡಿವೈಸರ್ ಅಳವಡಿಕೆ, 800 ಮೀಟರ್​ನಲ್ಲಿನ ಲಾಡ್ಜ್​ಗಳ ಪರಿಶೀಲನೆ. ವಾಹನ ಪಾರ್ಕಿಂಗ್​ ತಪಾಸಣೆ ಸೇರಿ ಹತ್ತು ಹಲವಾರು ಮುಂಜಾಗ್ರತಾ ಕ್ರಮ ಜರುಗಿಸಿದ್ದು, ಇದೆ ಪ್ರಥಮ ಬಾರಿ. ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ಅಕ್ರಮ ನಡೆದಾಗ ಸದನದಲ್ಲಿ ಅಕ್ರಮ ನಡೆದಿಲ್ಲ ಎಂದರು. ಮುಖ್ಯಮಂತ್ರಿ ಗೃಹಮಂತ್ರಿಗಳಿಗೆ ಭೇಟಿಯಾಗಲು ಅಭ್ಯರ್ಥಿಗಳು ಚಪ್ಪಲಿ ಹರಿದುಕೊಂಡು ಸುಸ್ತಾದ ಬಳಿಕ, ಏಳು ತಿಂಗಳ ನಂತರ ಅಕ್ರಮದ ಬಗ್ಗೆ ಒಪ್ಪಿಕೊಂಡರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನಾವು ಕೇವಲ 24 ತಾಸಿನಲ್ಲಿ ಆರೋಪಿಗಳನ್ನು ಬಂಧನ ಮಾಡಿದ್ದೇವೆ. ಮುಂಜಾಗ್ರತಾ ಕ್ರಮ ಜರುಗಿಸಿ ಸುಮ್ಮನೆ ಕುಳಿತಿಲ್ಲ, ಅಕ್ರಮ ನಡೆದಾಗ ಶೀಘ್ರವೇ ಕ್ರಮ ಕೈಗೊಂಡು ಅಕ್ರಮದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸುತ್ತೇವೆ. ಅಕ್ರಮದ ಕುರಿತಾಗಿ ಸಿಎಂ ಹೋಂ ಮಿನಿಸ್ಟರ್ ಎಲ್ಲರೂ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅವರಂತೆ ಮೈಮೇಲೆ ಎಣ್ಣೆ ಹಾಕಿಕೊಂಡು ಕುಳಿತಿಲ್ಲ. ನಮ್ಮ ಜವಾಬ್ದಾರಿ ನಾವು ನಿಭಾಯಿಸುತ್ತಿದ್ದೇವೆ. ಏನಾದರೂ ಮಾಹಿತಿ ಇದ್ದರೆ ಕೊಡಲಿ. ಅದನ್ನು ಬಿಟ್ಟು ಬಿಜೆಪಿ ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ‌ ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...