ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

Date:

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಆಯೋಜಿಸಲಾದ 2025–26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತರಾಫೈಲ್‌ನಲ್ಲಿ ಶನಿವಾರ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಚಾರ್ಯರಾದ ರಾಘವೇಂದ್ರ ಪಿ ಆರ್ ಮಾತನಾಡಿ, ‘ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸ್ವಚ್ಛತೆ, ಭದ್ರತೆ ಹಾಗೂ ತಾಳ್ಮೆ ಸೇರಿದಂತೆ ಹಲವು ಮೌಲ್ಯಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿವೆ ಎಂದು ಹೇಳಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ, ನಾಯಕತ್ವ ಗುಣಗಳ ಅಭಿವೃದ್ಧಿ ಹಾಗೂ ಸಮಾಜಮುಖಿ ಸೇವಾ ಮನೋಭಾವ ರೂಪಿಸುವಲ್ಲಿ ಇಂತಹ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ’ ಎಂದು ತಿಳಿಸಿದರು.

1586969

‘ಪರಿಸರ ಸಂರಕ್ಷಣೆಯ ಮಹತ್ವವನ್ನು ಯುವಪೀಳಿಗೆಗೆ ತಿಳಿಸುವುದು, ಸಮಾಜ ಸೇವೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ವಿಶೇಷ ಶಿಬಿರಗಳು ಸಹಾಯಕವಾಗುತ್ತವೆ ಎಂದರು. ಸಮಾಜದ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಅರಿವು ಹೊಂದಿ, ಅವುಗಳ ಪರಿಹಾರಕ್ಕೆ ಕೈಜೋಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1586970

ಸಮಾರೋಪ ಸಮಾರಂಭದ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿಬಿರದ ಅವಧಿಯಲ್ಲಿ ಯುವಜನರ ಆರೋಗ್ಯ ಸಮಾಲೋಚನೆ, ಸಾಮಾಜಿಕ ಜವಾಬ್ದಾರಿಗಳ ಅರಿವು, ಸಸಿ ನೆಡುವುದು ಮತ್ತು ಪೋಷಣೆ, ಮತದಾನದ ಮಹತ್ವ, ಡಿಜಿಟಲ್ ಶಿಕ್ಷಣ ಹಾಗೂ ಸೈಬರ್ ಅಪರಾಧ ಕುರಿತು ಜಾಗೃತಿ, ನಾಗರಿಕರ ಪತ್ರಕರ್ತರ ತರಬೇತಿ, ಶಿಬಿರಾರ್ಥಿಗಳ ಮಾನಸಿಕ ಆರೋಗ್ಯ, ಸಂವಹನ ಕೌಶಲ್ಯ ಹಾಗೂ ಸೇವಾ ಮನೋಭಾವ ಬೆಳೆಸುವ ಕುರಿತು ವಿವಿಧ ಉಪನ್ಯಾಸಗಳು ಮತ್ತು ಕಾರ್ಯಾಗಾರಗಳನ್ನು ನಡೆಸಲಾಯಿತು.

1586968

ಇದರ ಜೊತೆಗೆ ಸ್ವಚ್ಛತಾ ಅಭಿಯಾನ, ಪರಿಸರ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಮಾಜ ಸೇವಾ ಚಟುವಟಿಕೆಗಳನ್ನು ಸಹ ಶಿಬಿರದ ಅಂಗವಾಗಿ ಆಯೋಜಿಸಲಾಯಿತು. ಆರು ದಿನಗಳ ಕಾಲ ನಡೆದ ಈ ಶಿಬಿರದ ಅನುಭವಗಳನ್ನು ಶಿಬಿರಾರ್ಥಿಗಳು ಸಮಾರೋಪ ಸಮಾರಂಭದಲ್ಲಿ ಹಂಚಿಕೊಂಡರು.

1586972

ಇದನ್ನು ಓದಿದ್ದೀರಾ? ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಈ ಸಂದರ್ಭದಲ್ಲಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಕುಲಸಚಿವರಾದ ಶರಣಬಸಪ್ಪ ಹಾಲ್ವಿ, ಕಾಲೇಜಿನ ಹಿರಿಯ ಎನ್‌ಎಸ್‌ಎಸ್ ಅಧಿಕಾರಿ ಹಾಗೂ ಶ್ರೇಣಿ ಉಪನ್ಯಾಸಕಿ ಆರೀಫಾ ಖಾತೂನ್, ಈದಿನ.ಕಾಮ್ ಜಿಲ್ಲಾ ವರದಿಗಾರರಾದ ಗೀತಾ ಹೊಸಮನಿ, ದೇವರಾಜ್ ಕನ್ನಡಿಗ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...