ಕಲಬುರಗಿ | ಕರ್ನಾಟಕ ಬಜೆಟ್ 2026–27: ಕಲ್ಯಾಣ, ಅಭಿವೃದ್ಧಿ ಮತ್ತು ಪ್ರಾದೇಶಿಕ ಸಮತೋಲನದತ್ತ ಹೆಜ್ಜೆ; ಡಾ. ಸಿದ್ದಾರ್ಥ್ ಮದನಕರ್

Date:

ರಾಜ್ಯ ಸರ್ಕಾರವು ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಕಲ್ಯಾಣ ಯೋಜನೆಗಳನ್ನು ಮುಂದುವರಿಸುತ್ತಲೇ ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡಿರುವ ಮಹತ್ವದ ಬಜೆಟ್ ಆಗಿದೆ ಎಂದು ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ, ಕಲಬುರಗಿಯ ಡಾ. ಸಿದ್ದಾರ್ಥ್ ಮದನಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಸುಮಾರು ₹4.48 ಲಕ್ಷ ಕೋಟಿ ಮೊತ್ತದ ಈ ಬಜೆಟ್ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿದ್ದು, “11ಜಿ ಮಾದರಿ”ಯ ಮೂಲಕ ಗ್ರಾಮೀಣ ಕೃಷಿಯಿಂದ ಜಾಗತಿಕ ವ್ಯಾಪಾರ, ಹಸಿರು ಇಂಧನ ಮತ್ತು ನಗರೀಕರಣದವರೆಗೆ ಬಹುಮುಖಿ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡಿದೆ’ ಎಂದು ಹೇಳಿದ್ದಾರೆ.

‘ಕಲ್ಯಾಣ ಯೋಜನೆಗಳಿಗೆ ಸರ್ಕಾರ ಮುಂದುವರಿದ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಮತ್ತು ಶಕ್ತಿ ಯೋಜನೆಗೆ ₹5,300 ಕೋಟಿ ಮೀಸಲಿಡಲಾಗಿದ್ದು, ಮಹಿಳಾ ಸಬಲೀಕರಣಕ್ಕೆ ಈ ಯೋಜನೆಗಳು ನೆರವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸುಗ್ಗಿ ನಂತರದ ನಿರ್ವಹಣೆಗೆ ಒತ್ತು ನೀಡುವ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ, ಸಿರಿಧಾನ್ಯಗಳ ಪ್ರೋತ್ಸಾಹ, ರೈತರಿಗೆ ಸುಲಭ ಸಾಲ, ಬೆಳೆ ವಿಮೆ ಮತ್ತು ಉಚಿತ ವಿದ್ಯುತ್ ಯೋಜನೆಗಳ ಮೂಲಕ ಕೃಷಿ ಕ್ಷೇತ್ರವನ್ನು ಬಲಪಡಿಸುವ ಪ್ರಯತ್ನ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೂಲಸೌಕರ್ಯ ಅಭಿವೃದ್ಧಿಯ ಭಾಗವಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗಗಳು ಹಾಗೂ ವೈಟ್ ಟಾಪಿಂಗ್ ರಸ್ತೆಗಳಿಗೆ ಆದ್ಯತೆ ನೀಡಲಾಗಿದೆ. ಜೊತೆಗೆ ಧಾರವಾಡ ಕೈಗಾರಿಕಾ ನೋಡ್ ಹಾಗೂ ಮೈಸೂರು ಎರಡನೇ ಐಟಿ ಸಿಟಿ ಅಭಿವೃದ್ಧಿಯಂತಹ ಯೋಜನೆಗಳ ಮೂಲಕ ರಾಜ್ಯದ ಇತರೆ ನಗರಗಳ ಅಭಿವೃದ್ಧಿಗೂ ಒತ್ತು ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪ್ರೊ. ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ₹4,291 ಕೋಟಿ ಮೀಸಲಿಡಲಾಗಿದ್ದು, ಇದರಿಂದ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಸಹಕಾರಿಯಾಗುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದ್ದಾರೆ.

‘ಆದರೆ ಜಿಎಸ್ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯಕ್ಕೆ ಸುಮಾರು ₹10,000 ಕೋಟಿ ನಷ್ಟವಾಗಿರುವುದು ಹಾಗೂ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ರೈತನ ಹೊಲದಲ್ಲಿ ಆಕಸ್ಮಿಕ ಬೆಂಕಿ: ಸ್ಪಿಂಕ್ಲರ್ ಪೈಪ್‌ಗಳು ಬೆಂಕಿಗಾಹುತಿ

‘2026–27ನೇ ಸಾಲಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಆದರೆ ಕಲಬುರಗಿ ಜಿಲ್ಲೆಗೆ ನೇರವಾಗಿ ಯಾವುದೇ ದೊಡ್ಡ ಘೋಷಣೆಗಳಿಲ್ಲ. ಆದರೂ ರಾಜ್ಯಮಟ್ಟದ ವಿವಿಧ ಯೋಜನೆಗಳ ಲಾಭ ಜಿಲ್ಲೆಗೆ ಸಿಗುವ ಸಾಧ್ಯತೆಯಿದೆ ಎಂದು ಅವರು ಪ್ರಕಟಣೆಯಲ್ಲಿ’ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...