ಕಲಬುರಗಿ | ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದ ಶಿಕ್ಷಕರ ವಸತಿ ಗೃಹಗಳು

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದಿದೆ. ಅಲ್ಲದೆ, ಜೂಜು, ಕುಡಿತ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸುಸಜ್ಜಿತ ಕಟ್ಟಡವೊಂದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಶಿಕ್ಷಕರಿಗೋಸ್ಕರ ಸರ್ಕಾರ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಈ ಕಟ್ಟಡಗಳನ್ನ ನಿರ್ಮಿಸಿದೆ. ಆದರೆ, ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಈ ರೀತಿ ಉದ್ಘಾಟನೆಯಾಗಾದೆ ಅನಾಥವಾಗಿ ಬಿದ್ದಿರೋದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ.

ವಸತಿ ಗೃಹವು ಸರ್ಕಾರಿ ಶಾಲೆಯ ಶಿಕ್ಷಕರ ಕುಟುಂಬಗಳು ವಾಸಿಸಲು ಅವಕಾಶ ಕಲ್ಲಿಸುವ ಸದುದ್ದೇಶದಿಂದ ಈ ಕಟ್ಟಡ ನಿರ್ಮಿಸಲಾಗಿತ್ತು. ಇಲ್ಲಿ ವಾಸಿಸಲು ಎಲ್ಲ ರೀತಿಯ ಮೂಲಭೂತ ಸೌಕರ್ಯವನ್ನು ಸಹ ಒದಗಿಸಲಾಗಿದೆ. ಡಬಲ್ ಬೆಡ್​ ರೂಮ್, ಅಡುಗೆ ಕೋಣೆ, ಹಾಲ್, ಶೌಚಾಲಯ ಹೀಗೆ, ವ್ಯವಸ್ಥಿತವಾಗಿ ಮನೆಗಳನ್ನು ನಿರ್ಮಿಸಲಾಗಿದ್ದರೂ ಉದ್ಘಾಟನೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಗೆ ವರ್ಗಾವಣೆಯಾಗಿ ಬರುವ ಸರ್ಕಾರಿ ನೌಕರರು ಬಾಡಿಗೆ ಮನೆಗಳಲ್ಲೇ ವಾಸಿಸಬೇಕಾದಂತಹ ಸ್ಥಿತಿ ಎದುರಾಗಿದೆ. ಪ್ರತಿ ತಿಂಗಳು ಮೂರು-ನಾಲ್ಕು ಸಾವಿರ ರೂಪಾಯಿ ಬಾಡಿಗೆ ಪಾವತಿಸಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಜೀವನ ನಡೆಸುತ್ತಿದ್ದಾರೆ. ಸರ್ಕಾರದಿಂದ ವಸತಿ ಗೃಹದ ಸೌಲಭ್ಯ ಇದ್ದರು

ಬಾಡಿಗೆ ಮನೆಗಳಲ್ಲಿ ವಾಸಿಸುವ ಸ್ಥಿತಿ ಇದೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೆ ವಸತಿ ಗೃಹ ಕಣ್ಣೆದುರೇ ಇದ್ದರು ಉಪಯೋಗಕ್ಕೆ ಬಾರದೇ ಇರುವುದು ವಿಷಾದನೀಯ. ಶಿಕ್ಷಣ ಕೊಡುವ ಶಿಕ್ಷಕರ ವಸತಿ ಗೃಹವನ್ನು ಕಿಡಿಗೇಡಿಗಳು ಕುಡಿದ ಅಮಲಿನಲ್ಲಿ ಕಟ್ಟಡದ ಕಿಟಕಿ ಬಾಗಿಲು ಮುರಿದು ಹಾಕಿದ್ದಾರೆ. ಅಲ್ಲದೆ ಜೂಜು ಅಡ್ಡೆ ಮಾಡಿಕೊಂಡಿದ್ದು ಅನೈತಿಕ ಚಟುವಟಿಕೆ ನಡೆಸಲು ಸರ್ಕಾರವೆ ಎಡೆ ಮಾಡಿಕೊಟ್ಟತ್ತಾಗಿದೆ. ಎರಡು ಅಂತಸ್ಥಿನ ಈ ಕಟ್ಟದ ಸೂಕ್ತ ನಿರ್ವಹಣೆ ಇಲ್ಲದೆ ಗಿಡ-ಗಂಟಿ ಬೆಳೆದು ಹಾಳು ಕೊಂಪೆಯಂತ್ತಾಗಿದೆ.

ಶಿಕ್ಷಕರ ವಸತಿ ಗೃಹ ಸಂಪೂರ್ಣ ಈ ರೀತಿ ಉದ್ಘಾಟನೆ ಮುನ್ನಾ ಪಾಳು ಬಿದಿರುವುದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ದಿವ್ಯ ನಿರ್ಲಕ್ಷವಾಗಿದೆ ಕೂಡಲೇ ಇದನ್ನ ದುರಸ್ಥಿಪಡಿಸುವ ಮೂಲಕ ಶಿಕ್ಷಕರಿಗೆ ವಾಸಿಸಲು ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕಿದೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಶಿಕ್ಷಕರ ವಸತಿ ಗೃಹಗಳು ಶಿಕ್ಷಕರಿಗೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳತ್ತಾರಾ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...